AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮಲಗೋ ಮುನ್ನ ಪಾದಗಳನ್ನು ತೊಳೆಯೋದು ಎಷ್ಟು ಮುಖ್ಯ ಗೊತ್ತಾ?

ಅನೇಕ ಜನರು ನೈರ್ಮಲ್ಯ ಮತ್ತು ಆರೋಗ್ಯದ ದೃಷ್ಟಿಯಿಂದ ಮಲಗುವ ಮುನ್ನ ಹಲ್ಲುಜ್ಜುತ್ತಾರೆ, ಮುಖ, ಕೈಗಳನ್ನು ಚೆನ್ನಾಗಿ ತೊಳೆಯುತ್ತಾರೆ. ಅದೇ ರೀತಿ ಪ್ರತಿ ರಾತ್ರಿ ಮಲಗುವ ಮುನ್ನ ಪಾದಗಳನ್ನು ಸಹ ತಪ್ಪದೇ ತೊಳೆಯಬೇಕು ಎನ್ನುತ್ತಾರೆ ತಜ್ಞರು. ಹಾಗಿದ್ದರೆ ರಾತ್ರಿ ಮಲಗುವ ಮುನ್ನ ಕಾಲುಗಳನ್ನು ತೊಳೆಯುವುದು ಏಕೆ ಅಷ್ಟು ಮುಖ್ಯ ಎಂಬುದನ್ನು ನೋಡೋಣ ಬನ್ನಿ.

ರಾತ್ರಿ ಮಲಗೋ ಮುನ್ನ ಪಾದಗಳನ್ನು ತೊಳೆಯೋದು ಎಷ್ಟು ಮುಖ್ಯ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on:May 05, 2026 | 7:57 PM

Share

ವೈಯಕ್ತಿಕ ನೈರ್ಮಲ್ಯದ (Hygiene) ಬಗ್ಗೆ ಪ್ರತಿಯೊಬ್ಬರೂ ಸಹ ಕಾಳಜಿ ವಹಿಸಬೇಕು. ಇದು ಸೋಂಕುಗಳನ್ನು ತಡೆಗಟ್ಟಲು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನೈರ್ಮಲ್ಯದ ದೃಷ್ಟಿಯಿಂದ ನಾವು ಪ್ರತಿನಿತ್ಯ ಸ್ನಾನ ಮಾಡುತ್ತೇವೆ ಮತ್ತು ಆಗಾಗ್ಗೆ ಕೈಗಳನ್ನು ತೊಳೆದುಕೊಳ್ಳುತ್ತೇವೆ. ಕಾಲುಗಳ ಆರೈಕೆಯ ಬಗ್ಗೆ ಅಷ್ಟಾಗಿ ಗಮನ ಹರಿಸುವುದಿಲ್ಲ. ಅದರಲ್ಲೂ ಮಲಗುವ ಮುನ್ನ ಕಡ್ಡಾಯವಾಗಿ ಪಾದಗಳನ್ನು ತೊಳೆದೇ ಮಲಗಬೇಕು ಎಂಬುದು ಅನೇಕರಿಗೆ ಗೊತ್ತೇ ಇಲ್ಲ. ತಜ್ಞರು ಹೇಳುವಂತೆ, ವಿಶೇಷವಾಗಿ ಮಲಗುವ ಮೊದಲು, ಪಾದಗಳನ್ನು ತೊಳೆಯದಿದ್ದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಿದ್ದರೆ ಪಾದಗಳನ್ನು ತೊಳೆಯುವುದು ಏಕೆ ಅಷ್ಟು ಮುಖ್ಯ ಎಂಬುದನ್ನು ನೋಡೋಣ ಬನ್ನಿ.

ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆಯುವುದು ಏಕೆ ಮುಖ್ಯ?

ತಜ್ಞರ ಪ್ರಕಾರ, ಪ್ರತಿಯೊಬ್ಬರೂ ಮಲಗುವ ಮೊದಲು ತಮ್ಮ ಪಾದಗಳನ್ನು ತೊಳೆಯಬೇಕು. ನಮ್ಮ ಪಾದಗಳು ಆಗಾಗ್ಗೆ ನೆಲವನ್ನು ಸ್ಪರ್ಶಿಸುವುದರಿಂದ, ಧೂಳು ಮತ್ತು ಸೂಕ್ಷ್ಮಜೀವಿಗಳು ಅವುಗಳಿಗೆ ಅಂಟಿಕೊಳ್ಳಬಹುದು. ಹಾಗಾಗಿ ಪಾದಗಳನ್ನು ತೊಳೆಯದೆ ಮಲಗುವುದರಿಂದ, ಈ ಧೂಳು ಮತ್ತು ಸೂಕ್ಷ್ಮಜೀವಿಗಳು  ಮೂಗು, ಬಾಯಿ ಮತ್ತು ಚರ್ಮವನ್ನು ಸುಲಭವಾಗಿ ತಲುಪಬಹುದು, ಇದರಿಂದಾಗಿ ಸೋಂಕು ಉಂಟಾಗುತ್ತದೆ. ಹೀಗಿರುವಾಗ ನಿಮ್ಮ ಪಾದಗಳನ್ನು ತೊಳೆಯುವುದರಿಂದ ಸೋಂಕಿನ ಅಪಾಯ ಕಡಿಮೆಯಾಗುತ್ತದೆ. ಅಲ್ಲದೆ ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆಯುವುದು ಕೊಳಕು ಮತ್ತು ಸೂಕ್ಷ್ಮಜೀವಿಗಳು ನಿಮ್ಮ ಹಾಸಿಗೆಯ ಮೇಲೆ ಬರದಂತೆ ತಡೆಯಲು ಇರುವಂತಹ  ಆರೋಗ್ಯಕರ ಮಾರ್ಗವಾಗಿದೆ.

ಮಲಗುವ ಮುನ್ನ ಪಾದಗಳನ್ನು ತೊಳೆಯದಿದ್ದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ?

ಕಾಲು ತೊಳೆಯದೆ ಮಲಗುವುದರಿಂದ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸೋಂಕು ಉಂಟಾಗುತ್ತದೆ. ಇದು ಪಾದಗಳ ಮೇಲೆ ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು ಹೌದು ತುರಿಕೆ, ಕೆಂಪು, ಬಿರುಕು ಬಿಟ್ಟ ಹಿಮ್ಮಡಿಗಳು, ಗುಳ್ಳೆಗಳು ಮತ್ತು ಊತ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ವಿಶೇಷವಾಗಿ ಕ್ರೀಡಾಪಟುಗಳು ಮತ್ತು ವಿದ್ಯಾರ್ಥಿಗಳಲ್ಲಿ, ದೀರ್ಘಕಾಲದವರೆಗೆ ಬೂಟುಗಳನ್ನು ಧರಿಸುವಲ್ಲಿ ಕಂಡುಬರುತ್ತವೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಬೆವರಿನ ದುರ್ವಾಸನೆಯನ್ನು ಹೋಗಲಾಡಿಸಲು ಸ್ನಾನದ ನೀರಿಗೆ ವಸ್ತುವನ್ನು ಸೇರಿಸಿ

ಜನರು ಮಲಗುವ ಮೊದಲು ತಮ್ಮ ಪಾದಗಳನ್ನು ಕಡ್ಡಾಯವಾಗಿ ತೊಳೆಯಲೇಬೇಕು?

ವೈದ್ಯರ ಪ್ರಕಾರ, ಎಲ್ಲರೂ ಮಲಗುವ ಮುನ್ನ ತಮ್ಮ ಪಾದಗಳನ್ನು ತೊಳೆಯಬೇಕು, ಆದರೆ ಮಧುಮೇಹಿಗಳು ವಿಶೇಷವಾಗಿ ಜಾಗರೂಕರಾಗಿರಬೇಕು. ಅವರು ಪಾದಗಳ ನೈರ್ಮಲ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಬೇಕು. ಏಕೆಂದರೆ ಮಧುಮೇಹಿಗಳು ಕಡಿಮೆ ರೋಗನಿರೋಧಕ ಶಕ್ತಿಯಿಂದಾಗಿ ಸೋಂಕುಗಳಿಗೆ ಹೆಚ್ಚು ಒಳಗಾಗುತ್ತಾರೆ. ಆದ್ದರಿಂದ, ಅವರು ಜಾಗರೂಕರಾಗಿರಬೇಕು ಮತ್ತು ಮಲಗುವ ಮುನ್ನ ತಮ್ಮ ಪಾದಗಳನ್ನು ತೊಳೆಯಲೇಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Tue, 5 May 26

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​