AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ

ವಿಟಮಿನ್ ಸಿ ಹಾಗೂ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಹಣ್ಣು ಮಾತ್ರವಲ್ಲ ಅದರ ಸಿಪ್ಪೆಯೂ ಔಷಧೀಯ ಗುಣಗಳಿಂದ ಕೂಡಿದೆ. ಆದರೆ ಅನೇಕರು ಕಿತ್ತಳೆ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದು ಬಿಡುತ್ತಾರೆ. ಅವುಗಳನ್ನು ಎಸೆಯುವ ಬದಲು ನೀವು ಅವುಗಳನ್ನು ವಿವಿಧ ಪ್ರಯೋಜನಗಳಿಗಾಗಿ ಬಳಸಬಹುದು. ಈ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ
ಕಿತ್ತಳೆ ಹಣ್ಣಿನ ಸಿಪ್ಪೆImage Credit source: vecteezy
ಮಾಲಾಶ್ರೀ ಅಂಚನ್​
|

Updated on: Jan 15, 2026 | 3:44 PM

Share

ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ, ಉತ್ಕರ್ಷಣ ನಿರೋಧಕಗಳು, ಅಮೂನO ಆಮ್ಲಗಳು, ಕ್ಯಾಲ್ಸಿಯಂ, ಅಯೋಡಿನ್‌, ರಂಜಕ, ಫೈಬರ್‌ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ  ಹಣ್ಣು (orange) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಹೆಚ್ಚಿನ ಜನರು ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ಆದರೆ ಏನು ಗೊತ್ತಾ, ಕಿತ್ತಳೆ ಹಣ್ಣಿನಂತೆ, ಇದರ ಸಿಪ್ಪೆ ಕೂಡ ಅನೇಕ ಪ್ರಯೋಜನಗಳನ್ನು ಹೊಂದಿದ್ದು,  ಇವು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯ ವೃದ್ಧಿಗೂ ಪ್ರಯೋಜನಕಾರಿ. ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಅದರ ಪುಡಿಯನ್ನು ಬಳಸಿ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಬಹುದು. ನೀವು ಗಿಡಮೂಲಿಕೆ ಚಹಾವನ್ನು ತಯಾರಿಸಿ ಕುಡಿಯಬಹುದು. ಹಾಗಿದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯ ಪ್ರಯೋಜನಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.

ಕಿತ್ತಳೆ ಹಣ್ಣಿನ ಸಿಪ್ಪೆಯ ಪ್ರಯೋಜನಗಳೇನು?

ಜೀರ್ಣಕ್ರಿಯೆಗೆ ಸಹಕಾರಿ: ಕಿತ್ತಳೆ ಸಿಪ್ಪೆಗಳು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ಪರಿಣಾಮಕಾರಿ. ಅವುಗಳಲ್ಲಿ ಫೈಬರ್ ಇದ್ದು, ಇದು ಮಲಬದ್ಧತೆ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೀವು ಕಿತ್ತಳೆ ಸಿಪ್ಪೆಗಳನ್ನು ಅಥವಾ ಅದರ ಪುಡಿಯನ್ನು ನೀರಿನೊಂದಿಗೆ ಕುಡಿಯಬಹುದು.

ತಲೆಹೊಟ್ಟು ನಿವಾರಣೆ: ಕಿತ್ತಳೆ ಸಿಪ್ಪೆಯ ಪುಡಿಯನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗುತ್ತದೆ.

ಚರ್ಮಕ್ಕೆ ಪ್ರಯೋಜನಕಾರಿ:  ಕಿತ್ತಳೆ ಸಿಪ್ಪೆಯ ಪುಡಿಯನ್ನು ಚರ್ಮಕ್ಕೆ ಹಚ್ಚುವುದರಿಂದ ಮೊಡವೆ ಮತ್ತು ಕಲೆಗಳನ್ನು ಕಡಿಮೆ ಮಾಡಬಹುದು. ಇದರಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಹೊಳೆಯುವಂತೆ ಮತ್ತು ಆರೋಗ್ಯಕರವಾಗಿಡುತ್ತದೆ. ಇದು ಚರ್ಮದ ಎಣ್ಣೆಯನ್ನು ನಿಯಂತ್ರಿಸುತ್ತದೆ ಮತ್ತು ಅದರ ವಯಸ್ಸಾದ ವಿರೋಧಿ ಗುಣಗಳಿಂದಾಗಿ ಸುಕ್ಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯ ಹೆಚ್ಚಳ: ಕಿತ್ತಳೆ ಹಣ್ಣಿನಲ್ಲಿ ಅತ್ಯಧಿಕ ಪ್ರಮಾಣದ ವಿಟಮಿನ್ ಸಿ ಇರುತ್ತದೆ, ಅದೇ ರೀತಿ ಅದರ ಸಿಪ್ಪೆಯಲ್ಲಿಯೂ ವಿಟಮಿನ್ ಸಿ ಇರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿ ನೀವು ಕಿತ್ತಳೆ ಸಿಪ್ಪೆಯಿಂದ ಚಹಾ ತಯಾರಿಸಿ ಪ್ರತಿದಿನ ಕುಡಿಯಬಹುದು.

ತೂಕ ಇಳಿಸಿಕೊಳ್ಳಲು ಸಹಕಾರಿ: ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಿತ್ತಳೆ ಸಿಪ್ಪೆಯಿಂದ ಚಹಾ ತಯಾರಿಸಿ ಕುಡಿಯಬಹುದು. ಈ ಸಿಪ್ಪೆಯಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ ಮತ್ತು ತೂಕ ನಷ್ಟವನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಕೈ ಕಾಲುಗಳನ್ನು ಸ್ವಚ್ಛಗೊಳಿಸುತ್ತದೆ: ಕಿತ್ತಳೆ ಸಿಪ್ಪೆಯನ್ನು ಕೈಕಾಲು ಶುಚಿಗೊಳಿಸುವಿಕೆಗೂ ಬಳಸಬಹುದು. ಈ ಸಿಪ್ಪೆಯು ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ಕೈ ಮತ್ತು ಪಾದಗಳನ್ನು ಸ್ವಚ್ಛಗೊಳಿಸಲು ನೀವು ಕಿತ್ತಳೆ ಸಿಪ್ಪೆಯನ್ನು ಪಾದಗಳ ಮೇಲೆ ಉಜ್ಜಿ ಮೇಲೆ ಉಜ್ಜಬಹುದು, ಇದರಿಂದ ನಿಮ್ಮ ಚರ್ಮವು ಮೃದು ಮತ್ತು ಸುಂದರವಾಗಿರುತ್ತದೆ. ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ನೈಸರ್ಗಿಕ ಸ್ಕ್ರಬ್ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹ ಸಹಾಯ ಮಾಡುತ್ತದೆ.

ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ: ಕಿತ್ತಳೆ ಸಿಪ್ಪೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು ಅದು ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಈ ಸಿಪ್ಪೆಯನ್ನು ಅಗಿಯುವುದರಿಂದ ಬಾಯಿಯ ದುರ್ವಾಸನೆಯೂ ನಿವಾರಣೆಯಾಗುತ್ತದೆ. ಹೆಚ್ಚುವರಿಯಾಗಿ, ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ಬಾಯಿ ಮುಕ್ಕಳಿಸುವ ದ್ರವ ಗಂಟಲಿನ ಸಮಸ್ಯೆಗಳನ್ನು ಸಹ ಶಮನಗೊಳಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?