AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali Cleaning Hacks: ಈ ಕ್ಲೀನಿಂಗ್‌ ಸಲಹೆ ಅನುಸರಿಸಿದ್ರೆ ಸಾಕು ನಿಮ್ಮ ಮನೆಯ ಸ್ವಿಚ್‌ಬೋರ್ಡ್‌ ಪಳಪಳ ಹೊಳೆಯುತ್ತದೆ

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲವು ದಿನಗಳು ಬಾಕಿಯಿದೆ. ದೀಪಾವಳಿ ಹತ್ತಿರ ಬರ್ತಿದೆ ಎಂದ್ರೆ ಸಾಕು ಪ್ರತಿಯೊಬ್ಬರೂ ಮನೆಯನ್ನು ಸ್ವಚ್ಛಗೊಳಿಸುತ್ತಾರೆ. ಲಕ್ಷ್ಮೀ ದೇವಿ ಒಲಿಯುತ್ತಾಳೆ ಎಂಬ ಕಾರಣಕ್ಕೆ ದೀಪಾವಳಿ ಹಬ್ಬಕ್ಕೂ ಮುನ್ನ ಮನೆಯನ್ನು ಸ್ವಚ್ಛಗೊಳಿಸುವುದು ವಾಡಿಕೆ. ಹೀಗೆ ಹಬ್ಬದ ಸಮಯದಲ್ಲಿ ಮನೆಯನ್ನು ಡೀಪ್‌ ಕ್ಲೀನ್‌ ಮಾಡ್ತಾರೆ. ಆದ್ರೆ ಸ್ವಿಚ್‌ ಬೋರ್ಡ್‌ ಸ್ವಚ್ಛತೆಯ ಬಗ್ಗೆ ಅಷ್ಟಾಗಿ ಯಾರು ಗಮನ ಹರಿಸುವುದೇ ಇಲ್ಲ. ನಿಮ್ಮ ಮನೆ ಸ್ವಿಚ್‌ ಬೋರ್ಡ್‌ಗಳಲ್ಲೂ ಸಿಕ್ಕಾಪಟ್ಟೆ ಕೊಳೆ ಹಿಡಿದಿದ್ಯಾ? ಹಾಗಿದ್ರೆ ಈ ಸಿಂಪಲ್‌ ಕ್ಲೀನಿಂಗ್‌ ಟಿಪ್ಸ್‌ ಪಾಲಿಸುವ ಮೂಲಕ ಅದನ್ನು ಸ್ವಚ್ಛಗೊಳಿಸಿ.

Deepavali Cleaning Hacks:  ಈ ಕ್ಲೀನಿಂಗ್‌ ಸಲಹೆ ಅನುಸರಿಸಿದ್ರೆ ಸಾಕು ನಿಮ್ಮ ಮನೆಯ ಸ್ವಿಚ್‌ಬೋರ್ಡ್‌ ಪಳಪಳ ಹೊಳೆಯುತ್ತದೆ
ಸ್ವಿಚ್‌ಬೋರ್ಡ್‌ ಕ್ಲೀನಿಂಗ್‌ ಟಿಪ್ಸ್‌Image Credit source: Pinterest
ಮಾಲಾಶ್ರೀ ಅಂಚನ್​
|

Updated on: Oct 09, 2025 | 5:34 PM

Share

ನಮ್ಮ ದೇಶದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ದೀಪಾವಳಿ (Deepavali) ಕೂಡ ಒಂದು. ಈ ಹಬ್ಬದ ಸಂದರ್ಭದಲ್ಲಿ ಪ್ರತಿಯೊಬ್ಬರು ಕೂಡ ತಮ್ಮ ಮನೆಯನ್ನು ದೀಪ, ಲೈಟಿಂಗ್ಸ್‌ಗಳಿಂದ ಸಿಂಗರಿಸುತ್ತಾರೆ. ಅದಕ್ಕೂ ಮುನ್ನ ಮನೆಯನ್ನು ಡೀಪ್‌ ಕ್ಲೀನ್‌ ಮಾಡುತ್ತಾರೆ. ಲಕ್ಷ್ಮೀ ದೇವಿ ಒಲಿಯುತ್ತಾಳೆ ಎಂಬ ಕಾರಣಕ್ಕೆ ಬೆಳಕಿನ ಹಬ್ಬ ದೀಪಾವಳಿಗೆ ಮುನ್ನ ಮನೆಯನ್ನು ಸ್ವಚ್ಛಗೊಳಿಸುವುದು ವಾಡಿಕೆ. ಈ ಬಾರಿಯ ಹಬ್ಬಕ್ಕೂ ದಿನಗಣನೆ ಆರಂಭವಾಗಿದ್ದು, ಈಗಾಗ್ಲೇ ಅನೇಕರು ತಮ್ಮ ಮನೆಯ ಸ್ವಚ್ಛತಾ ಕಾರ್ಯವನ್ನು ಶುರು ಮಾಡಿದ್ದಾರೆ. ನೀವು ಕೂಡ ಮನೆಯನ್ನು ಸ್ವಚ್ಛಗೊಳಿಸುತ್ತಿದ್ದರೆ, ಸ್ವಿಚ್‌ಬೋರ್ಡ್‌ ಸ್ವಚ್ಛತೆಯ ಬಗ್ಗೆ ಸ್ವಲ್ಪ ಗಮನ ಹರಿಸಿ, ಹೆಚ್ಚಿನವರು ಅದರ ಸ್ವಚ್ಛತೆಯ ಬಗ್ಗೆ ಅಷ್ಟಾಗಿ ಗಮನ ಹರಿಸುವುದಿಲ್ಲ, ಹೀಗೆ ಮಾಡಿದರೆ ಮನೆಯ ಸೌಂದರ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಹಾಗಾಗಿ ಈ ಕೆಲವೊಂದು ಸಿಂಪಲ್‌ ಟಿಪ್ಸ್‌ಗಳನ್ನು (Deepavali Cleaning Hacks) ಪಾಲಿಸುವ ಮೂಲಕ ಸ್ವಿಚ್‌ಬೋರ್ಡ್‌ಗಳಲ್ಲಿ ಅಂಟಿರುವ ಕಲೆ, ಕೊಳೆಯನ್ನು ಸುಲಭವಾಗಿ ಹೋಗಲಾಡಿಸಿ.

ಸ್ವಿಚ್‌ಬೋರ್ಡ್‌ ಸ್ವಚ್ಛಗೊಳಿಸುವ ಸಿಂಪಲ್‌ ಸಲಹೆಗಳು:

ಟೂತ್‌ಪೇಸ್ಟ್: ಸ್ವಿಚ್‌ಬೋರ್ಡ್‌ನಲ್ಲಿ ಅಂಟಿರುವ ಕೊಳೆಯನ್ನು ತೆಗೆದುಹಾಕಲು ಟೂತ್‌ಪೇಸ್ಟ್‌ ಪರಿಣಾಮಕಾರಿಯಾಗಿದೆ. ಅದಕ್ಕಾಗಿ ಮೊದಲು ನೀವು ಸ್ವಿಚ್‌ಬೋರ್ಡ್‌ಗೆ ಸ್ವಲ್ಪ ಪ್ರಮಾಣದ ಟೂತ್‌ಪೇಸ್ಟ್‌ ಅನ್ವಯಿಸಿ ಬಳಿದ ಅದನ್ನು ಟೂತ್‌ ಬ್ರಷ್‌ನಿಂದ ನಿಧಾನವಾಗಿ ಸ್ಕ್ರಬ್‌ ಮಾಡಿ ಒಣಬಟ್ಟೆಯಿಂದ ಒರಸಿದರೆ, ಸ್ವಿಚ್‌ಬೋರ್ಡ್‌ ಹೊಸದರಂತೆ ಪಳಪಳನೆ ಹೊಳೆಯುತ್ತದೆ.

ನಿಂಬೆ ಮತ್ತು ಉಪ್ಪು: ನಿಂಬೆ ರಸ ಮತ್ತು ಉಪ್ಪಿನ ಸಹಾಯದಿಂದಲೂ ಸ್ವಿಚ್‌ಬೋರ್ಡ್‌ ಸ್ವಚ್ಛಗೊಳಿಸಬಹುದು.  ಇದಕ್ಕಾಗಿ ಅರ್ಧ ನಿಂಬೆ ಹೋಳು ತೆಗೆದುಕೊಂಡು ಅದಕ್ಕೆ ಸ್ವಲ್ಪ ಪುಡಿ ಉಪ್ಪು ಹಾಕಿ ಸ್ವಿಚ್‌ಬೋರ್ಡ್‌ ಮೇಲೆ ನಿಧಾನಕ್ಕೆ ಸ್ಕ್ರಬ್‌ ಮಾಡಿ. ಈ ಸಂದರ್ಭದಲ್ಲಿ ಎಲ್ಲಾ ಸ್ವಿಚ್‌ಗಳು ಆಫ್‌ ಆಗಿರುವಂತೆ ನೋಡಿಕೊಳ್ಳಿ.

ಬಿಳಿ ವಿನೆಗರ್:‌ ಸ್ಪ್ರೇ ಬಾಟಲಿಯಲ್ಲಿ ಬಿಳಿ ವಿನೆಗರ್ ಮತ್ತು ನೀರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ದ್ರಾವಣವನ್ನು ನೇರವಾಗಿ ಸ್ವಿಚ್ ಮೇಲೆ ಸಿಂಪಡಿಸುವ ಬದಲು, ಅದನ್ನು ಸ್ವಚ್ಛವಾದ ಹತ್ತಿ ಬಟ್ಟೆಯ ಮೇಲೆ ಸಿಂಪಡಿಸಿ ಮತ್ತು ನಂತರ ಬೋರ್ಡ್ ಅನ್ನು ನಿಧಾನವಾಗಿ ಒರೆಸಿ. ಈ ದ್ರಾವಣವು ಮೊಂಡುತನದ ಕಲೆಗಳು ಮತ್ತು ಕೊಳೆಯನ್ನು ತೆಗೆದುಹಾಕುವಲ್ಲಿ ಬಹಳ ಪರಿಣಾಮಕಾರಿಯಾಗಿದೆ.

ಇದನ್ನೂ ಓದಿ: ಈರುಳ್ಳಿ ಕತ್ತರಿಸುವಾಗ ಅಳಲು ಬರುತ್ತಾ? ಕಣ್ಣೀರನ್ನು ತಡೆಯಲು ಇಲ್ಲಿದೆ ಸುಲಭ ವಿಧಾನ

ಅಡಿಗೆ ಸೋಡಾ: ನಿಮ್ಮ ಸ್ವಿಚ್‌ಬೋರ್ಡ್‌ನಲ್ಲಿ ಕೊಳೆ ಇದ್ದರೆ, ಅಡಿಗೆ ಸೋಡಾವನ್ನು ಸ್ವಲ್ಪ ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ. ಈ ಪೇಸ್ಟನ್ನು ಕೊಳೆ ಇರುವ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ.  ನಂತರ, ಮೃದುವಾದ ಬ್ರಷ್‌ನಿಂದ ನಿಧಾನವಾಗಿ ಸ್ಕ್ರಬ್ ಮಾಡಿ. ಅಂತಿಮವಾಗಿ, ಒಣ ಬಟ್ಟೆಯಿಂದ ಚೆನ್ನಾಗಿ ಒರೆಸಿ. ಹೀಗೆ ಮಾಡುವುದರಿಂದ ಸುಲಭವಾಗಿ ಕಲೆಯನ್ನು ತೆಗೆದುಹಾಕಬಹುದು.

ಸುರಕ್ಷತೆಯ ಬಗ್ಗೆ ಇರಲಿ ಗಮನ:

ಸ್ವಿಚ್‌ಬೋರ್ಡ್‌ ಸ್ವಚ್ಛಗೊಳಿಸುವಂತಹ ಸಂದರ್ಭದಲ್ಲಿ ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿ ನಂತರವೇ ಕ್ಲೀನ್‌ ಮಾಡಿ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶುಚಿಗೊಳಿಸುವಿಕೆಯ ಜೊತೆಗೆ, ಪ್ರತಿ 15 ದಿನಗಳಿಗೊಮ್ಮೆ ಮನೆ ಸ್ವಿಚ್‌ಬೋರ್ಡ್‌ಗಳನ್ನು ಲಘುವಾಗಿ ಸ್ವಚ್ಛಗೊಳಿಸುವ ಅಭ್ಯಾಸವನ್ನುರೂಢಿಸಿಕೊಳ್ಳಿ. ಹೀಗೆ ಮಾಡುವುದರಿಂದ ಸ್ವಿಚ್‌ಬೋರ್ಡ್‌ ಹೊಸದರಂತೆ ಹೊಳೆಯುತ್ತಿರುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ