AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

karnataka Dasara 2024 : ದಸರಾಕ್ಕೆ ಉತ್ತರ ಕರ್ನಾಟಕದಲ್ಲಿ ತಾಲಿಪಟ್ಟು ತಿನಿಸಿನ ಘಮ, ಇಲ್ಲಿದೆ ರೆಸಿಪಿ

ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಮಾತ್ರ ಅದ್ದೂರಿಯಾಗಿ ಆಚರಿಸುವುದಲ್ಲ. ದೇಶದ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯದೊಂದಿಗೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ದಸರಾ ಹಬ್ಬದಂದು ಮನೆಯಲ್ಲಿ ವಿಶೇಷವಾದ ಖಾದ್ಯಗಳನ್ನು ಮಾಡಲಾಗುತ್ತದೆ. ಆದರೆ ಈ ಹಬ್ಬಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ಸಾಂಪ್ರದಾಯಿಕ ಜೋಳದ ತಾಲಿಪಟ್ಟು ತಿನಿಸನ್ನು ಮಾಡುತ್ತಾರೆ. ಹಾಗಾದ್ರೆ ಈ ಸಾಂಪ್ರಾದಾಯಿಕ ರೆಸಿಪಿಯನ್ನು ಮಾಡುವುದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.

karnataka Dasara 2024 : ದಸರಾಕ್ಕೆ ಉತ್ತರ ಕರ್ನಾಟಕದಲ್ಲಿ ತಾಲಿಪಟ್ಟು ತಿನಿಸಿನ ಘಮ, ಇಲ್ಲಿದೆ ರೆಸಿಪಿ
ತಾಲಿಪಟ್ಟು
ಸಾಯಿನಂದಾ
| Edited By: |

Updated on: Sep 21, 2024 | 12:57 PM

Share

ಉತ್ತರ ಕರ್ನಾಟಕದ ಮಂದಿಯು ಖಾರ ಪ್ರಿಯರಾಗಿದ್ದು, ಖಡಕ್ ಜೋಳದ ರೊಟ್ಟಿಯೊಂದಿಗೆ ಚಟ್ನಿಯೊಂದಿಗೆ ಸಾಕು. ಆದರೆ ಈ ಜೋಳದ ಹಿಟ್ಟಿನಿಂದ ಮಾಡುವ ವಿಶೇಷ ಸಾಂಪ್ರಾದಾಯಿಕ ತಿನಿಸು ತಾಲಿಪಟ್ಟು ಇಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ದಸರಾಕ್ಕೆ ಎಲ್ಲರ ಮನೆಯಲ್ಲಿ ಈ ತಾಲಿಪಟ್ಟು ತಿನಿಸನ್ನು ಮಾಡಿಯೇ ಮಾಡುತ್ತಾರೆ. ರೊಟ್ಟಿಗಿಂತಲೂ ರುಚಿಕರವೂ ಹಾಗೂ ಆರೋಗ್ಯಕ್ಕೂ ಒಳ್ಳೆಯದು ಎನ್ನಬಹುದು. ಮಸಾಲೆ ಮಿಶ್ರಿತ ಈ ತಿನಿಸು ಖಾರ ಖಾರವಾಗಿದ್ದು ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ.

ಜೋಳದ ತಾಲಿಪಟ್ಟು ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ಜೋಳದ ಹಿಟ್ಟು

* 50 ಗ್ರಾಂ ಗೋಧಿ ಹಿಟ್ಟು

* 50 ಗ್ರಾಂ ಕಡಲೆ ಹಿಟ್ಟು

* ಜೀರಿಗೆ

* ಅರಶಿನ

* ಶುಂಠಿ ಬೆಳ್ಳುಳ್ಳಿ ಪೇಸ್ಟ್

* ಅಜೈನಾ

* ಹಸಿಮೆಣಸಿನ ಕಾಯಿ

* ಖಾರದ ಪುಡಿ

* ಈರುಳ್ಳಿ

* ಕೊತ್ತಂಬರಿ ಪುಡಿ

* ಕೊತ್ತಂಬರಿ ಸೊಪ್ಪು

* ಉಪ್ಪು

* ಎಣ್ಣೆ

ಜೋಳದ ತಾಲಿಪಟ್ಟು ಮಾಡುವ ವಿಧಾನ:

* ಒಂದು ಪಾತ್ರೆಗೆ ಜೋಳದ ಹಿಟ್ಟು, ಗೋಧಿ ಹಿಟ್ಟು, ಕಡಲೆ ಹಿಟ್ಟು, ಜೀರಿಗೆ, ಅರಶಿನ, ಅಜೈನಾ, ಉಪ್ಪು, ಹಸಿಮೆಣಸಿನ ಕಾಯಿ, ಖಾರದ ಪುಡಿ, ಈರುಳ್ಳಿ, ಕೊತ್ತಂಬರಿ ಪುಡಿ, ಕೊತ್ತಂಬರಿ ಸೊಪ್ಪು ಹಾಕಿ ಒಮ್ಮೆ ಕಲಸಿಕೊಳ್ಳಿ. * ನಂತರದಲ್ಲಿ ಇದಕ್ಕೆ ಸ್ವಲ್ಪ ಸ್ವಲ್ಪ ನೀರು ಹಾಕಿಕೊಳ್ಳುತ್ತಾ ಚಪಾತಿ ಹಿಟ್ಟಿನ ಹದಕ್ಕೆ ಕಲಿಸಿಕೊಳ್ಳಿ. ಕಲಸಿದ ಬಳಿಕ ಹತ್ತು ನಿಮಿಷ ಹಾಗೆಯೇ ಬಿಡಿ.

* ಇದಾದ ಬಳಿಕ ಹಿಟ್ಟನ್ನು ತೆಗೆದುಕೊಂಡು ಸಣ್ಣ ಸಣ್ಣ ಉಂಡೆಯನ್ನಾಗಿ ಮಾಡಿಕೊಳ್ಳಿ.

* ಬಾಳೆ ಎಲೆಯ ಮೇಲೆ ಎಣ್ಣೆ ಹಚ್ಚಿಕೊಂಡು ಅದರ ಮೇಲೆ ಉಂಡೆಯನ್ನಿಟ್ಟು ಹಿಟ್ಟನ್ನು ತಟ್ಟಿಕೊಳ್ಳಿ.

* ತಟ್ಟಿದ ತಾಲಿಪಟ್ಟನ್ನು ಕಾವಲಿಗೆ ಹಾಕಿ ಎರಡು ಕಡೆ ಕಾಯಿಸಿಕೊಂಡರೆ ಜೋಳದ ತಾಲಿಪಟ್ಟು ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ