AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಮನೆ ಪಾಕವಿಧಾನ ನಿಮ್ಮ ಆರೋಗ್ಯಕ್ಕೆ ಉತ್ತಮ, ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಹಳೆ ಕಾಲದಲ್ಲಿ ಮಾಡುತ್ತಿದ್ದ ಕೆಲವು ಪಾಕವಿಧಾನ ಅಥವಾ ರೆಸಿಪಿಗಳು ಸುಲಭ ಮತ್ತು ಆರೋಗ್ಯಕ್ಕೂ ಒಳ್ಳೆಯದಾಗಿತ್ತು. ಅವುಗಳನ್ನು ಈಗಿನ ವಾತಾವರಣಕ್ಕೆ ತುಂಬಾ ಒಳ್ಳೆಯದು, ಯಾವೆಲ್ಲ ಪಾಕಗಳನ್ನು ಮಾಡಬಹದು. ಇನ್ನು ಸಂಜೆ ಅಥವಾ ಬೆಳಗ್ಗಿನ ಉಪಹಾರಕ್ಕೆ ಮಾಡಬಹುದು ಅಂತಹ ರೆಸಿಪಿಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ಹಳ್ಳಿ ಮನೆ ಪಾಕವಿಧಾನ ನಿಮ್ಮ ಆರೋಗ್ಯಕ್ಕೆ ಉತ್ತಮ, ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ Image Credit source: unsplash
ಪ್ರೀತಿ ಭಟ್​, ಗುಣವಂತೆ
| Edited By: |

Updated on:Aug 03, 2023 | 4:23 PM

Share

ಅಡುಗೆಯಲ್ಲಿ ಅದರಲ್ಲಿಯೂ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಂತೀಯ ವೈವಿಧ್ಯಗಳಿವೆ. ಬೇರೆ ಬೇರೆ ಪ್ರದೇಶಗಳಲ್ಲಿ ವಿಧ ವಿಧವಾದ ತಿಂಡಿಗಳು ಲಭ್ಯ ವಿರುತ್ತದೆ. ಅದರಲ್ಲಿಯೂ ಹಳೆ ಕಾಲದಲ್ಲಿ ಮಾಡುತ್ತಿದ್ದ ಕೆಲವು ಪಾಕವಿಧಾನ ಅಥವಾ ರೆಸಿಪಿಗಳು ಸುಲಭ ಮತ್ತು ಆರೋಗ್ಯಕ್ಕೂ ಒಳ್ಳೆಯದಾಗಿತ್ತು. ಅದರಲ್ಲಿ ಕೆಲವನ್ನು ನಾವು ಮರೆತು ಬೇರೆ ಬೇರೆ ರಾಜ್ಯಗಳ ತಿಂಡಿ, ಊಟಗಳನ್ನು ಅನುಕರಿಸಲು ಆರಂಭಿಸಿದ್ದೇವೆ. ಇದು ತಪ್ಪಲ್ಲ. ಆದರೆ ನಮ್ಮ ಪೂರ್ವಜರು ಅಥವಾ ನಮ್ಮ ತಂದೆ ತಾಯಿ ಬಾಲ್ಯದಲ್ಲಿ ತಿನ್ನುತ್ತಿದ್ದ ಅಥವಾ ನಾವು ಚಿಕ್ಕವರಿರುವಾಗ ತಿಂದಿದ್ದ ತಿಂಡಿಗಳನ್ನು ಟ್ರೈ ಮಾಡಬಹುದು. ಇನ್ನೇನು ಅಧಿಕ ಶ್ರಾವಣ ಕಳೆದು ಶ್ರಾವಣ ಆರಂಭವಾಗುತ್ತಿದೆ ಹಾಗಾಗಿ ಒಂದು ಹೊತ್ತಿನ ಉಪವಾಸದ ಸಮಯದಲ್ಲಿಯೂ ಕೆಲವು ತಿಂಡಿಗಳನ್ನು ಸಂಜೆ ಅಥವಾ ಬೆಳಗ್ಗಿನ ಉಪಹಾರಕ್ಕೆ ಮಾಡಬಹುದು ಅಂತಹ ರೆಸಿಪಿಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ನಿಮ್ಮ ಬಾಲ್ಯದಲ್ಲಿ ನೀವು ಈ ತಿಂಡಿ ತಿಂದಿರಬಹುದು ಇದನ್ನು ಹಲವಾರು ರೀತಿಯಲ್ಲಿ ಮಾಡುತ್ತಾರೆ, ಅದಲ್ಲದೆ ಹೆಸರುಕಾಳಿನಲ್ಲಿ ಪ್ರೋಟೀನ್ ಮತ್ತು ಫೈಬರ್‍ಅಂಶ ಸಮೃದ್ಧವಾಗಿರುವುದರಿಂದ ಇದನ್ನು ಆರೋಗ್ಯ ಪೂರ್ಣ ಆಹಾರ ಎಂದು ಕರೆಯಬಹುದು. ಸಾಮಾನ್ಯವಾಗಿ ಮತ್ತು ಸರಳವಾಗಿ ಮಾಡಬಹುದಾದ ಹೆಸರುಕಾಳು ಉಸುಳಿಯ ರೆಸಿಪಿ ಇಲ್ಲಿದೆ.

ಹೆಸರುಕಾಳು ಉಸುಳಿ ಅಥವಾ ಹೆಸರುಕಾಳು ಒಗ್ಗರಣೆ

ಬೇಕಾಗುವ ಸಾಮಗ್ರಿಗಳು:

ಎಣ್ಣೆ – 1 ಚಮಚ

ಸಾಸಿವೆ – 1 ಚಮಚ

ಉದ್ದಿನಬೆಳೆ – 1 ಚಮಚ

ಕರಿಬೇವಿನ ಎಲೆ – 6 ರಿಂದ 10

ಬೇಯಿಸಿಕೊಂಡ ಹೆಸರುಕಾಳು – 100 ಗ್ರಾಂ

ರುಚಿಗೆ ತಕ್ಕಷ್ಟು ಉಪ್ಪು

ಚಿಕ್ಕದಾಗಿ ಹೆಚ್ಚಿಕೊಂಡ ಕೊತ್ತಂಬರಿ ಸೊಪ್ಪು – 2 ಚಮಚ

ತೆಂಗಿನ ತುರಿ – 1/2 ಕಪ್

ಜೀರಿಗೆ – 3/4 ಚಮಚ

ಹಸಿ ಮೆಣಸಿನಕಾಯಿ – 1

ಇದನ್ನೂ ಓದಿ: ಮಳೆಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೀವು ತಿನ್ನಲೇಬೇಕಾದ ಕಾಲೋಚಿತ ಹಣ್ಣುಗಳು

ಮಾಡುವ ವಿಧಾನ:

ಹೆಸರುಕಾಳನ್ನು ಬೇಯಿಸುವ ಮೊದಲು 5- 6 ಗಂಟೆ ಮೊದಲೇ ನೆನಸಿಡಬೇಕು. ಬಳಿಕ ಅದನ್ನು ಚೆನ್ನಾಗಿ ತೊಳೆದು ಒಂದು ಪಾತ್ರೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ಬಳಿಕ ಇನ್ನೊಂದು ಪಾತ್ರೆಗೆ ಎಣ್ಣೆ, ಸಾಸಿವೆ, ಉದ್ದಿನಬೆಳೆ ಹಾಕಿ ನಂತರ ಅದಕ್ಕೆ ಹಸಿ ಮೆಣಸು, ಹೆಚ್ಚು ಖಾರ ಬೇಕಾದಲ್ಲಿ ಮೆಣಸಿನ ಹುಡಿ ಸ್ವಲ್ಪ ಸೇರಿಸಿಕೊಳ್ಳಿ. ಹಸಿ ಮೆಣಸಿಗಿಂತ ಕೆಂಪು ಮೆಣಸು ಹೆಚ್ಚು ರುಚಿ ನೀಡುತ್ತದೆ. ಬಳಿಕ ಅದಕ್ಕೆ ಕರಿಬೇವಿನ ಎಲೆ ಹಾಕಿ ನಂತರ ಬೆಂದ ಹೆಸರುಕಾಳನ್ನು ಸೇರಿಸಿ. ನಿಮಗೆ ಬೇಕಾದಲ್ಲಿ ಈರುಳ್ಳಿ ಕೂಡ ಹಾಕಿಕೊಳ್ಳಬಹುದು ಆದರೆ ಶ್ರಾವಣ ಮಾಸದಲ್ಲಿ ಈರುಳ್ಳಿ ತಿನ್ನದವರು, ಇದನ್ನು ಬಳಸುವ ಅಗತ್ಯ ಇಲ್ಲ. ಹೆಸರಕಾಳನ್ನು ಸರಿಯಾಗಿ ಮಿಶ್ರಣ ಮಾಡಿಕೊಂಡ ನಂತರ ಬೇಕಾದಲ್ಲಿ ಉಪ್ಪನ್ನು ಸೇರಿಸಿಕೊಳ್ಳಿ ಅದಕ್ಕೆ ಚಿಕ್ಕದಾಗಿ ಹೆಚ್ಚಿಕೊಂಡ ಕೊತ್ತಂಬರಿ ಸೊಪ್ಪು ಮತ್ತು ಕಾಯಿ ತುರಿಯನ್ನು ಹಾಕಿ ಸ್ವಲ್ಪ ಕಲಸಿ, ಕೊತ್ತಂಬರಿ ಸೊಪ್ಪು ಇಷ್ಟವಿಲ್ಲದವರು ಕಾಯಿ ತುರಿ ಮಾತ್ರ ಬಳಸಬಹುದು. ಬೇಕಾದಲ್ಲಿ ನಿಂಬೆ ರಸವನ್ನೂ ಸೇರಿಸಬಹುದು.

ಕರ್ನಾಟಕದ ಅತ್ಯಂತ ಪ್ರಸಿದ್ಧ ಉಪಹಾರಗಳಲ್ಲಿ ರಾಗಿ ರೊಟ್ಟಿಯೂ ಒಂದು. ಇದರಲ್ಲಿ ಅನೇಕ ಪೌಷ್ಟಿಕಾಂಶ ತುಂಬಿರುವುದರಿಂದ ಇದು ಆರೋಗ್ಯಕ್ಕೂ ಒಳ್ಳೆಯದು. ಇನ್ನು ಕರ್ನಾಟಕದಲ್ಲಿ ಬೇರೆ ಬೇರೆ ರೀತಿಯಲ್ಲಿ ರಾಗಿ ರೊಟ್ಟಿ ಮಾಡುತ್ತಾರೆ. ರಾಗಿ ಒಂದು ರುಚಿ ಇಲ್ಲದ ಧಾನ್ಯ ಎಂದು ಹೇಳುವವರು. ರಾಗಿ ರೊಟ್ಟಿಯನ್ನು ಒಮ್ಮೆ ಪ್ರಯತ್ನಿಸಿ ರುಚಿ ನೋಡಿ, ಮತ್ತೆ ಮತ್ತೆ ತಿನ್ನುವುದರಲ್ಲಿ ಸಂಶಯವಿಲ್ಲ. ಇದನ್ನು ಮಾಡುವ ಸರಳ ವಿಧಾನದ ಬಗ್ಗೆ ಇಲ್ಲಿದೆ ಮಾಹಿತಿ.

ಬೇಕಾಗುವ ಸಾಮಗ್ರಿಗಳು:

ರಾಗಿ ಹಿಟ್ಟು – 3 ಕಪ್ (ಮೂರು ಜನರಿದ್ದರೆ ಮಾತ್ರ ಜಾಸ್ತಿ ಬೇಕಾದಲ್ಲಿ ಹೆಚ್ಚು ಹಿಟ್ಟು ಸೇರಿಸಿಕೊಳ್ಳಬಹುದು)

ನೀರು – 3 ಕಪ್ ( ಹೆಚ್ಚು ಬೇಕಾದಲ್ಲಿ ಸೇರಿಸಿಕೊಳ್ಳಬಹುದು)

ಹಸಿ ಮೆಣಸಿನಕಾಯಿ – 3- 4

ಸಣ್ಣಗೆ ಹೆಚ್ಚಿದ ಈರುಳ್ಳಿ – 3 ದೊಡ್ಡ ಚಮಚ (ಜಾಸ್ತಿ ಬೇಕಾದಲ್ಲಿ ಸೇರಿಸಿಕೊಳ್ಳಬಹುದು)

ಕರಿಬೇವಿನ ಎಲೆ – 3- 4

ಅಡುಗೆ ಎಣ್ಣೆ – 1\4 ಕಪ್

ಬಾಳೆ ಎಲೆ ಅಥವಾ ಪ್ಲಾಸ್ಟಿಕ್ ಹಾಳೆ

ಮಾಡುವ ವಿಧಾನ:

ಒಂದು ಬಾಣಲೆ ಅಥವಾ ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಸಿ. ನೀರು ಕುದಿಯಲು ಪ್ರಾರಂಭಿಸಿದ ಕೂಡಲೇ ರಾಗಿ ಹಿಟ್ಟು ಹಾಕಿ ಸ್ಟೋವ್ ಆಫ್ ಮಾಡಿಕೊಳ್ಳಿ. ಈಗ ಕತ್ತರಿಸಿದ ಈರುಳ್ಳಿ , ಕರಿಬೇವಿನ ಸೊಪ್ಪು, ಹಸಿರು ಮೆಣಸಿನಕಾಯಿಗಳನ್ನು ಸೇರಿಸಿ ಚೆನ್ನಾಗಿ ಕಲಸಿ. ನೀವು ಕರಿಬೇವಿನ ಎಲೆಗಳ ಬದಲಾಗಿ ಕೊತ್ತುಂಬರಿ ಸೊಪ್ಪನ್ನು ಸಹ ಬಳಸಬಹುದು. ಬೇಕಾದಲ್ಲಿ ನೀರು ಅಥವಾ ಹಿಟ್ಟು ಸೇರಿಸಿ ಮೃದುವಾದ ಹಿಟ್ಟನ್ನು ತಯಾರಿಸಿಕೊಳ್ಳಿ. ಪ್ಲಾಸ್ಟಿಕ್ ಹಾಳೆ ಅಥವಾ ಬಾಳೆ ಎಲೆಯ ಮೇಲೆ ಎಣ್ಣೆಯನ್ನು ಹಚ್ಚಿ ಎರಡು ಉಂಡೆಗಳಾಗುವಷ್ಟು ಮಿಶ್ರಣ ತೆಗೆದುಕೊಂಡು, ಬೆರಳುಗಳಿಗೂ ಎಣ್ಣೆ ಹಚ್ಚಿಕೊಂಡು, ಬೆರಳುಗಳಿಂದ ಮೆಲ್ಲನೆ ಒತ್ತುತ್ತಾ ವೃತ್ತಾಕಾರದ ರಾಗಿ ರೊಟ್ಟಿಯನ್ನು ತಟ್ಟಿ. ಆಗಾಗ ಕೈ ಬೆರಳುಗಳಿಂದ ಎಣ್ಣೆ ಮುಟ್ಟುತ್ತಾ ರೊಟ್ಟಿ ತಟ್ಟುವುದರಿಂದ ಕೈಗೆ ಹಿಟ್ಟು ಅಂಟುವುದಿಲ್ಲ. ಎಚ್ಚರಿಕೆಯಿಂದ ಪ್ಲಾಸ್ಟಿಕ್ ಹಾಳೆಯಲ್ಲಿರುವ ಅಥವಾ ಬಾಳೆಯಲ್ಲಿರುವ ರಾಗಿ ರೊಟ್ಟಿಯನ್ನು ಕೈಯಲ್ಲಿ ತೆಗೆದುಕೊಂಡು ಬಿಸಿ ತವಾ ಮೇಲೆ ಹಾಕಿ. ಮತ್ತೆ ಆ ರೊಟ್ಟಿಗೆ ಮೇಲಿನಿಂದ ಎಣ್ಣೆ ಹಾಕಿ, ಸುಮಾರು ಒಂದು ನಿಮಿಷದ ನಂತರ ರೊಟ್ಟಿಯನ್ನು ತಿರುವಿ ಹಾಕಿ. ಇದನ್ನು ಬೆಣ್ಣೆ ಅಥವಾ ಮೊಸರು, ಚಟ್ನಿಯೊಂದಿಗೆ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Thu, 3 August 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ