AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಗ್ಲಾಸ್​​​ ಜೀರಿಗೆ ನೀರಿನಿಂದ 4 ಸಮಸ್ಯೆಗೆ ರಾಮಬಾಣ

ಪ್ರತಿದಿನ ಬೆಳಿಗ್ಗೆ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಪ್ರಯೋಜಗಳು ಇದೆ. ಏಕೆಂದರೆ ಇದು ವಿಟಮಿನ್-ಎ, ವಿಟಮಿನ್-ಸಿ, ತಾಮ್ರ, ಮ್ಯಾಂಗನೀಸ್ ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಒದಗಿಸುವಲ್ಲಿ ಸಹಾಯಕವಾಗಿದೆ. ಅದಕ್ಕೆ ಪ್ರತಿದಿನ ಬೆಳಿಗ್ಗೆ ಜೀರಿಗೆ ನೀರು ಕುಡಿದರೆ, ಈ 4 ಆರೋಗ್ಯ ಸಮಸ್ಯೆಗಳು ಮಾಯಾವಾಗುತ್ತದೆ.

ಒಂದು ಗ್ಲಾಸ್​​​ ಜೀರಿಗೆ ನೀರಿನಿಂದ 4 ಸಮಸ್ಯೆಗೆ ರಾಮಬಾಣ
ಜೀರಿಗೆ ನೀರು Image Credit source: pinterest
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: May 27, 2025 | 4:59 PM

Share

ಜೀರಿಗೆ ನೀರಿನಲ್ಲಿ ( Cumin Water) ಒಂದು ಅದ್ಭುತ ಶಕ್ತಿ ಇದೆ. ಇದನ್ನು ಸೇವನೆ ಮಾಡುವುದರಿಂದ ಅನೇಕ ರೀತಿಯ ಬದಲಾವಣೆ ಹಾಗೂ ಆರೋಗ್ಯ ಪ್ರಯೋಜನ ಕೂಡ ಇದೆ. ಸಾಮಾನ್ಯವಾಗಿ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಇದನ್ನು ಕೇವಲ ಮಸಾಲೆಯಾಗಿ ಬಳಸುವುದಲ್ಲದೆ, ಕೆಲವೊಂದು ಮನೆಮದ್ದು ಕೂಡ ಆಗಿದೆ. ಜೀರಿಗೆ ಆರೋಗ್ಯದ ಉಗ್ರಾಣ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ವಿಟಮಿನ್-ಎ, ವಿಟಮಿನ್-ಸಿ, ತಾಮ್ರ, ಮ್ಯಾಂಗನೀಸ್ ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಒದಗಿಸುವಲ್ಲಿ ಸಹಾಯಕವಾಗಿದೆ.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಸೇವಿಸಿದರೆ, ಅದು ದೇಹವನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾದರೆ ಯಾವೆಲ್ಲ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಹಾಗೂ ಯಾವೆಲ್ಲ ಆರೋಗ್ಯ ಸಮಸ್ಯೆಗೆ ರಾಮಬಾಣವಾಗಿದೆ ಇಲ್ಲಿದೆ ನೋಡಿ:

ಈ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ:

  • ಬೊಜ್ಜು : ನೀವು ತೂಕದಿಂದ ತೊಂದರೆಗೊಳಗಾಗಿದ್ದರೆ ಮತ್ತು ಅದನ್ನು ಕಡಿಮೆ ಮಾಡಲು ಮನೆಮದ್ದುಗಳನ್ನು ಹುಡುಕುತ್ತಿದ್ದರೆ, ಹೀಗೆ ಮಾಡಿ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಸೇವಿಸಿ. ಜೀರಿಗೆಯಲ್ಲಿರುವ ಗುಣಗಳು ಕ್ಯಾಲೊರಿಗಳನ್ನು ವೇಗವಾಗಿ ಸುಡುತ್ತದೆ.
  • ಜೀರ್ಣಕ್ರಿಯೆ: ಜೀರ್ಣಕ್ರಿಯೆ ಸಮಸ್ಯೆ ಇರುವವರು ಮುಖ್ಯವಾಗಿ ಜೀರಿಗೆ ನೀರನ್ನು ಸೇವಿಸಬೇಕು. ಏಕೆಂದರೆ ಇದು ಹೊಟ್ಟೆಯ ಅನಿಲ, ಸೆಳೆತ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
  • ಚರ್ಮ: ಜೀರಿಗೆ ನೀರಿನಲ್ಲಿ ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ದೇಹದಿಂದ ಹಾನಿಕಾರಕ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸಲು ಮತ್ತು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಜೀರಿಗೆ ನೀರು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಅದು ಮೊಡವೆ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ರೋಗನಿರೋಧಕ ಶಕ್ತಿ: ಜೀರಿಗೆಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಸಮೃದ್ಧವಾಗಿದ್ದು, ಇದು ದೇಹವು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿದರೆ, ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ