AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Homemade Dhoop: ಮನೆಯಲ್ಲಿಯೇ ಸುಲಭವಾಗಿ ಧೂಪ ತಯಾರಿಸಿ

ಸಾಕಷ್ಟು ಪ್ರಯೋಜನಗಳನ್ನು ಹೊಂದಿರುವ ಧೂಪವನ್ನು ಪ್ರತೀ ಬಾರಿ ಅಂಗಡಿಗಳಿಂದ ಖರೀದಿಸುವ ಬದಲಾಗಿ ನೀವೇ ಮನೆಯಲ್ಲಿ ತಯಾರಿಸಿ.

Homemade Dhoop: ಮನೆಯಲ್ಲಿಯೇ ಸುಲಭವಾಗಿ ಧೂಪ ತಯಾರಿಸಿ
ಮನೆಯಲ್ಲಿಯೇ ಸುಲಭವಾಗಿ ಧೂಪ ತಯಾರಿಸಿImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 26, 2023 | 11:57 AM

Share

ಹಿಂದೂ ಧರ್ಮದ ಪ್ರಕಾರ ಧೂಪಕ್ಕೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಪೂಜಾ ಸಮಯದಲ್ಲಿ ದೇವರ ಮುಂದೆ ಧೂಪವನ್ನು ಹಚ್ಚಲಾಗುತ್ತದೆ. ಜೊತೆಗೆ ಸಂಧ್ಯಾಕಾಲದಲ್ಲಿ ಮನೆಯಲ್ಲಿ ಧೂಪ ಹಚ್ಚುವುದರಿಂದ ನಕಾರಾತ್ಮಕ ಶಕ್ತಿಯು ನಾಶವಾಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೇ ಧೂಪದಿಂದ ಹೊರಬರುವ ಹೊಗೆಯು ನಿಮ್ಮ ಆರೋಗ್ಯದ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ ಎಂದು ಹಿಂದೂ ಧರ್ಮದಲ್ಲಿ ಉಲ್ಲೇಖಿಸಲಾಗಿದೆ. ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಧೂಪವನ್ನು ಪ್ರತೀ ಬಾರಿ ಅಂಗಡಿಗಳಿಂದ ಖರೀದಿಸುವ ಬದಲಾಗಿ ನೀವೇ ಮನೆಯಲ್ಲಿ ತಯಾರಿಸಿ.

@mydecorworld1 ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಮನೆಯಲ್ಲಿಯೇ ಧೂಪ ತಯಾರಿಸುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದು, ಆಪೋಸ್ಟ್​​​ ಇಲ್ಲಿದೆ ನೋಡಿ.

View this post on Instagram

A post shared by Kamya (@mydecorworld1)

ಧೂಪ ತಯಾರಿಸಲು ಬೇಕಾಗುವ ಪದಾರ್ಥಗಳು:

  • ಒಣಗಿದ ತೆಂಗಿನ ನಾರಿನ ಸಿಪ್ಪೆಯ ಪುಡಿ
  • ಗುಲಾಬಿ ಎಸಳುಗಳು
  • ಗಂಧದ ಪುಡಿ
  • ಕರ್ಪೂರ
  • ಮರದ ದಿಂಬಿಯ ಪುಡಿ
  • ತುಪ್ಪ

ಇದನ್ನೂ ಓದಿ: 3ಸಾವಿರ ಅಡಿ ಎತ್ತರದಲ್ಲಿ ಬೆಟ್ಟಗಳ ಮಧ್ಯೆ ನೆಲೆಗೊಂಡ ಗಣೇಶನ ವಿಗ್ರಹ, ಇಲ್ಲಿದೆ ನೋಡಿ ವಿಡಿಯೋ

ಧೂಪ ತಯಾರಿಸುವ ವಿಧಾನ :

ಒಣಗಿದ ತೆಂಗಿನ ನಾರಿನ ಸಿಪ್ಪೆ ಮತ್ತು ಒಣಗಿದ ಗುಲಾಬಿ ಎಸಳುಗಳನ್ನು ಚೆನ್ನಾಗಿ ಪುಡಿ ಮಾಡಿ. ನಂತರ ಇದನ್ನು ಸರಿಯಾಗಿ ಜರಡಿ ಸಹಾಯದಿಂದ ಸೋಸಿಕೊಳ್ಳಿ. ಇದಾದ ಬಳಿಕ ಇದಕ್ಕೆ ಕರ್ಪೂರವನ್ನು ಪುಡಿ ಮಾಡಿ ಹಾಕಿ. ಜೊತೆಗೆ ಶ್ರೀಗಂಧದ ಪುಡಿ, ಮರದ ದಿಂಬಿಯ ಪುಡಿ ಹಾಕಿ ಎಲ್ಲವನ್ನು ಚೆನ್ನಾಗಿ ಮಿಶ್ರಣ ಮಾಡಿ. ಇದಾದ ಬಳಿಕ ಇದಕ್ಕೆ ಒಂದರಿಂದ ಎರಡು ಚಮಚ ತುಪ್ಪ ಹಾಕಿ ಮಿಶ್ರಣ ಮಾಡಿ. ನಂತರ ಈ ಮಿಶ್ರಣವನ್ನು ಧೂಪದ ಆಕಾರವಾಗಿ ಮಾಡಿ ಮತ್ತು ಕೆಲ ಗಂಟೆಗಳ ವರೆಗೆ ಹಾಗೆಯೇ ಇಡಿ. ಈಗ ಧೂಪ ಸಿದ್ಧವಾಗಿದೆ. ಇದರಲ್ಲಿ ಶ್ರೀಗಂಧ, ಕರ್ಪೂರ ಮುಂತಾದ ಪದಾರ್ಥವನ್ನು ಹಾಕಿರುವುದರಿಂದ ಮನೆತುಂಬಾ ಸುವಾಸನೆ ಸೂಸುವ ಜೊತೆಗೆ, ನಿಮ್ಮ ಆರೋಗ್ಯದ ಮೇಲೂ ಸಾಕಷ್ಟು ಪ್ರಯೋಜನವನ್ನು ಹೊಂದಿದೆ. ಆದ್ದರಿಂದ ನೀವು ಪ್ರಯತ್ನಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:57 am, Sun, 26 March 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ