AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ

ವಿಟಮಿನ್ ಸಿ ಹಾಗೂ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಹಣ್ಣು ಮಾತ್ರವಲ್ಲ ಅದರ ಸಿಪ್ಪೆಯೂ ಔಷಧೀಯ ಗುಣಗಳಿಂದ ಕೂಡಿದೆ. ಆದರೆ ಅನೇಕರು ಕಿತ್ತಳೆ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದು ಬಿಡುತ್ತಾರೆ. ಅವುಗಳನ್ನು ಎಸೆಯುವ ಬದಲು ನೀವು ಅವುಗಳನ್ನು ವಿವಿಧ ಪ್ರಯೋಜನಗಳಿಗಾಗಿ ಬಳಸಬಹುದು. ಈ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ
ಕಿತ್ತಳೆ ಹಣ್ಣಿನ ಸಿಪ್ಪೆImage Credit source: vecteezy
ಮಾಲಾಶ್ರೀ ಅಂಚನ್​
|

Updated on: Jan 15, 2026 | 3:44 PM

Share

ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ, ಉತ್ಕರ್ಷಣ ನಿರೋಧಕಗಳು, ಅಮೂನO ಆಮ್ಲಗಳು, ಕ್ಯಾಲ್ಸಿಯಂ, ಅಯೋಡಿನ್‌, ರಂಜಕ, ಫೈಬರ್‌ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ  ಹಣ್ಣು (orange) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಹೆಚ್ಚಿನ ಜನರು ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ಆದರೆ ಏನು ಗೊತ್ತಾ, ಕಿತ್ತಳೆ ಹಣ್ಣಿನಂತೆ, ಇದರ ಸಿಪ್ಪೆ ಕೂಡ ಅನೇಕ ಪ್ರಯೋಜನಗಳನ್ನು ಹೊಂದಿದ್ದು,  ಇವು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯ ವೃದ್ಧಿಗೂ ಪ್ರಯೋಜನಕಾರಿ. ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಅದರ ಪುಡಿಯನ್ನು ಬಳಸಿ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಬಹುದು. ನೀವು ಗಿಡಮೂಲಿಕೆ ಚಹಾವನ್ನು ತಯಾರಿಸಿ ಕುಡಿಯಬಹುದು. ಹಾಗಿದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯ ಪ್ರಯೋಜನಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.

ಕಿತ್ತಳೆ ಹಣ್ಣಿನ ಸಿಪ್ಪೆಯ ಪ್ರಯೋಜನಗಳೇನು?

ಜೀರ್ಣಕ್ರಿಯೆಗೆ ಸಹಕಾರಿ: ಕಿತ್ತಳೆ ಸಿಪ್ಪೆಗಳು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ಪರಿಣಾಮಕಾರಿ. ಅವುಗಳಲ್ಲಿ ಫೈಬರ್ ಇದ್ದು, ಇದು ಮಲಬದ್ಧತೆ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೀವು ಕಿತ್ತಳೆ ಸಿಪ್ಪೆಗಳನ್ನು ಅಥವಾ ಅದರ ಪುಡಿಯನ್ನು ನೀರಿನೊಂದಿಗೆ ಕುಡಿಯಬಹುದು.

ತಲೆಹೊಟ್ಟು ನಿವಾರಣೆ: ಕಿತ್ತಳೆ ಸಿಪ್ಪೆಯ ಪುಡಿಯನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗುತ್ತದೆ.

ಚರ್ಮಕ್ಕೆ ಪ್ರಯೋಜನಕಾರಿ:  ಕಿತ್ತಳೆ ಸಿಪ್ಪೆಯ ಪುಡಿಯನ್ನು ಚರ್ಮಕ್ಕೆ ಹಚ್ಚುವುದರಿಂದ ಮೊಡವೆ ಮತ್ತು ಕಲೆಗಳನ್ನು ಕಡಿಮೆ ಮಾಡಬಹುದು. ಇದರಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಹೊಳೆಯುವಂತೆ ಮತ್ತು ಆರೋಗ್ಯಕರವಾಗಿಡುತ್ತದೆ. ಇದು ಚರ್ಮದ ಎಣ್ಣೆಯನ್ನು ನಿಯಂತ್ರಿಸುತ್ತದೆ ಮತ್ತು ಅದರ ವಯಸ್ಸಾದ ವಿರೋಧಿ ಗುಣಗಳಿಂದಾಗಿ ಸುಕ್ಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯ ಹೆಚ್ಚಳ: ಕಿತ್ತಳೆ ಹಣ್ಣಿನಲ್ಲಿ ಅತ್ಯಧಿಕ ಪ್ರಮಾಣದ ವಿಟಮಿನ್ ಸಿ ಇರುತ್ತದೆ, ಅದೇ ರೀತಿ ಅದರ ಸಿಪ್ಪೆಯಲ್ಲಿಯೂ ವಿಟಮಿನ್ ಸಿ ಇರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿ ನೀವು ಕಿತ್ತಳೆ ಸಿಪ್ಪೆಯಿಂದ ಚಹಾ ತಯಾರಿಸಿ ಪ್ರತಿದಿನ ಕುಡಿಯಬಹುದು.

ತೂಕ ಇಳಿಸಿಕೊಳ್ಳಲು ಸಹಕಾರಿ: ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಿತ್ತಳೆ ಸಿಪ್ಪೆಯಿಂದ ಚಹಾ ತಯಾರಿಸಿ ಕುಡಿಯಬಹುದು. ಈ ಸಿಪ್ಪೆಯಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ ಮತ್ತು ತೂಕ ನಷ್ಟವನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಕೈ ಕಾಲುಗಳನ್ನು ಸ್ವಚ್ಛಗೊಳಿಸುತ್ತದೆ: ಕಿತ್ತಳೆ ಸಿಪ್ಪೆಯನ್ನು ಕೈಕಾಲು ಶುಚಿಗೊಳಿಸುವಿಕೆಗೂ ಬಳಸಬಹುದು. ಈ ಸಿಪ್ಪೆಯು ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ಕೈ ಮತ್ತು ಪಾದಗಳನ್ನು ಸ್ವಚ್ಛಗೊಳಿಸಲು ನೀವು ಕಿತ್ತಳೆ ಸಿಪ್ಪೆಯನ್ನು ಪಾದಗಳ ಮೇಲೆ ಉಜ್ಜಿ ಮೇಲೆ ಉಜ್ಜಬಹುದು, ಇದರಿಂದ ನಿಮ್ಮ ಚರ್ಮವು ಮೃದು ಮತ್ತು ಸುಂದರವಾಗಿರುತ್ತದೆ. ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ನೈಸರ್ಗಿಕ ಸ್ಕ್ರಬ್ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹ ಸಹಾಯ ಮಾಡುತ್ತದೆ.

ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ: ಕಿತ್ತಳೆ ಸಿಪ್ಪೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು ಅದು ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಈ ಸಿಪ್ಪೆಯನ್ನು ಅಗಿಯುವುದರಿಂದ ಬಾಯಿಯ ದುರ್ವಾಸನೆಯೂ ನಿವಾರಣೆಯಾಗುತ್ತದೆ. ಹೆಚ್ಚುವರಿಯಾಗಿ, ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ಬಾಯಿ ಮುಕ್ಕಳಿಸುವ ದ್ರವ ಗಂಟಲಿನ ಸಮಸ್ಯೆಗಳನ್ನು ಸಹ ಶಮನಗೊಳಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​