Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾತ ಮತ್ತು ಕಫಕ್ಕೆ ಪುಲಿ ಚಾಲಿಚತು ಉತ್ತಮ, ಇದನ್ನು ಮಾಡುವುದು ಹೇಗೆ?

ಪ್ರತಿದಿನ ಅಡಿಗೆ ಏನು ಮಾಡುವುದು ಎಂದು ತಲೆ ಕೆಡಿಸಿಕೊಳ್ಳುವವರಿಗೆ, ಹಾಗೂ ಹುಳಿ, ಕಾರವಿರುವ ಆಹಾರ ಇಷ್ಟ ಪಡುವವರಿಗೆ, ವಾತ ಮತ್ತು ಕಫದ ಸಮಸ್ಯೆ ಹೊಂದಿರುವವರಿಗೆ ಇದು ತಕ್ಕ ರೆಸಿಪಿಯಾಗಿದೆ. ಮಾಡುವುದು ಹೇಗೆ ಅಂದುಕೊಳ್ಳುತ್ತಿದ್ದೀರಾ? ತುಂಬಾ ಸುಲಭ ರೆಸಿಪಿಯಾಗಿದ್ದು, ಮಾಡುವ ವಿಧಾನ ಇಲ್ಲಿದೆ.

ವಾತ ಮತ್ತು ಕಫಕ್ಕೆ ಪುಲಿ ಚಾಲಿಚತು ಉತ್ತಮ, ಇದನ್ನು ಮಾಡುವುದು ಹೇಗೆ?
ಪುಲಿ ಚಾಲಿಚತು
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 07, 2023 | 11:13 AM

ಹೆಸರು ಕೇಳುವುದಕ್ಕೆ ಸ್ವಲ್ಪ ವಿಚಿತ್ರವಾಗಿದ್ದರೂ ಕೂಡ ಇದರ ರುಚಿ ಮಾತ್ರ ಅಗಣಿತ. ಮನೆಯಲ್ಲಿ ಸುಲಭ ಮತ್ತು ವೇಗವಾಗಿ ಮಾಡಿಕೊಳ್ಳಬಹುದಾದ ಈ ಪದಾರ್ಥ ನಿಮಗೆ ಯಾವುದೇ ರೀತಿಯ ಕೆಲಸ ನೀಡದೆಯೇ ಅತಿ ಹೆಚ್ಚು ರುಚಿ ನೀಡುತ್ತದೆ. ಅಡಿಗೆ ಏನು ಮಾಡುವುದು ಎಂದು ತಲೆ ಕೆಡಿಸಿಕೊಳ್ಳುವವರಿಗೆ, ಹಾಗೂ ಹುಳಿ, ಕಾರವಿರುವ ಆಹಾರ ಇಷ್ಟ ಪಡುವವರಿಗೆ. ವಾತ ಮತ್ತು ಕಫದ ಸಮಸ್ಯೆ ಹೊಂದಿರುವವರಿಗೆ ಇದು ತಕ್ಕ ರೆಸಿಪಿಯಾಗಿದೆ. ಮಾಡುವುದು ಹೇಗೆ ಅಂದುಕೊಳ್ಳುತ್ತಿದ್ದೀರಾ? ತುಂಬಾ ಸುಲಭ ರೆಸಿಪಿಯಾಗಿದ್ದು, ಮಾಡುವ ವಿಧಾನ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು:

ಹುಣಸೆಹಣ್ಣು- ದೊಡ್ಡ ಲಿಂಬೆ ಹಣ್ಣಿನ ಗಾತ್ರದಷ್ಟು (ಹುಳಿ ಜಾಸ್ತಿ ತಿನ್ನುವವರು ಇನ್ನು ಸ್ವಲ್ಪ ಸೇರಿಸಿಕೊಳ್ಳಬಹುದು)

ಈರುಳ್ಳಿ – 1

ಹಸಿ ಮೆಣಸು – 1

ರುಚಿಗೆ ತಕ್ಕಷ್ಟು ಉಪ್ಪು

ಸ್ವಲ್ಪ ತೆಂಗಿನ ಎಣ್ಣೆ

ಇದನ್ನೂ ಓದಿ:ಮನೆಯಲ್ಲಿಯೇ ಆರೋಗ್ಯಕರ ಮ್ಯಾಗಿ ಮ್ಯಾಜಿಕ್ ಮಸಾಲ ತಯಾರಿಸುವುದು ಹೇಗೆ? 

ಮಾಡುವ ವಿಧಾನ:

ಮೊದಲು ಹುಣಸೆಹಣ್ಣನ್ನು ನೀರಿನಲ್ಲಿ ನೆನೆಸಿಡಿ. ಈರುಳ್ಳಿ ಮತ್ತು ಹಸಿ ಮೆಣಸನ್ನು ಹೆಚ್ಚಿ ಅದನ್ನು ಚೆನ್ನಾಗಿ ಜಜ್ಜಿಕೊಳ್ಳಿ ಬಳಿಕ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಕಲಸಿಕೊಳ್ಳಿ. ಜಜ್ಜಿಕೊಂಡ ಮಿಶ್ರಣವನ್ನು ಒಂದು ಪಾತ್ರೆಗೆ ವರ್ಗಾಯಿಸಿ. ಹುಣಸೆ ನೀರನ್ನು ಅದಕ್ಕೆ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಅದಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ. ಇಷ್ಟು ಮಾಡಿದಲ್ಲಿ ಪುಲಿ ಚಾಲಿಚತು ಬಿಸಿ ಅನ್ನದೊಂದಿಗೆ ಬಡಿಸಲು ಸಿದ್ಧ.

ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವನ್ನು mommycooltales_aishu ಎಂಬ ಇನ್ಸ್ಟ್​​​​ಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು ಹಲವಾರು ಮಂದಿ ರೆಸಿಪಿ ನೋಡಿ ಖುಷಿ ಪಟ್ಟಿದ್ದಾರೆ. ಇನ್ನು ಕೆಲವರು ನಾವು ಕೂಡ ಇಂದೇ ನಮ್ಮ ಮನೆಯಲ್ಲಿ ಮಾಡಿ ತಿನ್ನುತ್ತೇವೆ ಎಂದಿದ್ದಾರೆ. ಮತ್ತೆ ಕೆಲವರು ಇಂತಹ ಹಲವಾರು ಸುಲಭ ರೆಸಿಪಿಗಳನ್ನು ನಮ್ಮೊಂದಿಗೆ ಮತ್ತೆ ಮತ್ತೆ ಹಂಚಿಕೊಳ್ಳಿ ಎಂದಿದ್ದಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!