AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

karnataka Dasara 2024 : ದಸರಾಕ್ಕೆ ಉತ್ತರ ಕರ್ನಾಟಕದಲ್ಲಿ ತಾಲಿಪಟ್ಟು ತಿನಿಸಿನ ಘಮ, ಇಲ್ಲಿದೆ ರೆಸಿಪಿ

ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಮಾತ್ರ ಅದ್ದೂರಿಯಾಗಿ ಆಚರಿಸುವುದಲ್ಲ. ದೇಶದ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯದೊಂದಿಗೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ದಸರಾ ಹಬ್ಬದಂದು ಮನೆಯಲ್ಲಿ ವಿಶೇಷವಾದ ಖಾದ್ಯಗಳನ್ನು ಮಾಡಲಾಗುತ್ತದೆ. ಆದರೆ ಈ ಹಬ್ಬಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ಸಾಂಪ್ರದಾಯಿಕ ಜೋಳದ ತಾಲಿಪಟ್ಟು ತಿನಿಸನ್ನು ಮಾಡುತ್ತಾರೆ. ಹಾಗಾದ್ರೆ ಈ ಸಾಂಪ್ರಾದಾಯಿಕ ರೆಸಿಪಿಯನ್ನು ಮಾಡುವುದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.

karnataka Dasara 2024 : ದಸರಾಕ್ಕೆ ಉತ್ತರ ಕರ್ನಾಟಕದಲ್ಲಿ ತಾಲಿಪಟ್ಟು ತಿನಿಸಿನ ಘಮ, ಇಲ್ಲಿದೆ ರೆಸಿಪಿ
ತಾಲಿಪಟ್ಟು
ಸಾಯಿನಂದಾ
| Edited By: |

Updated on: Sep 21, 2024 | 12:57 PM

Share

ಉತ್ತರ ಕರ್ನಾಟಕದ ಮಂದಿಯು ಖಾರ ಪ್ರಿಯರಾಗಿದ್ದು, ಖಡಕ್ ಜೋಳದ ರೊಟ್ಟಿಯೊಂದಿಗೆ ಚಟ್ನಿಯೊಂದಿಗೆ ಸಾಕು. ಆದರೆ ಈ ಜೋಳದ ಹಿಟ್ಟಿನಿಂದ ಮಾಡುವ ವಿಶೇಷ ಸಾಂಪ್ರಾದಾಯಿಕ ತಿನಿಸು ತಾಲಿಪಟ್ಟು ಇಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ದಸರಾಕ್ಕೆ ಎಲ್ಲರ ಮನೆಯಲ್ಲಿ ಈ ತಾಲಿಪಟ್ಟು ತಿನಿಸನ್ನು ಮಾಡಿಯೇ ಮಾಡುತ್ತಾರೆ. ರೊಟ್ಟಿಗಿಂತಲೂ ರುಚಿಕರವೂ ಹಾಗೂ ಆರೋಗ್ಯಕ್ಕೂ ಒಳ್ಳೆಯದು ಎನ್ನಬಹುದು. ಮಸಾಲೆ ಮಿಶ್ರಿತ ಈ ತಿನಿಸು ಖಾರ ಖಾರವಾಗಿದ್ದು ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ.

ಜೋಳದ ತಾಲಿಪಟ್ಟು ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ಜೋಳದ ಹಿಟ್ಟು

* 50 ಗ್ರಾಂ ಗೋಧಿ ಹಿಟ್ಟು

* 50 ಗ್ರಾಂ ಕಡಲೆ ಹಿಟ್ಟು

* ಜೀರಿಗೆ

* ಅರಶಿನ

* ಶುಂಠಿ ಬೆಳ್ಳುಳ್ಳಿ ಪೇಸ್ಟ್

* ಅಜೈನಾ

* ಹಸಿಮೆಣಸಿನ ಕಾಯಿ

* ಖಾರದ ಪುಡಿ

* ಈರುಳ್ಳಿ

* ಕೊತ್ತಂಬರಿ ಪುಡಿ

* ಕೊತ್ತಂಬರಿ ಸೊಪ್ಪು

* ಉಪ್ಪು

* ಎಣ್ಣೆ

ಜೋಳದ ತಾಲಿಪಟ್ಟು ಮಾಡುವ ವಿಧಾನ:

* ಒಂದು ಪಾತ್ರೆಗೆ ಜೋಳದ ಹಿಟ್ಟು, ಗೋಧಿ ಹಿಟ್ಟು, ಕಡಲೆ ಹಿಟ್ಟು, ಜೀರಿಗೆ, ಅರಶಿನ, ಅಜೈನಾ, ಉಪ್ಪು, ಹಸಿಮೆಣಸಿನ ಕಾಯಿ, ಖಾರದ ಪುಡಿ, ಈರುಳ್ಳಿ, ಕೊತ್ತಂಬರಿ ಪುಡಿ, ಕೊತ್ತಂಬರಿ ಸೊಪ್ಪು ಹಾಕಿ ಒಮ್ಮೆ ಕಲಸಿಕೊಳ್ಳಿ. * ನಂತರದಲ್ಲಿ ಇದಕ್ಕೆ ಸ್ವಲ್ಪ ಸ್ವಲ್ಪ ನೀರು ಹಾಕಿಕೊಳ್ಳುತ್ತಾ ಚಪಾತಿ ಹಿಟ್ಟಿನ ಹದಕ್ಕೆ ಕಲಿಸಿಕೊಳ್ಳಿ. ಕಲಸಿದ ಬಳಿಕ ಹತ್ತು ನಿಮಿಷ ಹಾಗೆಯೇ ಬಿಡಿ.

* ಇದಾದ ಬಳಿಕ ಹಿಟ್ಟನ್ನು ತೆಗೆದುಕೊಂಡು ಸಣ್ಣ ಸಣ್ಣ ಉಂಡೆಯನ್ನಾಗಿ ಮಾಡಿಕೊಳ್ಳಿ.

* ಬಾಳೆ ಎಲೆಯ ಮೇಲೆ ಎಣ್ಣೆ ಹಚ್ಚಿಕೊಂಡು ಅದರ ಮೇಲೆ ಉಂಡೆಯನ್ನಿಟ್ಟು ಹಿಟ್ಟನ್ನು ತಟ್ಟಿಕೊಳ್ಳಿ.

* ತಟ್ಟಿದ ತಾಲಿಪಟ್ಟನ್ನು ಕಾವಲಿಗೆ ಹಾಕಿ ಎರಡು ಕಡೆ ಕಾಯಿಸಿಕೊಂಡರೆ ಜೋಳದ ತಾಲಿಪಟ್ಟು ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!