ಬೇಸಿಗೆಗಾಲದಲ್ಲಿ ಅಪ್ಪಿ ತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ

ಬೇಸಿಗೆಗಾಲ ಬಂತೆಂದರೆ ಬಿಸಿಲಿನ ಝಳವನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಇದೀಗ ಫೆಬ್ರವರಿ ತಿಂಗಳ ಕೊನೆಯಲ್ಲಿದ್ದೇವೆ. ಈಗಾಗಲೇ ಸುಡು ಬಿಸಿಲು ಒಂದೆಡೆಯಾದರೆ ಶೆಕೆಯು ಕಾಣಿಸಿಕೊಳ್ಳಲು ಶುರುವಾಗಿದೆ. ಇದೇ ರೀತಿ ಬಿಸಿಲಿದ್ದರೆ ಮುಂಬರುವ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಸೆಕೆ ತಡೆದುಕೊಳ್ಳುವುದು ಕಷ್ಟವೇ. ಅದಲ್ಲದೇ ಈ ಬೇಸಿಗೆ ಶುರುವಾಗುತ್ತಿದ್ದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಒಟ್ಟಾರೆಯಾಗಿ ಸಿಕ್ಕ ಸಿಕ್ಕ ಆಹಾರಗಳನ್ನು ಸೇವಿಸುವುದು ಒಳ್ಳೆಯದಲ್ಲ. ಈ ಕೆಲವು ಆಹಾರ ಪದಾರ್ಥಗಳ ಸೇವನೆಯಿಂದ ದೂರವಿದ್ದರೆ ಆರೋಗ್ಯಕ್ಕೆ ಲಾಭವೇ ಹೆಚ್ಚು.

ಬೇಸಿಗೆಗಾಲದಲ್ಲಿ ಅಪ್ಪಿ ತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 19, 2024 | 6:45 PM

ಬೇಸಿಗೆಗಾಲವನ್ನು ಯಾರು ಕೂಡ ಇಷ್ಟ ಪಡುವುದಿಲ್ಲ. ಚಳಿಗಾಲವಾದರೂ ಪರವಾಗಿಲ್ಲ ಈ ಬೇಸಿಗೆಗಾಲ ಬರುವುದೇ ಬೇಡಪ್ಪ ಎಂದು ಹೇಳುವವರೇ ಹೆಚ್ಚು. ಈ ಕೆಲವು ತಿಂಗಳಲ್ಲಿ ಸೂರ್ಯನ ಸುಡು ಬಿಸಿಲಿನ ನಡುವೆ ಸೆಕೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೆಚ್ಚಿನವರು ಫ್ಯಾನಿನಡಿಯಲ್ಲಿ ಇರಲು ಇಷ್ಟ ಪಡುತ್ತಾರೆ. ಅದಲ್ಲದೇ, ಕೆಲವು ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯವನ್ನು ಕಾಯ್ದುಕೊಳ್ಳುವುದು ಮುಖ್ಯ. ಆದರೆ ಅಪ್ಪಿತಪ್ಪಿಯು ಬೇಸಿಗೆಗಾಲದಲ್ಲಿ ಈ ಕೆಲವು ಆಹಾರಗಳತ್ತ ತಿರುಗಿಯು ನೋಡಬೇಡಿ, ಇದರಿಂದ ಆರೋಗ್ಯ ಸಮಸ್ಯೆಯೂ ಕಾಡುತ್ತದೆ.

* ಉಪ್ಪಿನಕಾಯಿ : ಕೆಲವರಿಗೆ ಮಧ್ಯಾಹ್ನದ ಊಟದ ವೇಳೆ ಉಪ್ಪಿನಕಾಯಿ ಇರಲೇಬೇಕು. ಆದರೆ ಬೇಸಿಗೆಗಾಲದಲ್ಲಿ ಈ ಉಪ್ಪಿನ ಕಾಯಿ ಸೇವನೆಯಿಂದ ದೂರವಿದ್ದರೆ ಒಳ್ಳೆಯದು. ಇದರಲ್ಲಿ ಸೋಡಿಯಂ ಅಂಶವು ಹೇರಳವಾಗಿದ್ದು, ನಿರ್ಜಲೀಕರಣವಾಗಿ ದೇಹದಲ್ಲಿನ ನೀರು ಕಡಿಮೆಯಾಗುತ್ತದೆ. ಹೀಗಾಗಿ ಉಪ್ಪಿನ ಕಾಯಿ ಸೇವನೆಯನ್ನು ಆದಷ್ಟು ದೂರ ಮಾಡಿ.

* ಕಾಫಿ : ಕೆಲವರಂತೂ ಕಾಫಿ ಪ್ರಿಯರಾಗಿರುತ್ತಾರೆ. ಹೀಗಾಗಿ ದಿನಕ್ಕೆ ಎರಡು ಮೂರು ಸಲವಾದರೂ ಕಾಫಿಯನ್ನು ಕುಡಿಯುತ್ತಾರೆ. ಬಿಸಿ ಕಾಫಿ ಸೇವನೆ ಮಾಡಿದರೆ ನೀರಿನಾಂಶವು ಕಡಿಮೆಯಾಗುತ್ತದೆ. ಹೀಗಾಗಿ ಬೇಸಿಗೆಯಲ್ಲಿ ಕಾಫಿ ಸೇವನೆಯನ್ನು ಕಡಿಮೆ ಮಾಡುವುದು ಒಳ್ಳೆಯದು.

* ಮಸಾಲೆಯುಕ್ತ ಆಹಾರಗಳು : ಮಸಾಲೆಯುಕ್ತ ಆಹಾರಗಳೂ ಎಲ್ಲರಿಗೂ ಇಷ್ಟನೇ. ಆದರೆ ಸುಡುವ ಬಿಸಿಯಲ್ಲಿ ಈ ಆಹಾರವನ್ನು ಸೇವಿಸಿದರೆ ಇದರಲ್ಲಿರುವ ಮಸಾಲಾ ಅಂಶವು ದೇಹದ ಶಾಖಾ ಹೆಚ್ಚಿಸಿ ದೇಹವನ್ನು ಬಿಸಿಯಾಗಿಸುತ್ತದೆ. ವಿಪರೀತ ಬೆವರುವುದು ಹಾಗೂ ದೇಹ ನಿರ್ಜಲೀಕರಣ ಪ್ರಕ್ರಿಯೆಗಳು ಆಗುತ್ತದೆ.

* ಕರಿದ ಆಹಾರಗಳು : ಕರಿದ ಆಹಾರವು ನಾಲಿಗೆಗೆ ರುಚಿ ನೀಡುತ್ತದೆ. ಆದರೆ ಬೇಸಿಗೆಗಾಲದಲ್ಲಿ ಈ ಆಹಾರವು ದೇಹಕ್ಕೆ ಒಳ್ಳೆದಲ್ಲ. ಈ ಸಮಯದಲ್ಲಿ ಸಮೋಸಾ, ಚಾಟ್ಸ್, ಸೇರಿದಂತೆ ಇನ್ನಿತರ ಕರಿದ ಆಹಾರಗಳಿಂದ ಸಾಧ್ಯವಾದಷ್ಟು ದೂರವಿದ್ದರೆ ಉತ್ತಮ.

ಇದನ್ನೂ ಓದಿ: ಪರೀಕ್ಷಾ ಸಮಯದಲ್ಲಿ ನಿಮ್ಮ ಮಕ್ಕಳು ಗಟ್ಟಿಯಾಗಿ ಓದುತ್ತಾರೆಯೇ, ಈ ಅಭ್ಯಾಸದಿಂದ ಲಾಭಗಳೇ ಹೆಚ್ಚು

* ಉಪ್ಪು : ಕೆಲವರು ತಮ್ಮ ಆಹಾರ ಪದಾರ್ಥಗಳಲ್ಲಿ ಹೆಚ್ಚು ಉಪ್ಪನ್ನು ಬಳಸುತ್ತಾರೆ. ಉಪ್ಪು ನಿರ್ಜಲೀಕರಣಕ್ಕೆ ಕಾರಣವಾಗುವುದರಿಂದ ಜಾಸ್ತಿ ಉಪ್ಪಿನಾಂಶವಿರುವ ಆಹಾರಗಳನ್ನು ಬೇಸಿಗೆಯಲ್ಲಿ ಕಡಿಮೆಮಾಡಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

* ಗ್ರಿಲ್ ಮಾಂಸಾಹಾರಗಳು : ವಾತಾವರಣವು ಬಿಸಿಯಾಗಿರುವುದರಿಂದ ಈ ಗ್ರಿಲ್ ಮಾಂಸಹಾರಗಳು ದೇಹವನ್ನು ಮತ್ತಷ್ಟು ಬಿಸಿಯಾಗಿಸುತ್ತದೆ. ದೇಹದ ಶಾಖವು ಹೆಚ್ಚಾದಂತೆ ಆರೋಗ್ಯ ಸಮಸ್ಯೆಯೂ ಕಾಡಬಹುದು. ಹೀಗಾಗಿ ಇಂತಹ ಆಹಾರಗಳಿಂದ ಹೆಚ್ಚು ದೂರವಿರಿ.

* ಆಲ್ಕೋಹಾಲ್ : ಬೇಸಿಗೆಯಲ್ಲಿ ಆಲ್ಕೋಹಾಲ್ ಸೇವನೆ ಮಾಡಿದರೆ ದೇಹದಲ್ಲಿ ನಾನಾ ರೀತಿಯ ಆಹಾರ ಸಮಸ್ಯೆಗಳು ಕಾರಣವಾಗುತ್ತದೆ. ಈ ಸಮಯದಲ್ಲಿ ಆಲ್ಕೋಹಾಲ್ ಸೇವಿಸಿದರೆ ನಿರ್ಜಲೀಕರಣ, ತಲೆನೋವು, ಬಾಯಿಯ ಶುಷ್ಕತೆ ಹೀಗೆ ನಾನಾ ರೀತಿಯ ತೊಂದರೆಗಳಿಗೆ ಆಹ್ವಾನಕೊಟ್ಟಂತಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ