AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fish Oil Benefits: ಮೀನಿನ ಎಣ್ಣೆಯ ಸೇವನೆಯಿಂದ ಲಭಿಸುತ್ತೆ ಹಲವು ಆರೋಗ್ಯ ಪ್ರಯೋಜನ

ಮೀನಿನ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ದೇಹದಲ್ಲಿ ಒಮೆಗಾ-3 ಕೊಬ್ಬಿನಾಮ್ಲದ ಕೊರತೆಯನ್ನು ಸರಿದೂಗಿಸಲು ನೀವು ಮೀನಿನ ಎಣ್ಣೆಯನ್ನು ಬಳಸಬಹುದು. ಇವುಗಳು ಕ್ಯಾಪ್ಸುಲ್ ರೂಪದಲ್ಲಿ ಲಭ್ಯವಿದ್ದು, ಇದರ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. 

Fish Oil Benefits: ಮೀನಿನ ಎಣ್ಣೆಯ ಸೇವನೆಯಿಂದ ಲಭಿಸುತ್ತೆ ಹಲವು ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Sep 28, 2023 | 3:13 PM

Share

ಮೀನು (Fish Oil) ತಿನ್ನುವುದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೀನಿನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಕ್ಯಾಲ್ಸಿಯಂ, ಕಬ್ಬಿಣ,  ವಿಟಮಿನ್ ಡಿ ಯಂತಹ ಅನೇಕ ಪೋಷಕಾಂಶಗಳಿವೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಆದರೆ ಕೆಲವು ಜನರು ಮಾಂಸಹಾರವನ್ನು ತಿನ್ನಲು ಇಷ್ಟಪಡುವುದಿಲ್ಲ. ಹಾಗಿರುವಾಗ ಒಮೆಗಾ-3 ಕೊಬ್ಬಿನಾಮ್ಲಗಳ ಕೊರತೆಯನ್ನು ನೀಗಿಸಲು ಮೀನಿನ ಎಣ್ಣೆಯನ್ನು ಆಹಾರದ ಭಾಗವನ್ನಾಗಿ ಮಾಡಬಹುದು. ಇವುಗಳು ಕ್ಯಾಪ್ಸುಲ್ ರೂಪದಲ್ಲಿ ಲಭ್ಯವಿದ್ದು, ಇದರ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಮೀನಿನ ಎಣ್ಣೆಯ ಪ್ರಯೋಜನಗಳು:

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:

ಮೀನಿನ ಎಣ್ಣೆಯನ್ನು  ಮೀನಿನ ಅಂಗಾಂಶಗಳಿಂದ ಹೊರತೆಗೆಯಲಾಗುತ್ತದೆ. ಇದು ಒಮೆಗಾ 3 ಮತ್ತು ಇತರೆ ಕೊಬ್ಬಿನಾಮ್ಲಗಳ ಜೊತೆಗೆ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ. ಮೀನಿನ ಎಣ್ಣೆ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಾಗುತ್ತದೆ. ಈ ಎಣ್ಣೆಯ ಸಹಾಯದಿಂದ ದೇಹದಲ್ಲಿನ ಹೃದಯರಕ್ತನಾಳಗಳ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಮೀನಿನ ಎಣ್ಣೆಯ ಸೇವನೆಯು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ  ಮತ್ತು ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಕಡಿಮೆ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸಲು ಸಹಕಾರಿ:

ಮೀನಿನ ಎಣ್ಣೆಯು ಮೂಳೆಗಳನ್ನು ಬಲಪಡಿಸುತ್ತದೆ  ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ನಿಯಮಿತ ಸೇವನೆಯು ಸಂಧಿವಾತದಂತಹ ಕಾಯಿಲೆಗಳಿಂದ ಪರಿಹಾರವನ್ನು ನೀಡುತ್ತದೆ .

ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿ:

ಇನ್ಸುಲಿನ್ ಸಂವೇದನೆಯನ್ನು  ಹೆಚ್ಚಿಸುವ ಮೂಲಕ ಮಧುಮೇಹದಿಂದ ಉಪಶಮನ ನೀಡುವ ಗುಣ ಮೀನಿನ ಎಣ್ಣೆಯಲ್ಲಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಟೈಪ್ 2 ಮಧುಮೇಹದಿಂದ ಬಳಲುತ್ತಿರುವ ರೋಗಿಗಳಿಗೆ ಮೀನಿನ ಎಣ್ಣೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮತ್ತು ಇದರ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ:

ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಮೀನಿನ ಎಣ್ಣೆ ಸಹ ಸಹಾಯ ಮಾಡುತ್ತದೆ. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಶೀತ ಮತ್ತು ಜ್ವರ ಬಾರದಂತೆ ತಡೆಯುತ್ತದೆ. ಅಲ್ಲದೆ ಇದು ಶ್ವಾಸಕೋಶವನ್ನು ಆರೋಗ್ಯಕರವಾಗಿಡಲು ಸಹ ಸಹಕಾರಿಯಾಗಿದೆ.

ಇದನ್ನೂ ಓದಿ: ಅತಿಯಾದ ಮೀನು ಸೇವನೆ ಕರುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಕಾರಿ:

ಮೀನಿನ ಎಣ್ಣೆಯು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ. ಇದರಲ್ಲಿ  ಕಂಡುಬರುವ ಐಕೋಸಾಪೆಂಟೆನೊಯಿಕ್ ಆಮ್ಲ (ಇಪಿಎ) ಮತ್ತು ಡೊಕೊಸಾಹೆಕ್ಸೆನೊಯಿಕ್ ಆಸಿಡ್ (ಡಿ.ಹೆಚ್.ಎ)  ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ರೋಗವನ್ನು ತಡೆಗಟ್ಟುವಲ್ಲಿ ಸಹಕಾರಿ:

ಮೀನಿನ ಎಣೆಯನ್ನು ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು  ಪರಿಗಣಿಸಲಾಗಿದೆ. ಇದರಲ್ಲಿ ಕಂಡುಬರುವ ಒಮೆಗಾ 3 ಕೊಬ್ಬಿನಾಮಮ್ಲಗಳು  ದೇಹದಲ್ಲಿನ ಸಾಮಾನ್ಯ ಜೀವಕೋಶಗಳ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯಿಂದ  ಸ್ತನ ಕ್ಯಾನ್ಸರ್, ಪ್ರಾಸ್ಟೇಟ್ ಮತ್ತು ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಯಿಂದ ರಕ್ಷಣೆಯನ್ನು ಪಡೆಯಬಹುದು.

ಗರ್ಭಿಣಿಯರಿಗೆ ಪ್ರಯೋಜನಕಾರಿ:

ಗರ್ಭಿಣಿಯರಿಗೆ ಮೀನಿನ ಎಣ್ಣೆಯನ್ನು ಬಳಸಲು ಸಲಹೆ ನೀಡಲಾಗುತ್ತದೆ.  ಮೀನಿನ ಎಣ್ಣೆಯು ಗರ್ಭಿಣಿ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ.  ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಗರ್ಭದಲ್ಲಿನ ಮಗುವಿನ ಬೆಳವಣಿಗೆಗೆ ತುಂಬಾ ಒಳ್ಳೆಯದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ