AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಗ್ಲಾಸ್​​​ ಜೀರಿಗೆ ನೀರಿನಿಂದ 4 ಸಮಸ್ಯೆಗೆ ರಾಮಬಾಣ

ಪ್ರತಿದಿನ ಬೆಳಿಗ್ಗೆ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಪ್ರಯೋಜಗಳು ಇದೆ. ಏಕೆಂದರೆ ಇದು ವಿಟಮಿನ್-ಎ, ವಿಟಮಿನ್-ಸಿ, ತಾಮ್ರ, ಮ್ಯಾಂಗನೀಸ್ ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಒದಗಿಸುವಲ್ಲಿ ಸಹಾಯಕವಾಗಿದೆ. ಅದಕ್ಕೆ ಪ್ರತಿದಿನ ಬೆಳಿಗ್ಗೆ ಜೀರಿಗೆ ನೀರು ಕುಡಿದರೆ, ಈ 4 ಆರೋಗ್ಯ ಸಮಸ್ಯೆಗಳು ಮಾಯಾವಾಗುತ್ತದೆ.

ಒಂದು ಗ್ಲಾಸ್​​​ ಜೀರಿಗೆ ನೀರಿನಿಂದ 4 ಸಮಸ್ಯೆಗೆ ರಾಮಬಾಣ
ಜೀರಿಗೆ ನೀರು Image Credit source: pinterest
ಮಾಲಾಶ್ರೀ ಅಂಚನ್​
| Edited By: |

Updated on: May 27, 2025 | 4:59 PM

Share

ಜೀರಿಗೆ ನೀರಿನಲ್ಲಿ ( Cumin Water) ಒಂದು ಅದ್ಭುತ ಶಕ್ತಿ ಇದೆ. ಇದನ್ನು ಸೇವನೆ ಮಾಡುವುದರಿಂದ ಅನೇಕ ರೀತಿಯ ಬದಲಾವಣೆ ಹಾಗೂ ಆರೋಗ್ಯ ಪ್ರಯೋಜನ ಕೂಡ ಇದೆ. ಸಾಮಾನ್ಯವಾಗಿ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಇದನ್ನು ಕೇವಲ ಮಸಾಲೆಯಾಗಿ ಬಳಸುವುದಲ್ಲದೆ, ಕೆಲವೊಂದು ಮನೆಮದ್ದು ಕೂಡ ಆಗಿದೆ. ಜೀರಿಗೆ ಆರೋಗ್ಯದ ಉಗ್ರಾಣ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ವಿಟಮಿನ್-ಎ, ವಿಟಮಿನ್-ಸಿ, ತಾಮ್ರ, ಮ್ಯಾಂಗನೀಸ್ ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಒದಗಿಸುವಲ್ಲಿ ಸಹಾಯಕವಾಗಿದೆ.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಸೇವಿಸಿದರೆ, ಅದು ದೇಹವನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾದರೆ ಯಾವೆಲ್ಲ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಹಾಗೂ ಯಾವೆಲ್ಲ ಆರೋಗ್ಯ ಸಮಸ್ಯೆಗೆ ರಾಮಬಾಣವಾಗಿದೆ ಇಲ್ಲಿದೆ ನೋಡಿ:

ಈ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ:

  • ಬೊಜ್ಜು : ನೀವು ತೂಕದಿಂದ ತೊಂದರೆಗೊಳಗಾಗಿದ್ದರೆ ಮತ್ತು ಅದನ್ನು ಕಡಿಮೆ ಮಾಡಲು ಮನೆಮದ್ದುಗಳನ್ನು ಹುಡುಕುತ್ತಿದ್ದರೆ, ಹೀಗೆ ಮಾಡಿ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಸೇವಿಸಿ. ಜೀರಿಗೆಯಲ್ಲಿರುವ ಗುಣಗಳು ಕ್ಯಾಲೊರಿಗಳನ್ನು ವೇಗವಾಗಿ ಸುಡುತ್ತದೆ.
  • ಜೀರ್ಣಕ್ರಿಯೆ: ಜೀರ್ಣಕ್ರಿಯೆ ಸಮಸ್ಯೆ ಇರುವವರು ಮುಖ್ಯವಾಗಿ ಜೀರಿಗೆ ನೀರನ್ನು ಸೇವಿಸಬೇಕು. ಏಕೆಂದರೆ ಇದು ಹೊಟ್ಟೆಯ ಅನಿಲ, ಸೆಳೆತ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
  • ಚರ್ಮ: ಜೀರಿಗೆ ನೀರಿನಲ್ಲಿ ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ದೇಹದಿಂದ ಹಾನಿಕಾರಕ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸಲು ಮತ್ತು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಜೀರಿಗೆ ನೀರು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಅದು ಮೊಡವೆ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ರೋಗನಿರೋಧಕ ಶಕ್ತಿ: ಜೀರಿಗೆಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಸಮೃದ್ಧವಾಗಿದ್ದು, ಇದು ದೇಹವು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿದರೆ, ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ