AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾತ ಮತ್ತು ಕಫಕ್ಕೆ ಪುಲಿ ಚಾಲಿಚತು ಉತ್ತಮ, ಇದನ್ನು ಮಾಡುವುದು ಹೇಗೆ?

ಪ್ರತಿದಿನ ಅಡಿಗೆ ಏನು ಮಾಡುವುದು ಎಂದು ತಲೆ ಕೆಡಿಸಿಕೊಳ್ಳುವವರಿಗೆ, ಹಾಗೂ ಹುಳಿ, ಕಾರವಿರುವ ಆಹಾರ ಇಷ್ಟ ಪಡುವವರಿಗೆ, ವಾತ ಮತ್ತು ಕಫದ ಸಮಸ್ಯೆ ಹೊಂದಿರುವವರಿಗೆ ಇದು ತಕ್ಕ ರೆಸಿಪಿಯಾಗಿದೆ. ಮಾಡುವುದು ಹೇಗೆ ಅಂದುಕೊಳ್ಳುತ್ತಿದ್ದೀರಾ? ತುಂಬಾ ಸುಲಭ ರೆಸಿಪಿಯಾಗಿದ್ದು, ಮಾಡುವ ವಿಧಾನ ಇಲ್ಲಿದೆ.

ವಾತ ಮತ್ತು ಕಫಕ್ಕೆ ಪುಲಿ ಚಾಲಿಚತು ಉತ್ತಮ, ಇದನ್ನು ಮಾಡುವುದು ಹೇಗೆ?
ಪುಲಿ ಚಾಲಿಚತು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Dec 07, 2023 | 11:13 AM

Share

ಹೆಸರು ಕೇಳುವುದಕ್ಕೆ ಸ್ವಲ್ಪ ವಿಚಿತ್ರವಾಗಿದ್ದರೂ ಕೂಡ ಇದರ ರುಚಿ ಮಾತ್ರ ಅಗಣಿತ. ಮನೆಯಲ್ಲಿ ಸುಲಭ ಮತ್ತು ವೇಗವಾಗಿ ಮಾಡಿಕೊಳ್ಳಬಹುದಾದ ಈ ಪದಾರ್ಥ ನಿಮಗೆ ಯಾವುದೇ ರೀತಿಯ ಕೆಲಸ ನೀಡದೆಯೇ ಅತಿ ಹೆಚ್ಚು ರುಚಿ ನೀಡುತ್ತದೆ. ಅಡಿಗೆ ಏನು ಮಾಡುವುದು ಎಂದು ತಲೆ ಕೆಡಿಸಿಕೊಳ್ಳುವವರಿಗೆ, ಹಾಗೂ ಹುಳಿ, ಕಾರವಿರುವ ಆಹಾರ ಇಷ್ಟ ಪಡುವವರಿಗೆ. ವಾತ ಮತ್ತು ಕಫದ ಸಮಸ್ಯೆ ಹೊಂದಿರುವವರಿಗೆ ಇದು ತಕ್ಕ ರೆಸಿಪಿಯಾಗಿದೆ. ಮಾಡುವುದು ಹೇಗೆ ಅಂದುಕೊಳ್ಳುತ್ತಿದ್ದೀರಾ? ತುಂಬಾ ಸುಲಭ ರೆಸಿಪಿಯಾಗಿದ್ದು, ಮಾಡುವ ವಿಧಾನ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು:

ಹುಣಸೆಹಣ್ಣು- ದೊಡ್ಡ ಲಿಂಬೆ ಹಣ್ಣಿನ ಗಾತ್ರದಷ್ಟು (ಹುಳಿ ಜಾಸ್ತಿ ತಿನ್ನುವವರು ಇನ್ನು ಸ್ವಲ್ಪ ಸೇರಿಸಿಕೊಳ್ಳಬಹುದು)

ಈರುಳ್ಳಿ – 1

ಹಸಿ ಮೆಣಸು – 1

ರುಚಿಗೆ ತಕ್ಕಷ್ಟು ಉಪ್ಪು

ಸ್ವಲ್ಪ ತೆಂಗಿನ ಎಣ್ಣೆ

ಇದನ್ನೂ ಓದಿ:ಮನೆಯಲ್ಲಿಯೇ ಆರೋಗ್ಯಕರ ಮ್ಯಾಗಿ ಮ್ಯಾಜಿಕ್ ಮಸಾಲ ತಯಾರಿಸುವುದು ಹೇಗೆ? 

ಮಾಡುವ ವಿಧಾನ:

ಮೊದಲು ಹುಣಸೆಹಣ್ಣನ್ನು ನೀರಿನಲ್ಲಿ ನೆನೆಸಿಡಿ. ಈರುಳ್ಳಿ ಮತ್ತು ಹಸಿ ಮೆಣಸನ್ನು ಹೆಚ್ಚಿ ಅದನ್ನು ಚೆನ್ನಾಗಿ ಜಜ್ಜಿಕೊಳ್ಳಿ ಬಳಿಕ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಕಲಸಿಕೊಳ್ಳಿ. ಜಜ್ಜಿಕೊಂಡ ಮಿಶ್ರಣವನ್ನು ಒಂದು ಪಾತ್ರೆಗೆ ವರ್ಗಾಯಿಸಿ. ಹುಣಸೆ ನೀರನ್ನು ಅದಕ್ಕೆ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಅದಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ. ಇಷ್ಟು ಮಾಡಿದಲ್ಲಿ ಪುಲಿ ಚಾಲಿಚತು ಬಿಸಿ ಅನ್ನದೊಂದಿಗೆ ಬಡಿಸಲು ಸಿದ್ಧ.

ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವನ್ನು mommycooltales_aishu ಎಂಬ ಇನ್ಸ್ಟ್​​​​ಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು ಹಲವಾರು ಮಂದಿ ರೆಸಿಪಿ ನೋಡಿ ಖುಷಿ ಪಟ್ಟಿದ್ದಾರೆ. ಇನ್ನು ಕೆಲವರು ನಾವು ಕೂಡ ಇಂದೇ ನಮ್ಮ ಮನೆಯಲ್ಲಿ ಮಾಡಿ ತಿನ್ನುತ್ತೇವೆ ಎಂದಿದ್ದಾರೆ. ಮತ್ತೆ ಕೆಲವರು ಇಂತಹ ಹಲವಾರು ಸುಲಭ ರೆಸಿಪಿಗಳನ್ನು ನಮ್ಮೊಂದಿಗೆ ಮತ್ತೆ ಮತ್ತೆ ಹಂಚಿಕೊಳ್ಳಿ ಎಂದಿದ್ದಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್