Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ

ಹಬ್ಬವೆಂದ ಮೇಲೆ ಸಿಹಿಯಿಲ್ಲ ಎಂದರೆ ಹೇಗೆ ಹೇಳಿ. ಯಾವುದೇ ಹಬ್ಬವಿರಲಿ, ಸಮಾರಂಭವಿರಲಿ ಸಿಹಿಯಂತೂ ಇರಲೇಬೇಕು. ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ. ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿಯ ಸಿಹಿಯಾಡುಗೆಯನ್ನು ಮಾಡುತ್ತಾರೆ. ಉತ್ತರ ಕರ್ನಾಟಕದಲ್ಲಿ ಬೆಳಕಿನ ಹಬ್ಬಕ್ಕೆ ಮಾಡುವ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಬಹಳನೇ ಫೇಮಸ್ ಆಗಿದ್ದು, ಇದು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ನೀಡುತ್ತವೆ. ಮನೆಯಲ್ಲೇ ಈ ಕೆಲವು ಐಟಂಗಳಿದ್ದರೆ ಈ ರೆಸಿಪಿ ಮಾಡೋದು ಸುಲಭ.

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 22, 2024 | 10:55 AM

ದೀಪಾವಳಿಯೂ ಹಿಂದೂಗಳ ಪಾಲಿನ ದೊಡ್ಡ ಹಬ್ಬಗಳಲ್ಲಿ ಒಂದು. ವರ್ಷವಿಡೀ ಕಾಯುವ ದೀಪಾವಳಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ದೂರವಿದೆ. ಹಬ್ಬ ಎಂದ ಮೇಲೆ ಮನೆ ಮಂದಿಯೆಲ್ಲಾ ಸೇರಿ ಮನೆ ಸ್ವಚ್ಛತೆ ಸೇರಿದಂತೆ ಬಗೆ ಬಗೆಯ ತಿನಿಸುಗಳ ತಯಾರಿಯಲ್ಲಿ ಬ್ಯುಸಿಯಾಗಿರುತ್ತದೆ. ಒಬ್ಬೊಬ್ಬರು ಒಂದೊಂದು ಬಗೆಯ ಸಿಹಿ ತಿಂಡಿಗಳನ್ನು ಮಾಡಿ ಸವಿಯುತ್ತಾರೆ. ಆದರೆ ಉತ್ತರ ಕರ್ನಾಟಕದಲ್ಲಿ ಸಾಂಪ್ರದಾಯಿಕ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಫೇಮಸ್ ಆಗಿದೆ. ಹೆಚ್ಚೇನು ಸಮಯ ತೆಗೆದುಕೊಳ್ಳದ ಈ ರೆಸಿಪಿಯನ್ನು ಮಾಡುವ ವಿಧಾನ ಇಲ್ಲಿದೆ.

ಹುರಕ್ಕಿ ಹೋಳಿಗೆ ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ನವಣೆ

* ಕಾಲು ಕಪ್‌ ಕಡ್ಲೆ ಬೇಳೆ

* ಕಾಲು ಕಪ್ ಅಕ್ಕಿ

* ಒಂದು ಕಪ್ ಬೆಲ್ಲ

* ಏಲಕ್ಕಿ ಪುಡಿ

* ಉಪ್ಪು

* ಎಣ್ಣೆ

* ಗೋಧಿ ಹಿಟ್ಟು

* ಮೈದಾ ಹಿಟ್ಟು

* ಸಣ್ಣ ರವೆ

ಹುರಕ್ಕಿ ಹೋಳಿಗೆ ಮಾಡುವ ವಿಧಾನ

* ಮೊದಲಿಗೆ ನವಣೆಯನ್ನು ತೊಳೆದು ನೀರು ಬಸಿದು ನೆರಳಲ್ಲಿ ಒಣಗಿಸಿಕೊಳ್ಳಬೇಕು.

* ತದನಂತರದಲ್ಲಿ ನವಣೆ ಕಡ್ಲೆ ಬೇಳೆ ಮತ್ತು ಅಕ್ಕಿಯನ್ನೂ ಹುರಿದುಕೊಳ್ಳಿ.

* ಈ ಮೂರನ್ನು ಮಿಕ್ಸಿ ಜಾರ್‌ನಲ್ಲಿ ಚೆನ್ನಾಗಿ ಪುಡಿ ಮಾಡಿಕೊಳ್ಳಿ.

* ಆ ಬಳಿಕ ಗೋಧಿ ಹಿಟ್ಟಿಗೆ ಸ್ವಲ್ಪ ಮೈದಾ, ರವೆ, ಉಪ್ಪು ಹಾಗೂ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ಹದಿನೈದು ನಿಮಿಷ ಹಾಗೆಯೇ ಬಿಡಿ.

* ನಂತರದಲ್ಲಿ ಬಾಣಲೆಯಲ್ಲಿ ಬೆಲ್ಲ ಮುಳುಗುವಷ್ಟು ಮಾತ್ರ ನೀರು ಹಾಕಿ ಪಾಕ ಮಾಡಿ ಒಲೆಯಿಂದ ಕೆಳಗಿಳಿಸಿಕೊಳ್ಳಿ.

* ಇದಕ್ಕೆ ಏಲಕ್ಕಿ ಪುಡಿ ಮತ್ತು ನವಣೆ ಮಿಶ್ರಣದ ಹಿಟ್ಟು ಹಾಕಿ ಚೆನ್ನಾಗಿ ಬೆರೆಸಿಕೊಂಡು ಹೂರಣ ಸಿದ್ದ ಮಾಡಿಕೊಳ್ಳಿ

* ನೆನೆದ ಹಿಟ್ಟಿನಿಂದ ಉಂಡೆ ಮಾಡಿ ಅದರಲ್ಲಿ ಹೂರಣ ತುಂಬಿ ಲಟ್ಟಿಸಿ ಎಣ್ಣೆಯಲ್ಲಿ ಕರಿದರೆ ಹುರಕ್ಕಿ ಹೋಳಿಗೆ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ