AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ

ಹಬ್ಬವೆಂದ ಮೇಲೆ ಸಿಹಿಯಿಲ್ಲ ಎಂದರೆ ಹೇಗೆ ಹೇಳಿ. ಯಾವುದೇ ಹಬ್ಬವಿರಲಿ, ಸಮಾರಂಭವಿರಲಿ ಸಿಹಿಯಂತೂ ಇರಲೇಬೇಕು. ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ. ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿಯ ಸಿಹಿಯಾಡುಗೆಯನ್ನು ಮಾಡುತ್ತಾರೆ. ಉತ್ತರ ಕರ್ನಾಟಕದಲ್ಲಿ ಬೆಳಕಿನ ಹಬ್ಬಕ್ಕೆ ಮಾಡುವ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಬಹಳನೇ ಫೇಮಸ್ ಆಗಿದ್ದು, ಇದು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ನೀಡುತ್ತವೆ. ಮನೆಯಲ್ಲೇ ಈ ಕೆಲವು ಐಟಂಗಳಿದ್ದರೆ ಈ ರೆಸಿಪಿ ಮಾಡೋದು ಸುಲಭ.

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ
ಸಾಯಿನಂದಾ
| Edited By: |

Updated on: Oct 22, 2024 | 10:55 AM

Share

ದೀಪಾವಳಿಯೂ ಹಿಂದೂಗಳ ಪಾಲಿನ ದೊಡ್ಡ ಹಬ್ಬಗಳಲ್ಲಿ ಒಂದು. ವರ್ಷವಿಡೀ ಕಾಯುವ ದೀಪಾವಳಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ದೂರವಿದೆ. ಹಬ್ಬ ಎಂದ ಮೇಲೆ ಮನೆ ಮಂದಿಯೆಲ್ಲಾ ಸೇರಿ ಮನೆ ಸ್ವಚ್ಛತೆ ಸೇರಿದಂತೆ ಬಗೆ ಬಗೆಯ ತಿನಿಸುಗಳ ತಯಾರಿಯಲ್ಲಿ ಬ್ಯುಸಿಯಾಗಿರುತ್ತದೆ. ಒಬ್ಬೊಬ್ಬರು ಒಂದೊಂದು ಬಗೆಯ ಸಿಹಿ ತಿಂಡಿಗಳನ್ನು ಮಾಡಿ ಸವಿಯುತ್ತಾರೆ. ಆದರೆ ಉತ್ತರ ಕರ್ನಾಟಕದಲ್ಲಿ ಸಾಂಪ್ರದಾಯಿಕ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಫೇಮಸ್ ಆಗಿದೆ. ಹೆಚ್ಚೇನು ಸಮಯ ತೆಗೆದುಕೊಳ್ಳದ ಈ ರೆಸಿಪಿಯನ್ನು ಮಾಡುವ ವಿಧಾನ ಇಲ್ಲಿದೆ.

ಹುರಕ್ಕಿ ಹೋಳಿಗೆ ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ನವಣೆ

* ಕಾಲು ಕಪ್‌ ಕಡ್ಲೆ ಬೇಳೆ

* ಕಾಲು ಕಪ್ ಅಕ್ಕಿ

* ಒಂದು ಕಪ್ ಬೆಲ್ಲ

* ಏಲಕ್ಕಿ ಪುಡಿ

* ಉಪ್ಪು

* ಎಣ್ಣೆ

* ಗೋಧಿ ಹಿಟ್ಟು

* ಮೈದಾ ಹಿಟ್ಟು

* ಸಣ್ಣ ರವೆ

ಹುರಕ್ಕಿ ಹೋಳಿಗೆ ಮಾಡುವ ವಿಧಾನ

* ಮೊದಲಿಗೆ ನವಣೆಯನ್ನು ತೊಳೆದು ನೀರು ಬಸಿದು ನೆರಳಲ್ಲಿ ಒಣಗಿಸಿಕೊಳ್ಳಬೇಕು.

* ತದನಂತರದಲ್ಲಿ ನವಣೆ ಕಡ್ಲೆ ಬೇಳೆ ಮತ್ತು ಅಕ್ಕಿಯನ್ನೂ ಹುರಿದುಕೊಳ್ಳಿ.

* ಈ ಮೂರನ್ನು ಮಿಕ್ಸಿ ಜಾರ್‌ನಲ್ಲಿ ಚೆನ್ನಾಗಿ ಪುಡಿ ಮಾಡಿಕೊಳ್ಳಿ.

* ಆ ಬಳಿಕ ಗೋಧಿ ಹಿಟ್ಟಿಗೆ ಸ್ವಲ್ಪ ಮೈದಾ, ರವೆ, ಉಪ್ಪು ಹಾಗೂ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ಹದಿನೈದು ನಿಮಿಷ ಹಾಗೆಯೇ ಬಿಡಿ.

* ನಂತರದಲ್ಲಿ ಬಾಣಲೆಯಲ್ಲಿ ಬೆಲ್ಲ ಮುಳುಗುವಷ್ಟು ಮಾತ್ರ ನೀರು ಹಾಕಿ ಪಾಕ ಮಾಡಿ ಒಲೆಯಿಂದ ಕೆಳಗಿಳಿಸಿಕೊಳ್ಳಿ.

* ಇದಕ್ಕೆ ಏಲಕ್ಕಿ ಪುಡಿ ಮತ್ತು ನವಣೆ ಮಿಶ್ರಣದ ಹಿಟ್ಟು ಹಾಕಿ ಚೆನ್ನಾಗಿ ಬೆರೆಸಿಕೊಂಡು ಹೂರಣ ಸಿದ್ದ ಮಾಡಿಕೊಳ್ಳಿ

* ನೆನೆದ ಹಿಟ್ಟಿನಿಂದ ಉಂಡೆ ಮಾಡಿ ಅದರಲ್ಲಿ ಹೂರಣ ತುಂಬಿ ಲಟ್ಟಿಸಿ ಎಣ್ಣೆಯಲ್ಲಿ ಕರಿದರೆ ಹುರಕ್ಕಿ ಹೋಳಿಗೆ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​