AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಕರವೆಂದು ಪರಿಗಣಿಸುವ ವೀಳ್ಯದೆಲೆಯ ಆರೋಗ್ಯ ಪ್ರಯೋಜನಗಳೇನು?

ಭಾರತೀಯರು ವೀಳ್ಯದೆಲೆಗೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ. ಹೀಗಾಗಿ ಶುಭಕಾರ್ಯಗಳಾದ ಪೂಜೆ, ಮದುವೆ ಸಮಾರಂಭಗಳಲ್ಲಿ ವೀಳ್ಯದೆಲೆಯ ಈ ವೀಳ್ಯದೆಲೆಯನ್ನು ಹೆಚ್ಚಾಗಿ ಬಳಸುತ್ತಾರೆ. ಮಂಗಳಕರದ ಸಂಕೇತವಾಗಿರುವ ಈ ಎಲೆಯಲ್ಲಿ ಆರೋಗ್ಯ ಲಾಭಗಳು ಅಧಿಕವಿದ್ದು, ಔಷಧೀಯ ತಯಾರಿಕೆಯಲ್ಲಿ ಬಳಕೆ ಮಾಡಲಾಗುತ್ತದೆ. ರೋಗ ನಿರೋಧಕಗುಣವನ್ನು ಹೊಂದಿರುವ ಕಾರಣ ಊಟವಾದ ಬಳಿಕ ಎಲೆಯಡಿಕೆಯನ್ನು ಸೇವಿಸುವ ಅಭ್ಯಾಸವಿದೆ.

ಮಂಗಳಕರವೆಂದು ಪರಿಗಣಿಸುವ ವೀಳ್ಯದೆಲೆಯ ಆರೋಗ್ಯ ಪ್ರಯೋಜನಗಳೇನು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 16, 2024 | 2:37 PM

Share

ಹಳ್ಳಿ ಕಡೆಗಳಲ್ಲಿ ರಾತ್ರಿ ಊಟವಾದ ಬಳಿಕ ಎಲೆಯಡಿಕೆಯನ್ನು ತಿಂದರೇನೇ ತೃಪ್ತಿ. ಹೀಗಾಗಿ ಅನೇಕರಲ್ಲಿ ಊಟದ ಬಳಿಕ ಎಲೆಯಡಿಕೆಯನ್ನು ಮೆಲ್ಲುವ ಅಭ್ಯಾಸವು ಇದೆ. ಇತ್ತೀಚೆಗಿನ ದಿನಗಳಲ್ಲಿ ವಿವಿಧ ಪಾನ್ ಬೀಡಗಳಿಗೆ ಭಾರಿ ಬೇಡಿಕೆಯಿದೆ. ಹೆಚ್ಚಿನವರು ಈ ವೀಳ್ಯದೆಲೆಯಿಂದ ಮಾಡಿದ ಸ್ವೀಟ್ ಪಾನ್ ಅನ್ನು ಇಷ್ಟ ಪಟ್ಟು ಸೇವಿಸುತ್ತಾರೆ. ಆರೋಗ್ಯಕ್ಕೂ ಬಹಳಷ್ಟು ಪ್ರಯೋಜನಕಾರಿಯಾಗಿದ್ದು, ಅನೇಕ ರೋಗ ರುಜಿನಗಳನ್ನು ದೂರ ಮಾಡುವ ಶಕ್ತಿಯು ಈ ವೀಳ್ಯದೆಲೆಯಲ್ಲಿದೆ.

* ವೀಳ್ಯದೆಲೆಯ ಜೊತೆಗೆ ತುಳಸಿ ಎಲೆ, ಲವಂಗ, ಪಚ್ಚಕರ್ಪೂರ ಸೇರಿಸಿ ದಿನಕ್ಕೆ ಎರಡು ಬಾರಿ ಸೇವಿಸುತ್ತಿದ್ದರೆ ಕಫ ಹಾಗೂ ಕೆಮ್ಮಿನ ಸಮಸ್ಯೆಯು ದೂರವಾಗುತ್ತದೆ.

* ತಲೆ ಹೊಟ್ಟು ಹಾಗೂ ಕೂದಲು ಉದುರುವ ಸಮಸ್ಯೆಯಿರುವವರು ವೀಳ್ಯದೆಲೆಯನ್ನು ಅರೆದು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ತೆಲೆಗೆ ಹಚ್ಚಿಕೊಳ್ಳುವುದರಿಂದ ಈ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

* ವೀಳ್ಯದೆಲೆಯಲ್ಲಿ ಬೆಳ್ಳುಳ್ಳಿ ಎಸಳು, ಸಣ್ಣ ತುಂಡು ಶುಂಠಿ, ಜೇನುತುಪ್ಪ ಬೆರೆಸಿ ಜಗಿದು ತಿನ್ನುವುರಿಂದ ರಕ್ತನಾಳಗಳಲ್ಲಿ ರಕ್ತ ಸಂಚಾರವು ಚೆನ್ನಾಗಿ ಆಗುತ್ತದೆ.

* ವೀಳ್ಯದೆಲೆಗೆ ಸ್ವಲ್ಪ ಅರಿಶಿನ ಹಾಕಿ ಮಗುವಿನ ತಲೆಗೆ ತಿಕ್ಕುವುದರಿಂದ ಶೀತದ ಸಮಸ್ಯೆಯು ಕಡಿಮೆಯಾಗುತ್ತದೆ.

* ಎದೆಹಾಲು ಹೆಚ್ಚಾಗಲು ಬಾಣಂತಿಯರು ವೀಳ್ಯದೆಲೆಯನ್ನು ಸೇವಿಸುವುದು ಉತ್ತಮ.

* ಸಣ್ಣ ಪುಟ್ಟ ಗಾಯಗಳಾಗಿ ರಕ್ತ ಬರುತ್ತಿದ್ದರೆ ವೀಳ್ಯದೆಲೆಗಳನ್ನು ಅರೆದು ಗಾಯವಾದಲ್ಲಿಗೆ ಹಚ್ಚಿ ಒತ್ತಿ ಹಿಡಿಯುವುದರಿಂದ ರಕ್ತ ಬರುವುದು ನಿಲ್ಲುತ್ತದೆ.

* ವೀಳ್ಯದೆಲೆಗೆ ಉಪ್ಪು ಹಾಕಿಕೊಂಡು ಅಗಿದು ರಸವನ್ನು ನುಂಗುವುದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ.

* ಎಲೆ ಅಡಿಕೆಯನ್ನು ಮೆಲ್ಲುತ್ತಿದ್ದರೆ ಜೊಲ್ಲು ರಸ ಉತ್ಪತ್ತಿಯಾಗಿ ಜೀರ್ಣ ಶಕ್ತಿಯು ಸುಧಾರಿಸುತ್ತದೆ.

* ಊಟವಾದ ಬಳಿಕ ಎಲೆಯಡಿಕೆ ಹಾಕಿಕೊಳ್ಳುವುದರಿಂದ ಬಾಯಿಯ ದುರ್ವಾಸನೆಯು ದೂರವಾಗಿ ಬಾಯಿಯ ಆರೋಗ್ಯವು ಕಾಪಾಡುತ್ತದೆ.

* ಮುಖವು ಮೊಡವೆಗಳಿಂದ ಅಂದ ಕಳೆದುಕೊಂಡಿದ್ದರೆ, ವೀಳ್ಯದೆಲೆಯೊಂದನ್ನು ನುಣ್ಣಗೆ ಅರೆದು ಮೊಡವೆಗಳಿದ್ದಲ್ಲಿ ಹಚ್ಚಿಕೊಂಡರೆ ಮೊಡವೆ ಹಾಗೂ ಮುಖದ ಮೇಲಿನ ಕಲೆಗಳು ಮಾಯಾವಾಗುತ್ತದೆ.

* ನೋವಿರುವ ಜಾಗಕ್ಕೆ ವೀಳ್ಯದೆಲೆಗಳನ್ನು ಅರೆದು ಕೊಬ್ಬರಿ ಎಣ್ಣೆಯಲ್ಲಿ ಬಿಸಿ ಮಾಡಿ ಹಚ್ಚಿಕೊಳ್ಳುವುದರಿಂದ ನೋವು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಹೊಳೆಯುವ ಚರ್ಮಕ್ಕಾಗಿ.. ಪದೆ ಪದೇ ಮುಖ ತೊಳೆಯುವ ಅಭ್ಯಾಸ ನಿಮಗಿದೆಯೇ? ತಜ್ಞರು ಏನು ಹೇಳ್ತಾರೆ ಗೊತ್ತಾ?

* ದಿನನಿತ್ಯ ವೀಳ್ಯದೆಲೆಯನ್ನು ಸೇವಿಸುತ್ತಿದ್ದರೆ ವಸಡುಗಳಲ್ಲಿ ರಕ್ತ ಬರುವುದು ನಿಲ್ಲುತ್ತದೆ.

* ತೂಕ ಇಳಿಸಿಕೊಳ್ಳಬೇಕೆನ್ನುವವರು ವೀಳ್ಯದೆಲೆಯ ಕಷಾಯವನ್ನು ಮಾಡಿ ಯಥೇಚ್ಛವಾಗಿ ಸೇವಿಸುತ್ತ ಬಂದರೆ ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ.

* ತುರಿಕೆ ಸಮಸ್ಯೆಗೆ ವೀಳ್ಯದೆಲೆಯ ರಸದ ಜೊತೆಗೆ ಲಿಂಬೆ ರಸವನ್ನು ಸೇರಿಸಿದರೆ ಹಚ್ಚಿದರೆ ಕಡಿಮೆಯಾಗುತ್ತದೆ.

* ತಲೆನೋವು ಸಮಸ್ಯೆಯಿದ್ದರೆ ವೀಳ್ಯದೆಲೆಯ ರಸಕ್ಕೆ ಕರ್ಪೂರ ಹಾಗೂ ತೆಂಗಿನೆಣ್ಣೆ ಬೆರೆಸಿ ಹಣೆಗೆ ಹಚ್ಚುವುದರಿಂದ ಗುಣಮುಖವಾಗುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್