AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯಕ್ಕೆ ಸಂಜೀವಿನಿ ಈ ಕಹಿಬೇವಿನ ಎಲೆ, ಏನಿದರ ಆರೋಗ್ಯ ಪ್ರಯೋಜನಗಳು?

ಕಹಿ ಬೇವನ್ನು ಯಾರು ಕೂಡ ಇಷ್ಟ ಪಡುವುದಿಲ್ಲ. ಕಹಿ ಬೇವಿನ ಹೆಸರು ಕೇಳಿದ ಕೂಡಲೇ ಎಲ್ಲರೂ ಕೂಡ ಮುಖವನ್ನು ಸಿಂಡರಿಸಿಕೊಳ್ಳುತ್ತಾರೆ. ಆದರೆ ಆರೋಗ್ಯದಲ್ಲಿ ಏನೇ ಸಮಸ್ಯೆ ಇದ್ದರೂ, ನೈಸರ್ಗಿಕವಾಗಿ ಗುಣ ಪಡಿಸುವ ಏಕೈಕ ಸಸ್ಯವು ಇದಾಗಿದ್ದು, ಸೌಂದರ್ಯ ವರ್ಧಕ ಉತ್ಪನ್ನಗಳಲ್ಲಿ ಈ ಕಹಿಬೇವನ್ನು ಬಳಸಲಾಗುತ್ತದೆ. ಆಂಟಿ ಬ್ಯಾಕ್ಟೀರಿಯಲ್‌, ಆಂಟಿ ವೈರಲ್‌ ಗುಣಗಳನ್ನು ಹೊಂದಿರುವ ಕಹಿಬೇವು ಹಲವಾರು ಆರೋಗ್ಯ ಸಮಸ್ಯೆಗಳಿಗೆ ನಿವಾರಕವಾಗಿ ಕೆಲಸ ಮಾಡುತ್ತದೆ.

ಆರೋಗ್ಯಕ್ಕೆ ಸಂಜೀವಿನಿ ಈ ಕಹಿಬೇವಿನ ಎಲೆ, ಏನಿದರ ಆರೋಗ್ಯ ಪ್ರಯೋಜನಗಳು?
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 25, 2024 | 6:18 PM

Share

ಕಹಿ ಬೇವಿನ ಎಲೆ, ಬೇರು ತೊಗಟೆ ಎಲ್ಲದರಲ್ಲಿಯೂ ಔಷಧೀಯ ಗುಣವನ್ನು ಹೊಂದಿದೆ. ಈ ಬೇವಿನ ಸೊಪ್ಪಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವ ಕಾರಣ ಹಲವು ರೋಗಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ. ಹಲವಾರು ಔಷಧೀಯ ಉತ್ಪನ್ನ ತಯಾರಿಕಾ ಕಂಪನಿಗಳು ಈ ಕಹಿಬೇವಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಹೀಗಾಗಿ ಈ ಕಹಿ ಬೇವು ಗುಣದಲ್ಲಿ ಕಹಿಯಾಗಿದ್ದರೂ ಆರೋಗ್ಯದ ವಿಚಾರದಲ್ಲಿ ಸಿಹಿಯಾಗಿದೆ

ಕಹಿಬೇವು ಸೊಪ್ಪಿನ ಆರೋಗ್ಯ ಪ್ರಯೋಜನಗಳು

* ಚರ್ಮದ ರೋಗದಿಂದ ಬಳಲುತ್ತಿರುವವರು ಬೇವಿನ ಸೊಪ್ಪನ್ನು ಹಾಕಿ ಕಾಯಿಸಿದ ನೀರಿನಲ್ಲಿ ಸ್ನಾನ ಮಾಡಿದರೆ ಸಮಸ್ಯೆಗಳು ದೂರವಾಗುತ್ತದೆ.

* ಬೇವು ಮತ್ತು ಅರಶಿನ ಹಾಕಿ ಕಾಯಿಸಿದ ನೀರಿನಲ್ಲಿ ಸಿಡುಬು ರೋಗಿಗಳು ಸ್ನಾನ ಮಾಡಿದರೆ ರೋಗವು ಗುಣಮುಖವಾಗುತ್ತದೆ.

* ಒಣಗಿದ ಬೇವಿನೆಲೆಯ ಪುಡಿ ಮತ್ತು ತುಳಸಿ ಎಲೆಯ ಪುಡಿಗಳನ್ನು ಸೇರಿಸಿ, ನೀರು ಹಾಕಿ ಪೇಸ್ಟ್ ತಯಾರಿಸಿಕೊಂಡು, ಈ ಮಿಶ್ರಣವನ್ನು ಕೂದಲಿನ ಬುಡಕ್ಕೆ ಹಚ್ಚಿ ಎರಡು ಗಂಟೆಯ ನಂತರ ಸ್ನಾನ ಮಾಡುವುದರಿಂದ ತಲೆ ಕೂದಲಿನ ಹೊಟ್ಟು ಕಡಿಮೆಯಾಗುತ್ತದೆ.

* ಜಂತುಹುಳುವಿನ ಸಮಸ್ಯೆಯಿದ್ದವರು 10 ಗ್ರಾಮ್ ಬೇವಿನ ಚಿಗುರೆಲೆ ಹಾಗೂ 10 ಗ್ರಾಮ್ ಓಮವನ್ನು ಅರೆದು ಅದನ್ನು ಜೇನುತುಪ್ಪದಲ್ಲಿ ಬೆರೆಸಿ ತಿನ್ನುವುದು ಒಳ್ಳೆಯದು.

* ಮೊಡವೆಯ ನಿವಾರಣೆಗಾಗಿ ಬೇವು, ಲೋದ್ರ, ಅರಿಶಿನ, ಕೆಂಪು ಶ್ರೀಗಂಧ, ಸುಗಂಧಿ ಬೇರು, ಅತಿಮಧುರ, ಬಜೆ, ಮಂಜಿಷ್ಟಗಳನ್ನು ತಲಾ 10 ಗ್ರಾಮಿನಂತೆ ತೆಗೆದುಕೊಂಡು, ನುಣ್ಣಗೆ ಪುಡಿ ಮಾಡಿ ಮೊಸರಿನಲ್ಲಿ ಕಲಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಮುಖ ತೊಳೆಯಬೇಕು.

ಇದನ್ನೂ ಓದಿ: ನೀವು ಪ್ರತಿದಿನವು ಖುಷಿ ಖುಷಿಯಿಂದ ಇರಬೇಕೇ ಈ ಟಿಪ್ಸ್​​​ಗಳನ್ನು ಪಾಲಿಸಿ

* ಕಹಿಬೇವಿನ ಎಲೆ ಹಾಗೂ ಗೋರಂಟಿ ಎಲೆಗಳನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಸ್ವಲ್ಪ ನೀರಿನಲ್ಲಿ ಹಾಕಿ ನೀರೆಲ್ಲ ಇಂಗುವವರೆಗೆ ಕುದಿಸಬೇಕು. ಈ ನೀರಿಗೆ ಹೊಂಗೆ ಎಣ್ಣೆ ಹಾಕಿ ಇಸುಬಿಗೆ ಹಚ್ಚಿದರೆ ಇಸುಬುವಿನ ಸಮಸ್ಯೆಯೂ ನಿವಾರಣೆಯಾಗುತ್ತದೆ.

* ಕಣ್ಣಿನ ಉರಿ, ಕಣ್ಣು ಕೆಂಪಗಾಗುವ ಸಮಸ್ಯೆಯಿದ್ದರೆ ಕಹಿಬೇವಿನ ಎಲೆಯ ಕಷಾಯವನ್ನು ಮಾಡಿ ಸೇವಿಸಿದರೆ ಶಮನವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ