AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ

ಹಬ್ಬವೆಂದ ಮೇಲೆ ಸಿಹಿಯಿಲ್ಲ ಎಂದರೆ ಹೇಗೆ ಹೇಳಿ. ಯಾವುದೇ ಹಬ್ಬವಿರಲಿ, ಸಮಾರಂಭವಿರಲಿ ಸಿಹಿಯಂತೂ ಇರಲೇಬೇಕು. ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ. ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿಯ ಸಿಹಿಯಾಡುಗೆಯನ್ನು ಮಾಡುತ್ತಾರೆ. ಉತ್ತರ ಕರ್ನಾಟಕದಲ್ಲಿ ಬೆಳಕಿನ ಹಬ್ಬಕ್ಕೆ ಮಾಡುವ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಬಹಳನೇ ಫೇಮಸ್ ಆಗಿದ್ದು, ಇದು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ನೀಡುತ್ತವೆ. ಮನೆಯಲ್ಲೇ ಈ ಕೆಲವು ಐಟಂಗಳಿದ್ದರೆ ಈ ರೆಸಿಪಿ ಮಾಡೋದು ಸುಲಭ.

Deepavali 2024 : ಉತ್ತರ ಕರ್ನಾಟಕದ ಸ್ಪೆಷಲ್ ಸಾಂಪ್ರಾದಾಯಿಕ ರೆಸಿಪಿ ಹುರಕ್ಕಿ ಹೋಳಿಗೆ, ಇಲ್ಲಿದೆ ರೆಸಿಪಿ
ಸಾಯಿನಂದಾ
| Edited By: |

Updated on: Oct 22, 2024 | 10:55 AM

Share

ದೀಪಾವಳಿಯೂ ಹಿಂದೂಗಳ ಪಾಲಿನ ದೊಡ್ಡ ಹಬ್ಬಗಳಲ್ಲಿ ಒಂದು. ವರ್ಷವಿಡೀ ಕಾಯುವ ದೀಪಾವಳಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ದೂರವಿದೆ. ಹಬ್ಬ ಎಂದ ಮೇಲೆ ಮನೆ ಮಂದಿಯೆಲ್ಲಾ ಸೇರಿ ಮನೆ ಸ್ವಚ್ಛತೆ ಸೇರಿದಂತೆ ಬಗೆ ಬಗೆಯ ತಿನಿಸುಗಳ ತಯಾರಿಯಲ್ಲಿ ಬ್ಯುಸಿಯಾಗಿರುತ್ತದೆ. ಒಬ್ಬೊಬ್ಬರು ಒಂದೊಂದು ಬಗೆಯ ಸಿಹಿ ತಿಂಡಿಗಳನ್ನು ಮಾಡಿ ಸವಿಯುತ್ತಾರೆ. ಆದರೆ ಉತ್ತರ ಕರ್ನಾಟಕದಲ್ಲಿ ಸಾಂಪ್ರದಾಯಿಕ ತಿನಿಸುಗಳಲ್ಲಿ ಹುರಕ್ಕಿ ಹೋಳಿಗೆ ಫೇಮಸ್ ಆಗಿದೆ. ಹೆಚ್ಚೇನು ಸಮಯ ತೆಗೆದುಕೊಳ್ಳದ ಈ ರೆಸಿಪಿಯನ್ನು ಮಾಡುವ ವಿಧಾನ ಇಲ್ಲಿದೆ.

ಹುರಕ್ಕಿ ಹೋಳಿಗೆ ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ನವಣೆ

* ಕಾಲು ಕಪ್‌ ಕಡ್ಲೆ ಬೇಳೆ

* ಕಾಲು ಕಪ್ ಅಕ್ಕಿ

* ಒಂದು ಕಪ್ ಬೆಲ್ಲ

* ಏಲಕ್ಕಿ ಪುಡಿ

* ಉಪ್ಪು

* ಎಣ್ಣೆ

* ಗೋಧಿ ಹಿಟ್ಟು

* ಮೈದಾ ಹಿಟ್ಟು

* ಸಣ್ಣ ರವೆ

ಹುರಕ್ಕಿ ಹೋಳಿಗೆ ಮಾಡುವ ವಿಧಾನ

* ಮೊದಲಿಗೆ ನವಣೆಯನ್ನು ತೊಳೆದು ನೀರು ಬಸಿದು ನೆರಳಲ್ಲಿ ಒಣಗಿಸಿಕೊಳ್ಳಬೇಕು.

* ತದನಂತರದಲ್ಲಿ ನವಣೆ ಕಡ್ಲೆ ಬೇಳೆ ಮತ್ತು ಅಕ್ಕಿಯನ್ನೂ ಹುರಿದುಕೊಳ್ಳಿ.

* ಈ ಮೂರನ್ನು ಮಿಕ್ಸಿ ಜಾರ್‌ನಲ್ಲಿ ಚೆನ್ನಾಗಿ ಪುಡಿ ಮಾಡಿಕೊಳ್ಳಿ.

* ಆ ಬಳಿಕ ಗೋಧಿ ಹಿಟ್ಟಿಗೆ ಸ್ವಲ್ಪ ಮೈದಾ, ರವೆ, ಉಪ್ಪು ಹಾಗೂ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ಹದಿನೈದು ನಿಮಿಷ ಹಾಗೆಯೇ ಬಿಡಿ.

* ನಂತರದಲ್ಲಿ ಬಾಣಲೆಯಲ್ಲಿ ಬೆಲ್ಲ ಮುಳುಗುವಷ್ಟು ಮಾತ್ರ ನೀರು ಹಾಕಿ ಪಾಕ ಮಾಡಿ ಒಲೆಯಿಂದ ಕೆಳಗಿಳಿಸಿಕೊಳ್ಳಿ.

* ಇದಕ್ಕೆ ಏಲಕ್ಕಿ ಪುಡಿ ಮತ್ತು ನವಣೆ ಮಿಶ್ರಣದ ಹಿಟ್ಟು ಹಾಕಿ ಚೆನ್ನಾಗಿ ಬೆರೆಸಿಕೊಂಡು ಹೂರಣ ಸಿದ್ದ ಮಾಡಿಕೊಳ್ಳಿ

* ನೆನೆದ ಹಿಟ್ಟಿನಿಂದ ಉಂಡೆ ಮಾಡಿ ಅದರಲ್ಲಿ ಹೂರಣ ತುಂಬಿ ಲಟ್ಟಿಸಿ ಎಣ್ಣೆಯಲ್ಲಿ ಕರಿದರೆ ಹುರಕ್ಕಿ ಹೋಳಿಗೆ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು