AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಕರವೆಂದು ಪರಿಗಣಿಸುವ ವೀಳ್ಯದೆಲೆಯ ಆರೋಗ್ಯ ಪ್ರಯೋಜನಗಳೇನು?

ಭಾರತೀಯರು ವೀಳ್ಯದೆಲೆಗೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ. ಹೀಗಾಗಿ ಶುಭಕಾರ್ಯಗಳಾದ ಪೂಜೆ, ಮದುವೆ ಸಮಾರಂಭಗಳಲ್ಲಿ ವೀಳ್ಯದೆಲೆಯ ಈ ವೀಳ್ಯದೆಲೆಯನ್ನು ಹೆಚ್ಚಾಗಿ ಬಳಸುತ್ತಾರೆ. ಮಂಗಳಕರದ ಸಂಕೇತವಾಗಿರುವ ಈ ಎಲೆಯಲ್ಲಿ ಆರೋಗ್ಯ ಲಾಭಗಳು ಅಧಿಕವಿದ್ದು, ಔಷಧೀಯ ತಯಾರಿಕೆಯಲ್ಲಿ ಬಳಕೆ ಮಾಡಲಾಗುತ್ತದೆ. ರೋಗ ನಿರೋಧಕಗುಣವನ್ನು ಹೊಂದಿರುವ ಕಾರಣ ಊಟವಾದ ಬಳಿಕ ಎಲೆಯಡಿಕೆಯನ್ನು ಸೇವಿಸುವ ಅಭ್ಯಾಸವಿದೆ.

ಮಂಗಳಕರವೆಂದು ಪರಿಗಣಿಸುವ ವೀಳ್ಯದೆಲೆಯ ಆರೋಗ್ಯ ಪ್ರಯೋಜನಗಳೇನು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 16, 2024 | 2:37 PM

Share

ಹಳ್ಳಿ ಕಡೆಗಳಲ್ಲಿ ರಾತ್ರಿ ಊಟವಾದ ಬಳಿಕ ಎಲೆಯಡಿಕೆಯನ್ನು ತಿಂದರೇನೇ ತೃಪ್ತಿ. ಹೀಗಾಗಿ ಅನೇಕರಲ್ಲಿ ಊಟದ ಬಳಿಕ ಎಲೆಯಡಿಕೆಯನ್ನು ಮೆಲ್ಲುವ ಅಭ್ಯಾಸವು ಇದೆ. ಇತ್ತೀಚೆಗಿನ ದಿನಗಳಲ್ಲಿ ವಿವಿಧ ಪಾನ್ ಬೀಡಗಳಿಗೆ ಭಾರಿ ಬೇಡಿಕೆಯಿದೆ. ಹೆಚ್ಚಿನವರು ಈ ವೀಳ್ಯದೆಲೆಯಿಂದ ಮಾಡಿದ ಸ್ವೀಟ್ ಪಾನ್ ಅನ್ನು ಇಷ್ಟ ಪಟ್ಟು ಸೇವಿಸುತ್ತಾರೆ. ಆರೋಗ್ಯಕ್ಕೂ ಬಹಳಷ್ಟು ಪ್ರಯೋಜನಕಾರಿಯಾಗಿದ್ದು, ಅನೇಕ ರೋಗ ರುಜಿನಗಳನ್ನು ದೂರ ಮಾಡುವ ಶಕ್ತಿಯು ಈ ವೀಳ್ಯದೆಲೆಯಲ್ಲಿದೆ.

* ವೀಳ್ಯದೆಲೆಯ ಜೊತೆಗೆ ತುಳಸಿ ಎಲೆ, ಲವಂಗ, ಪಚ್ಚಕರ್ಪೂರ ಸೇರಿಸಿ ದಿನಕ್ಕೆ ಎರಡು ಬಾರಿ ಸೇವಿಸುತ್ತಿದ್ದರೆ ಕಫ ಹಾಗೂ ಕೆಮ್ಮಿನ ಸಮಸ್ಯೆಯು ದೂರವಾಗುತ್ತದೆ.

* ತಲೆ ಹೊಟ್ಟು ಹಾಗೂ ಕೂದಲು ಉದುರುವ ಸಮಸ್ಯೆಯಿರುವವರು ವೀಳ್ಯದೆಲೆಯನ್ನು ಅರೆದು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ತೆಲೆಗೆ ಹಚ್ಚಿಕೊಳ್ಳುವುದರಿಂದ ಈ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

* ವೀಳ್ಯದೆಲೆಯಲ್ಲಿ ಬೆಳ್ಳುಳ್ಳಿ ಎಸಳು, ಸಣ್ಣ ತುಂಡು ಶುಂಠಿ, ಜೇನುತುಪ್ಪ ಬೆರೆಸಿ ಜಗಿದು ತಿನ್ನುವುರಿಂದ ರಕ್ತನಾಳಗಳಲ್ಲಿ ರಕ್ತ ಸಂಚಾರವು ಚೆನ್ನಾಗಿ ಆಗುತ್ತದೆ.

* ವೀಳ್ಯದೆಲೆಗೆ ಸ್ವಲ್ಪ ಅರಿಶಿನ ಹಾಕಿ ಮಗುವಿನ ತಲೆಗೆ ತಿಕ್ಕುವುದರಿಂದ ಶೀತದ ಸಮಸ್ಯೆಯು ಕಡಿಮೆಯಾಗುತ್ತದೆ.

* ಎದೆಹಾಲು ಹೆಚ್ಚಾಗಲು ಬಾಣಂತಿಯರು ವೀಳ್ಯದೆಲೆಯನ್ನು ಸೇವಿಸುವುದು ಉತ್ತಮ.

* ಸಣ್ಣ ಪುಟ್ಟ ಗಾಯಗಳಾಗಿ ರಕ್ತ ಬರುತ್ತಿದ್ದರೆ ವೀಳ್ಯದೆಲೆಗಳನ್ನು ಅರೆದು ಗಾಯವಾದಲ್ಲಿಗೆ ಹಚ್ಚಿ ಒತ್ತಿ ಹಿಡಿಯುವುದರಿಂದ ರಕ್ತ ಬರುವುದು ನಿಲ್ಲುತ್ತದೆ.

* ವೀಳ್ಯದೆಲೆಗೆ ಉಪ್ಪು ಹಾಕಿಕೊಂಡು ಅಗಿದು ರಸವನ್ನು ನುಂಗುವುದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ.

* ಎಲೆ ಅಡಿಕೆಯನ್ನು ಮೆಲ್ಲುತ್ತಿದ್ದರೆ ಜೊಲ್ಲು ರಸ ಉತ್ಪತ್ತಿಯಾಗಿ ಜೀರ್ಣ ಶಕ್ತಿಯು ಸುಧಾರಿಸುತ್ತದೆ.

* ಊಟವಾದ ಬಳಿಕ ಎಲೆಯಡಿಕೆ ಹಾಕಿಕೊಳ್ಳುವುದರಿಂದ ಬಾಯಿಯ ದುರ್ವಾಸನೆಯು ದೂರವಾಗಿ ಬಾಯಿಯ ಆರೋಗ್ಯವು ಕಾಪಾಡುತ್ತದೆ.

* ಮುಖವು ಮೊಡವೆಗಳಿಂದ ಅಂದ ಕಳೆದುಕೊಂಡಿದ್ದರೆ, ವೀಳ್ಯದೆಲೆಯೊಂದನ್ನು ನುಣ್ಣಗೆ ಅರೆದು ಮೊಡವೆಗಳಿದ್ದಲ್ಲಿ ಹಚ್ಚಿಕೊಂಡರೆ ಮೊಡವೆ ಹಾಗೂ ಮುಖದ ಮೇಲಿನ ಕಲೆಗಳು ಮಾಯಾವಾಗುತ್ತದೆ.

* ನೋವಿರುವ ಜಾಗಕ್ಕೆ ವೀಳ್ಯದೆಲೆಗಳನ್ನು ಅರೆದು ಕೊಬ್ಬರಿ ಎಣ್ಣೆಯಲ್ಲಿ ಬಿಸಿ ಮಾಡಿ ಹಚ್ಚಿಕೊಳ್ಳುವುದರಿಂದ ನೋವು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಹೊಳೆಯುವ ಚರ್ಮಕ್ಕಾಗಿ.. ಪದೆ ಪದೇ ಮುಖ ತೊಳೆಯುವ ಅಭ್ಯಾಸ ನಿಮಗಿದೆಯೇ? ತಜ್ಞರು ಏನು ಹೇಳ್ತಾರೆ ಗೊತ್ತಾ?

* ದಿನನಿತ್ಯ ವೀಳ್ಯದೆಲೆಯನ್ನು ಸೇವಿಸುತ್ತಿದ್ದರೆ ವಸಡುಗಳಲ್ಲಿ ರಕ್ತ ಬರುವುದು ನಿಲ್ಲುತ್ತದೆ.

* ತೂಕ ಇಳಿಸಿಕೊಳ್ಳಬೇಕೆನ್ನುವವರು ವೀಳ್ಯದೆಲೆಯ ಕಷಾಯವನ್ನು ಮಾಡಿ ಯಥೇಚ್ಛವಾಗಿ ಸೇವಿಸುತ್ತ ಬಂದರೆ ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ.

* ತುರಿಕೆ ಸಮಸ್ಯೆಗೆ ವೀಳ್ಯದೆಲೆಯ ರಸದ ಜೊತೆಗೆ ಲಿಂಬೆ ರಸವನ್ನು ಸೇರಿಸಿದರೆ ಹಚ್ಚಿದರೆ ಕಡಿಮೆಯಾಗುತ್ತದೆ.

* ತಲೆನೋವು ಸಮಸ್ಯೆಯಿದ್ದರೆ ವೀಳ್ಯದೆಲೆಯ ರಸಕ್ಕೆ ಕರ್ಪೂರ ಹಾಗೂ ತೆಂಗಿನೆಣ್ಣೆ ಬೆರೆಸಿ ಹಣೆಗೆ ಹಚ್ಚುವುದರಿಂದ ಗುಣಮುಖವಾಗುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!