AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Beer Day : ಬಿಯರ್ ದಿನದ ಆಚರಣೆ ಯಾಕೆ? ಬಿಯರ್​​ನಿಂದ ಆಗುವ ಅನುಕೂಲ, ಅನಾನುಕೂಲ ಇಲ್ಲಿದೆ

ದುಃಖದ ಸಂಗತಿಯಾಗಿರಲಿ ಅಥವಾ ಸಂತೋಷದ ಕ್ಷಣಗಳಾಗಿರಲಿ ಈ ಸಂದರ್ಭದಲ್ಲಿ ಅನೇಕರಿಗೆ ನೆನಪಾಗುವುದು ಬಿಯರ್. ಇದೇ ಕಾರಣಕ್ಕೆ ಚಹಾ ಮತ್ತು ಕಾಫಿಯ ನಂತರದ ಬಿಯರ್ ಪ್ರಪಂಚದ ಮೂರನೇ ಜನಪ್ರಿಯ ಪಾನೀಯವೆಂದು ಪರಿಗಣಿಸಲಾಗಿದೆ. ಅನೇಕ ಜನರ ನೆಚ್ಚಿನ ಪಾನೀಯವಾಗಿರುವ ಬಿಯರ್​​ನ ಅಂತರಾಷ್ಟ್ರೀಯ ದಿನವಿಂದು. ಈ ದಿನವನ್ನು ಏಕೆ ಆಚರಿಸಲಾಗುತ್ತದೆ ಮತ್ತು ಬಿಯರ್ ಕುರಿತ ಇನ್ನಷ್ಟು ಸಂಗತಿಗಳನ್ನು ತಿಳಿಯಿರಿ

International Beer Day : ಬಿಯರ್ ದಿನದ ಆಚರಣೆ ಯಾಕೆ? ಬಿಯರ್​​ನಿಂದ ಆಗುವ ಅನುಕೂಲ, ಅನಾನುಕೂಲ ಇಲ್ಲಿದೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 04, 2023 | 11:04 AM

Share

ಬಿಯರ್ ಜನಪ್ರಿಯ ಆಲ್ಕೋಹಾಲ್​​​ಯುಕ್ತ ಪಾನೀಯವಾಗಿದೆ. ಇಂದಿನ ಯುವಜನತೆ ಬಿಯರ್ ಕಡೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಪಾರ್ಟಿಗಳಾಗಿರಲಿ ಬಿಯರ್ ಇಲ್ಲದೆ ಅದು ಅಪೂರ್ಣವಾಗಿರುತ್ತದೆ. ಇದರಲ್ಲಿ ಸೀಮಿತ ಪ್ರಮಾಣದ ಆಲ್ಕೋಹಾಲ್ ಅಂಶ ಇರುವುದರಿಂದ ಬಿಯರ್​​ನ್ನು ಇತರ ಆಲ್ಕೋಹಾಲ್ ಪಾನೀಯಗಳಿಗಿಂತ ಕಡಿಮೆ ಹಾನಿಕಾರಕವೆಂದು ಪರಿಗಣಿಸಲಾಗಿದೆ. ಇಂದು ಪ್ರಪಂಚದ ಎಲ್ಲಾ ಬಿಯರ್ ಪ್ರಿಯರಿಗೆ ಸಂಭ್ರಮದ ದಿನವಾಗಿದೆ. ಏಕೆಂದರೆ ಇಂದು ಅಂದರೆ ಆಗಸ್ಟ್ 4 ರಂದು ಅಂತರಾಷ್ಟ್ರೀಯ ಬಿಯರ್ ದಿನವನ್ನು (International Beer Day) ಆಚರಿಸಲಾಗುತ್ತಿದೆ. ಬಿಯರ್ ದಿನವನ್ನು ಏಕೆ ಆಚರಿಸಲಾಗುತ್ತದೆ, ಅದು ಹೇಗೆ ಪ್ರಾರಂಭವಾಯಿತು ಎಂಬ ಕುತೂಹಲದ ಸಂಗತಿಗಳನ್ನು ತಿಳಿಯಿರಿ.

ಬಿಯರ್ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು?

ಅಮೇರಿಕಾದ ಕ್ಯಾಲಿಫೋರ್ನಿಯಾದ ಸಾಂಟಾ ಕ್ರೂಜ್​​​ನ ಜೆಸಿ ಅವ್ಶಲೋವ್ನ್ ಎಂಬ ವ್ಯಕ್ತಿ ಬಿಯರ್ ದಿನದ ಆಚರಣೆಯ ಹುಟ್ಟಿಗೆ ಕಾರಣ. ಅಮೇರಿಕಾದಲ್ಲಿ ಸ್ಥಳೀಯ ಕಾರ್ಯಕ್ರಮವಾಗಿ ಬಿಯರ್ ದಿನ ಹುಟ್ಟಿಕೊಂಡಿತು. ಮೊದಲು ಈ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಮಾತ್ರ ಆಚರಿಸಲಾಗುತ್ತಿತು. ಕ್ರಮೇಣ ಅದರ ಮನ್ನಣೆ ಹೆಚ್ಚಾಯಿತು. ಮತ್ತು ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲ್ಪಟ್ಟಿತು. 2007 ರಿಂದ 2012 ರ ವರೆಗೆ ಈ ದಿನವನ್ನು ಆಗಸ್ಟ್ 5 ರಂದು ಆಚರಿಸಲಾಯಿತು. 2012 ರ ನಂತರ, ಆಗಸ್ಟ್ ತಿಂಗಳ ಮೊದಲ ಶುಕ್ರವಾರದಂದು ಬಿಯರ್ ದಿನವನ್ನು ಆಚರಿಸಲು ನಿರ್ಧರಿಸಲಾಯಿತು.

ಅಂತರಾಷ್ಟ್ರೀಯ ಬಿಯರ್ ದಿನವನ್ನು ಹೇಗೆ ಆಚರಿಸಲಾಗುತ್ತದೆ?

ಪಾಶ್ಚಿಮಾತ್ಯ ದೇಶಗಳಲ್ಲಿ ಬಿಯರ್ ದಿನವನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಜನರು ಪಬ್​​​ಗಳಿಗೆ ಹೋಗುವ ಮೂಲಕ ಮತ್ತು ಸ್ನೇಹಿತರು, ಕುಟುಂಬ ಸದಸ್ಯರೊಂದಿಗೆ ಬಿಯರ್ ಕುಡಿಯುವ ಮೂಲಕ ಅಥವಾ ಮನೆಯಲ್ಲಿಯೇ ಪಾರ್ಟಿ ಮಾಡುವ ಮೂಲಕ ಬಿಯರ್ ದಿನವನ್ನು ಆಚರಿಸುತ್ತಾರೆ.

ಬಿಯರ್​​ನ ಪ್ರಯೋಜನಗಳು

ಹೆಲ್ತ್ ಲೈನ್​​​ನ ವರದಿಯ ಪ್ರಕಾರ, 355 ಮಿಲಿ ಕ್ಯಾನ್ ಬಿಯರ್ ನಲ್ಲಿ 153 ಕ್ಯಾಲೋರಿಗಳಿವೆ. ಇದು ಕೆಲವು ಖನಿಜಗಳು ಮತ್ತು ವಿಟಮಿನ್​​​ಗಳನ್ನು ಸಹ ಒಳಗೊಂಡಿದೆ. ಬಿಯರ್​​​ನ್ನು ಧಾನ್ಯಗಳು ಮತ್ತು ಯೀಸ್ಟ್​​ನಿಂದ ತಯಾರಿಸಲಾಗುತ್ತದೆ. ಬಿಯರ್​​ನ ಮಿತವಾದ ಸೇವನೆ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಎಂದು ಸಂಶೋಧನೆಗಳು ಬಹಿರಂಗಪಡಿಸಿವೆ. ಇದರಲ್ಲಿ ಆಲ್ಕೋಹಾಲ್ ಅಂಶವಿದ್ದು, ಸ್ವಲ್ಪ ಮಟ್ಟಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಬಿಯರ್ ಕುಡಿಯುವುದು ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಮಿತವಾಗಿ ಬಿಯರ್ ಸೇವಿಸುವುದರಿಂದ ಪುರುಷರು ಮತ್ತು ಮಹಿಳೆಯರ ಮೂಲೆಗಳು ಬಲಗೊಳ್ಳುತ್ತವೆ. ಮತ್ತು ಇದು ಬುದ್ಧಿಮಾಂದ್ಯತೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಹೊರತಾಗಿ ಅತಿಯಾದ ಬಿಯರ್ ಸೇವನೆಯು ಬುದ್ಧಿಮಾಂದ್ಯತೆಯ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:  ಪ್ರಮುಖ ಭಾರತೀಯ ಬಿಯರ್ ಕಂಪನಿಗಳ ಕುರಿತು ಮಾಹಿತಿ ಇಲ್ಲಿದೆ

ಬಿಯರ್​​​ನ ಅನಾನುಕೂಲಗಳು:

• ಬಿಯರ್ ಕುಡಿಯುವ ಜನರಲ್ಲಿ ಖಿನ್ನತೆಯ ಅಪಾಯವು, ಬಿಯರ್ ಕುಡಿಯದ ಜನರಿಗಿಂತ ಹಲವು ಪಟ್ಟು ಹೆಚ್ಚು.

• ಹೆಚ್ಚು ಬಿಯರ್ ಕುಡಿಯುವುದರಿಂದ ಸಿರೋಸಿಸ್ ನಂತಹ ಲಿವರ್ ಸಂಬಂಧಿ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ.

• ಒಂದು ಕ್ಯಾನ್ ಬಿಯರ್​​​ನಲ್ಲಿ 153 ಕ್ಯಾಲೋರಿಗಳಿವೆ. ಇದನ್ನು ಪ್ರತಿದಿನ ಸೇವಿಸಿದರೆ ನಿಮ್ಮ ತೂಕ ಹೆಚ್ಚಾಗುತ್ತದೆ.

• ಆಲ್ಕೋಹಾಯುಕ್ತ ಪಾನೀಯಗಳನ್ನು ಕುಡಿಯುವುದರಿಂದ ಗಂಟಲು ಮತ್ತು ಬಾಯಿ ಕ್ಯಾನ್ಸರ್ ಸೇರಿದಂತೆ ಅನೇಕ ರೀತಿಯ ಕ್ಯಾನ್ಸರ್ ಅಪಾಯಗಳು ಹೆಚ್ಚಾಗುತ್ತವೆ.

• ಬಿಯರ್ ಸೇವನೆಯು ಅಧಿಕ ರಕ್ತದೊತ್ತಡ ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​​ ಮಾಡಿ: 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ