AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಕೊತ್ತಂಬರಿ ಸೊಪ್ಪು ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಕ್ಸ್

ಅಡುಗೆಯ ರುಚಿ ಹಾಗೂ ಘಮವನ್ನು ಹೆಚ್ಚಿಸಲು ಕೊತ್ತಂಬರಿ ಸೊಪ್ಪನ್ನು ಬಳಸುತ್ತೇವೆ. ಈ ಸೊಪ್ಪಿನಲ್ಲಿ ಖನಿಜಗಳು, ಥಿಯಮೈನ್, ವಿಟಮಿನ್ ಸಿಯಂತಹ ವಿಟಮಿನ್‍ಗಳು, ರೈಬೊಫ್ಲವಿನ್, ರಂಜಕ, ಕ್ಯಾಲ್ಸಿಯಂ, ಪ್ರೊಟೀನ್, ಕೊಬ್ಬು, ನಾರು ಮತ್ತು ನೀರಿನ ಅಂಶವು ಹೇರಳವಾಗಿದೆ. ಆದರೆ ಮಾರುಕಟ್ಟೆಯಲ್ಲಿ ತಂದ ಈ ಸೊಪ್ಪನ್ನು ಸರಿಯಾಗಿ ಶೇಖರಿಸದೇ ಹೋದರೆ ಬೇಗನೇ ಹಾಳಾಗುತ್ತದೆ. ಆದರೆ ಈ ಕೊತ್ತಂಬರಿ ಸೊಪ್ಪನ್ನು ತಾಜಾವಾಗಿ ಸಂಗ್ರಹಿಸಿಡಲು ಈ ಟ್ರಿಕ್ ಪಾಲಿಸಬಹುದು.

Kitchen Tips in Kannada : ಕೊತ್ತಂಬರಿ ಸೊಪ್ಪು ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಕ್ಸ್
ಸಾಯಿನಂದಾ
| Edited By: |

Updated on: May 15, 2024 | 3:38 PM

Share

ಘಮ್ ಎನ್ನುವ ಕೊತ್ತಂಬರಿ ಸೊಪ್ಪಿನಲ್ಲಿ ರುಚಿ ಮಾತ್ರವಲ್ಲದೇ ಆರೋಗ್ಯಕಾರಿ ಲಾಭಗಳು ಹಲವಾರಿವೆ. ನಾನಾ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಕೊತ್ತಂಬರಿ ಸೊಪ್ಪನ್ನು ಸರಿಯಾಗಿ ಶೇಖರಿಸಿ ಇಡದೇ ಹೋದರೆ ಬೇಗನೇ ಕೆಡುತ್ತವೆ . ಮಾರುಕಟ್ಟೆಯಿಂದ ತಂದ ಈ ಸೊಪ್ಪನ್ನು ಹಾಗೆಯೇ ಇಟ್ಟು ಬಿಟ್ಟರೆ ಕಸದ ಡಬ್ಬಿಗೆ ಹಾಕಬೇಕಾಗುತ್ತದೆ. ಹೀಗಾಗಿ ಸರಳ ವಿಧಾನಗಳ ಮೂಲಕ ಕೊತ್ತಂಬರಿ ಸೊಪ್ಪನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದು.

ಕೊತ್ತಂಬರಿ ಸೊಪ್ಪನ್ನು ಶೇಖರಿಸಿಡಲು ಈ ಟಿಕ್ಸ್ ಬಳಸಿ:

* ಕೊತ್ತಂಬರಿ ಸೊಪ್ಪನ್ನು ತೊಳೆದು, ಒಂದು ಲೋಟದಲ್ಲಿ ನೀರು ತುಂಬಿಸಿ ಅದರಲ್ಲಿ ತಂದ ಕೊತ್ತಂಬರಿ ಸೊಪ್ಪನ್ನು ಇಡುವುದು ಒಳ್ಳೆಯದು. ಆದರೆ ಎರಡು ಮೂರು ದಿನಕ್ಕೊಮ್ಮೆ ನೀರು ಬದಲಾಯಿಸುವ ಮೂಲಕ ಕೊತ್ತಂಬರಿ ಸೊಪ್ಪು ಹಾಳಾಗದಂತೆ ನೋಡಿಕೊಳ್ಳಬಹುದು.

* ಕೊತ್ತಂಬರಿ ಸೊಪ್ಪನ್ನು ತಂದ ಕೂಡಲೇ ತೊಳೆದು ಬೇರುಗಳನ್ನು ಕತ್ತರಿಸಿ, ನೀರನ್ನು ಆರಲು ಬಿಡಬೇಕು. ಆ ಬಳಿಕ ಝಿಪ್‌ಲಾಕ್‌ ಬ್ಯಾಕ್‌ನಲ್ಲಿ ಹಾಕಿ ಫ್ರಿಡ್ಜ್‌ನಲ್ಲಿಟ್ಟರೆ ಬೇಗನೇ ಕೊಳೆಯುವುದಿಲ್ಲ.

* ಕೊತ್ತಂಬರಿ ಸೊಪ್ಪನ್ನು ಕ್ಲೀನ್‌ ಮಾಡಿ, ಸ್ವಚ್ಛ ಪ್ಲಾಸ್ಟಿಕ್‌ ಡಬ್ಬದಲ್ಲಿ ಶೇಖರಿಸಿ ಇಡುವುದು ಉತ್ತಮವಾದ ವಿಧಾನವಾಗಿದೆ. ಆದರೆ ಈ ಡಬ್ಬಿಗಳ ಮೇಲೆ ಬಟ್ಟೆಯನ್ನು ಮುಚ್ಚಿ, ಆ ಬಳಿಕ ಮುಚ್ಚಳ ಹಾಕಿ ಫ್ರಿಡ್ಜ್‌ನಲ್ಲಿಟ್ಟರೆ ಸೊಪ್ಪು ಬೇಗನೇ ಒಣಗಿ ಹೋಗುವುದಿಲ್ಲ.

ಇದನ್ನೂ ಓದಿ: ಟಾಯ್ಲೆಟ್​​ನಲ್ಲಿ ಎರಡು ಫ್ಲಶ್ ಬಟನ್‌ಗಳು ಏಕೆ ಇರುತ್ತವೆ ಎಂದು ತಿಳಿದಿದೆಯೇ?

* ಕೊತ್ತಂಬರಿ ಸೊಪ್ಪನ್ನು ತೊಳೆದು ನೀರು ಆರಿದ ಬಳಿಕ ಕತ್ತರಿಸಿಟ್ಟು ಗಾಳಿಯಾಡದ ಪ್ಲಾಸ್ಟಿಕ್‌ ಡಬ್ಬದಲ್ಲಿ ಹಾಕಿಡಬಹುದು.

* ಕೊತ್ತಂಬರಿ ಸೊಪ್ಪನ್ನು ತೊಳೆದು ಬೇರನ್ನು ಕತ್ತರಿಸಿ ಪೇಪರ್‌ನಲ್ಲಿ ಸುತ್ತಿ ಅದನ್ನು ಫ್ರಿಡ್ಜ್‌ನಲ್ಲಿಟ್ಟರೆ ಅದು ಒಂದು ವಾರದವರೆಗೆ ಫ್ರೆಶ್ ಆಗಿರುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್