AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

karnataka Dasara 2024 : ದಸರಾಕ್ಕೆ ಉತ್ತರ ಕರ್ನಾಟಕದಲ್ಲಿ ತಾಲಿಪಟ್ಟು ತಿನಿಸಿನ ಘಮ, ಇಲ್ಲಿದೆ ರೆಸಿಪಿ

ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಮಾತ್ರ ಅದ್ದೂರಿಯಾಗಿ ಆಚರಿಸುವುದಲ್ಲ. ದೇಶದ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯದೊಂದಿಗೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ದಸರಾ ಹಬ್ಬದಂದು ಮನೆಯಲ್ಲಿ ವಿಶೇಷವಾದ ಖಾದ್ಯಗಳನ್ನು ಮಾಡಲಾಗುತ್ತದೆ. ಆದರೆ ಈ ಹಬ್ಬಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ಸಾಂಪ್ರದಾಯಿಕ ಜೋಳದ ತಾಲಿಪಟ್ಟು ತಿನಿಸನ್ನು ಮಾಡುತ್ತಾರೆ. ಹಾಗಾದ್ರೆ ಈ ಸಾಂಪ್ರಾದಾಯಿಕ ರೆಸಿಪಿಯನ್ನು ಮಾಡುವುದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.

karnataka Dasara 2024 : ದಸರಾಕ್ಕೆ ಉತ್ತರ ಕರ್ನಾಟಕದಲ್ಲಿ ತಾಲಿಪಟ್ಟು ತಿನಿಸಿನ ಘಮ, ಇಲ್ಲಿದೆ ರೆಸಿಪಿ
ತಾಲಿಪಟ್ಟು
ಸಾಯಿನಂದಾ
| Edited By: |

Updated on: Sep 21, 2024 | 12:57 PM

Share

ಉತ್ತರ ಕರ್ನಾಟಕದ ಮಂದಿಯು ಖಾರ ಪ್ರಿಯರಾಗಿದ್ದು, ಖಡಕ್ ಜೋಳದ ರೊಟ್ಟಿಯೊಂದಿಗೆ ಚಟ್ನಿಯೊಂದಿಗೆ ಸಾಕು. ಆದರೆ ಈ ಜೋಳದ ಹಿಟ್ಟಿನಿಂದ ಮಾಡುವ ವಿಶೇಷ ಸಾಂಪ್ರಾದಾಯಿಕ ತಿನಿಸು ತಾಲಿಪಟ್ಟು ಇಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ದಸರಾಕ್ಕೆ ಎಲ್ಲರ ಮನೆಯಲ್ಲಿ ಈ ತಾಲಿಪಟ್ಟು ತಿನಿಸನ್ನು ಮಾಡಿಯೇ ಮಾಡುತ್ತಾರೆ. ರೊಟ್ಟಿಗಿಂತಲೂ ರುಚಿಕರವೂ ಹಾಗೂ ಆರೋಗ್ಯಕ್ಕೂ ಒಳ್ಳೆಯದು ಎನ್ನಬಹುದು. ಮಸಾಲೆ ಮಿಶ್ರಿತ ಈ ತಿನಿಸು ಖಾರ ಖಾರವಾಗಿದ್ದು ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ.

ಜೋಳದ ತಾಲಿಪಟ್ಟು ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ಜೋಳದ ಹಿಟ್ಟು

* 50 ಗ್ರಾಂ ಗೋಧಿ ಹಿಟ್ಟು

* 50 ಗ್ರಾಂ ಕಡಲೆ ಹಿಟ್ಟು

* ಜೀರಿಗೆ

* ಅರಶಿನ

* ಶುಂಠಿ ಬೆಳ್ಳುಳ್ಳಿ ಪೇಸ್ಟ್

* ಅಜೈನಾ

* ಹಸಿಮೆಣಸಿನ ಕಾಯಿ

* ಖಾರದ ಪುಡಿ

* ಈರುಳ್ಳಿ

* ಕೊತ್ತಂಬರಿ ಪುಡಿ

* ಕೊತ್ತಂಬರಿ ಸೊಪ್ಪು

* ಉಪ್ಪು

* ಎಣ್ಣೆ

ಜೋಳದ ತಾಲಿಪಟ್ಟು ಮಾಡುವ ವಿಧಾನ:

* ಒಂದು ಪಾತ್ರೆಗೆ ಜೋಳದ ಹಿಟ್ಟು, ಗೋಧಿ ಹಿಟ್ಟು, ಕಡಲೆ ಹಿಟ್ಟು, ಜೀರಿಗೆ, ಅರಶಿನ, ಅಜೈನಾ, ಉಪ್ಪು, ಹಸಿಮೆಣಸಿನ ಕಾಯಿ, ಖಾರದ ಪುಡಿ, ಈರುಳ್ಳಿ, ಕೊತ್ತಂಬರಿ ಪುಡಿ, ಕೊತ್ತಂಬರಿ ಸೊಪ್ಪು ಹಾಕಿ ಒಮ್ಮೆ ಕಲಸಿಕೊಳ್ಳಿ. * ನಂತರದಲ್ಲಿ ಇದಕ್ಕೆ ಸ್ವಲ್ಪ ಸ್ವಲ್ಪ ನೀರು ಹಾಕಿಕೊಳ್ಳುತ್ತಾ ಚಪಾತಿ ಹಿಟ್ಟಿನ ಹದಕ್ಕೆ ಕಲಿಸಿಕೊಳ್ಳಿ. ಕಲಸಿದ ಬಳಿಕ ಹತ್ತು ನಿಮಿಷ ಹಾಗೆಯೇ ಬಿಡಿ.

* ಇದಾದ ಬಳಿಕ ಹಿಟ್ಟನ್ನು ತೆಗೆದುಕೊಂಡು ಸಣ್ಣ ಸಣ್ಣ ಉಂಡೆಯನ್ನಾಗಿ ಮಾಡಿಕೊಳ್ಳಿ.

* ಬಾಳೆ ಎಲೆಯ ಮೇಲೆ ಎಣ್ಣೆ ಹಚ್ಚಿಕೊಂಡು ಅದರ ಮೇಲೆ ಉಂಡೆಯನ್ನಿಟ್ಟು ಹಿಟ್ಟನ್ನು ತಟ್ಟಿಕೊಳ್ಳಿ.

* ತಟ್ಟಿದ ತಾಲಿಪಟ್ಟನ್ನು ಕಾವಲಿಗೆ ಹಾಕಿ ಎರಡು ಕಡೆ ಕಾಯಿಸಿಕೊಂಡರೆ ಜೋಳದ ತಾಲಿಪಟ್ಟು ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ