AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಡಮೂಲಿಕೆಗಳ ರಾಣಿ ʼತುಳಸಿʼಯ ವೈಜ್ಞಾನಿಕ ಹೆಸರು 95% ಜನರಿಗೆ ಗೊತ್ತೇ ಇಲ್ಲಾ

ಪ್ರತಿಯೊಂದು ಗಿಡಮರಗಳಿಗೂ ಅದರದ್ದೇ ಆದ ವೈಜ್ಞಾನಿಕ ಹೆಸರುಗಳಿವೆ. ದಾಸವಾಳದ ವೈಜ್ಞಾನಿಕ ಹೆಸರು ಹೈಬಿಸ್ಕಸ್‌ ರೋಸಾ ಸಿನೆನ್ಸಿಸ್‌ ಆದ್ರೆ ಗುಲಾಬಿಯ ವೈಜ್ಞಾನಿಕ ಹೆಸರು ರೋಸಾ ರೂಬಿಗಿನೋಸಾ. ಇದೇ ರೀತಿ ನಾವೆಲ್ಲರೂ ಪೂಜಿಸುವ ಪವಿತ್ರ ತುಳಸಿ ಗಿಡಕ್ಕೂ ವೈಜ್ಞಾನಿಕ ಹೆಸರಿದೆ. ಆದರೆ 95% ಜನರಿಗೆ ಈ ಬಗ್ಗೆ ಗೊತ್ತೇ ಇಲ್ಲ. ನಿಮಗೆ ಈ ವಿಚಾರವನ್ನು ತಿಳಿದುಕೊಳ್ಳುವ ಬಯಕೆ ಇದ್ಯಾ? ಹಾಗಿದ್ದರೆ ಈ ಸ್ಟೋರಿ ನಿಮಗಾಗಿ.

ಗಿಡಮೂಲಿಕೆಗಳ ರಾಣಿ ʼತುಳಸಿʼಯ ವೈಜ್ಞಾನಿಕ ಹೆಸರು 95% ಜನರಿಗೆ ಗೊತ್ತೇ ಇಲ್ಲಾ
ತುಳಸಿImage Credit source: Google
ಮಾಲಾಶ್ರೀ ಅಂಚನ್​
|

Updated on: Oct 06, 2025 | 5:30 PM

Share

ತುಳಸಿ (basil) ಧಾರ್ಮಿಕ ಮತ್ತು ಜೌಷಧೀಯ ಮಹತ್ವವನ್ನು ಹೊಂದಿರುವಂತಹ ಪವಿತ್ರವಾದ ಗಿಡವಾಗಿದೆ. ವಿಷ್ಣುವಿಗೆ ಪ್ರಿಯವಾದ ಈ ಪವಿತ್ರ ಸಸ್ಯದಲ್ಲಿ ಲಕ್ಷ್ಮೀದೇವಿ ನೆಲೆಸಿದ್ದಾಳೆ ಎಂಬ ನಂಬಿಕೆಯಿಂದ ಇದಕ್ಕೆ ಪೂಜೆಯನ್ನು ಕೂಡ ಮಾಡಲಾಗುತ್ತದೆ.  ಅಷ್ಟೇ ಅಲ್ಲದೆ ತುಳಸಿಯನ್ನು ಶತಮಾನಗಳಿಂದದಲೂ ಆಯುರ್ವೇದ ಪದ್ಧತಿ ಮತ್ತು ಮನೆಮದ್ದುಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿಯನ್ನು ಹೊಂದಿರುವ ತುಳಸಿಯನ್ನು ಶೀತ, ಗಂಟಲು ನೋವು, ಉಸಿರಾಟದ ಸಮಸ್ಯೆಗಳಂತಹ ಹಲವು ಆರೋಗ್ಯ ಸಮಸ್ಯೆಗಳನ್ನು ಶಮನಗೊಳಿಸಲು ಬಳಸಲಾಗುತ್ತದೆ. ಹೀಗೆ ತುಳಸಿ ಧಾರ್ಮಿಕ ಮತ್ತು ಔಷಧೀಯ ಪ್ರಾಮುಖ್ಯತೆಯನ್ನು ಹೊಂದಿದೆ. ಗಿಡ ಮೂಲಿಕೆಗಳ ರಾಣಿ ಅಂತಾನೆ ಕರೆಯಲ್ಪಡುವ ಪವಿತ್ರ ಸಸ್ಯದ ವೈಜ್ಞಾನಿಕ ಹೆಸರು ಏನೆಂಬುದು ನಿಮ್ಗೆ ಗೊತ್ತಾ? ಇಂಗ್ಲಿಷ್‌ನಲ್ಲಿ ತುಳಸಿಯನ್ನು ಬೇಸಲ್‌ ಅಂತ ಕರಿತಾರೆ, ಆದ್ರೆ ಇದ್ರ ವೈಜ್ಞಾನಿಕ ಹೆಸರೇನು ಎಂಬುದು 95% ಜನರಿಗೆ ಗೊತ್ತೇ ಇಲ್ಲ.

ತುಳಸಿಯ ವೈಜ್ಞಾನಿಗೆ ಹೆಸರೇನು?

ತುಳಸಿ ಗಿಡವು ಹಿಂದೂ ಧರ್ಮದಲ್ಲಿ ಪವಿತ್ರ  ಸ್ಥಾನಮಾನವನ್ನು ಪಡೆದ ಸಸ್ಯ ಮಾತ್ರವಲ್ಲದೆ, ಈ ಸಸ್ಯವನ್ನು  ಶತಮಾನಗಳಿಂದ ಮನೆಮದ್ದುಗಳಲ್ಲೂ ಬಳಸಲಾಗುತ್ತಿದೆ. ಹೀಗೆ ವ್ಯಾಪಕ ಹೆಸರು ಪಡೆದಿರುವ ಈ ತುಳಸಿ ಗಿಡದ ವೈಜ್ಞಾನಿಕ ಹೆಸರೇನು ಎಂಬುದು ಗೊತ್ತಾ? ಈ ಕುರಿತ ಇಂಟರೆಸ್ಟಿಂಗ್‌ ಮಾಹಿತಿಯನ್ನು ತಿಳಿಯಿರಿ,

ಗಿಡಮೂಲಿಕೆಗಳ ರಾಣಿ ಎಂದು ಕರೆಯಲ್ಪಡುವ ಪವಿತ್ರ ತುಳಸಿಯ ವೈಜ್ಞಾನಿಕ ಹೆಸರು “ಒಸಿಮಮ್ ಟೆನುಯಿಫ್ಲೋರಮ್”. ಇದನ್ನು ಒಸಿಮಮ್ ಸ್ಯಾಂಕ್ಟಮ್ ಎಂದೂ ಕರೆಯುತ್ತಾರೆ. ಇದು ಲಾಮಿಯಾಸಿ (ಪುದೀನ) ಕುಟುಂಬಕ್ಕೆ ಸೇರಿದ ಸಸ್ಯವಾಗಿದೆ.

ಇದನ್ನೂ ಓದಿ
Image
ಆನ್‌ಲೈನ್‌ ಶಾಪಿಂಗ್‌ಗಿಂತ ಆಫ್‌ಲೈನ್‌ ಶಾಪಿಂಗ್‌ ಬೆಸ್ಟ್‌
Image
ಬಾವಿಗಳನ್ನು ದುಂಡಗಿನ ಆಕಾರದಲ್ಲಿಯೇ ನಿರ್ಮಿಸೋದೇಕೆ ಗೊತ್ತಾ?
Image
ವಾಶ್‌ ಬೇಸಿನ್‌ನಲ್ಲಿ ಸಣ್ಣ ರಂಧ್ರ ಏಕಿರುತ್ತವೆ ಗೊತ್ತಾ?
Image
ಚಿನ್ನ, ಬೆಳ್ಳಿ ಆಭರಣಗಳನ್ನು ಗುಲಾಬಿ ಬಣ್ಣದ ಕಾಗದದಲ್ಲಿ ಸುತ್ತಿಕೊಡುವುದೇಕೆ

ತುಳಸಿಯಲ್ಲಿ ಸಾಮಾನ್ಯವಾಗಿ ಮೂರು ವಿಧಗಳಿವೆ:

  • ರಾಮ ತುಳಸಿ (ಒಸಿಮಮ್ ಸಾನ್ಕ್ಟಮ್) – ಹಸಿರು ಎಲೆಗಳು, ಸ್ವಲ್ಪ ಸಿಹಿ ರುಚಿ.
  • ಕೃಷ್ಣ ತುಳಸಿ (ಒಸಿಮಮ್ ಟೆನುಯಿಫ್ಲೋರಮ್) – ಗಾಢ ನೇರಳೆ ಎಲೆಗಳು, ಗಾಢವಾದ ಪರಿಮಳ ಮತ್ತು ಸುವಾಸನೆ.
  • ವನ ತುಳಸಿ (ಒಸಿಮಮ್ ಗ್ರಾಟಿಸ್ಸಿಮಮ್) – ಹಿಮಾಲಯದಲ್ಲಿ ಬೆಳೆಯುತ್ತದೆ, ಹೆಚ್ಚು ಕಹಿ ರುಚಿಯನ್ನು ಹೊಂದಿರುತ್ತದೆ.

ಇದನ್ನೂ ಓದಿ: ಆನ್‌ಲೈನ್‌ ಶಾಪಿಂಗ್‌ಗಿಂತ ಆಫ್‌ಲೈನ್‌ ಶಾಪಿಂಗ್‌ ಬೆಸ್ಟ್‌ ಅಂತೆ; ಯಾಕೆ ಗೊತ್ತಾ?

ತುಳಸಿಯ ಆರೋಗ್ಯ ಪ್ರಯೋಜನಗಳೇನು?

  • ತುಳಸಿಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳು ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
  • ತುಳಸಿಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಮಾನಸಿಕ ಸಮತೋಲನವನ್ನು ಉತ್ತೇಜಿಸುತ್ತದೆ.
  • ಕೆಮ್ಮು, ಶೀತ ಅಥವಾ ಆಸ್ತಮಾದದಂತಹ ಸಮಸ್ಯೆಗಳಿಂದ ತುಳಸಿಯಲ್ಲಿರುವ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಕಫ ನಿವಾರಕ ಗುಣಗಳು ಪರಿಹಾರವನ್ನು ನೀಡುತ್ತವೆ.
  • ತುಳಸಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಟೈಪ್ 2 ಮಧುಮೇಹ ಇರುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
  • ತುಳಸಿ ರಕ್ತ ಪರಿಚಲನೆ ಸುಧಾರಿಸುತ್ತದೆ, ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
  • ತುಳಸಿಯಲ್ಲಿರುವ ಯುಜೆನಾಲ್, ರೋಸ್ಮರಿನಿಕ್ ಆಮ್ಲ ಮತ್ತು ಎಪಿಜೆನಿನ್‌ನಂತಹ ಕೆಲವು ಸಂಯುಕ್ತಗಳು ಕ್ಯಾನ್ಸರ್ ವಿರೋಧಿ ಪರಿಣಾಮಗಳನ್ನು ಹೊಂದಿವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.
  • ತುಳಸಿ ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ, ಉತ್ತಮ ಪೋಷಕಾಂಶ ಹೀರಿಕೊಳ್ಳುವಿಕೆಗೆ ಸಹಾಯ ಮಾಡುತ್ತದೆ ಮತ್ತು ಉಬ್ಬುವುದು, ಅಜೀರ್ಣ ಮತ್ತು ಗ್ಯಾಸ್‌ ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
  • ತುಳಸಿಯಲ್ಲಿ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದ ಮೊಡವೆ, ಎಸ್ಜಿಮಾ ಮತ್ತು ತಲೆಹೊಟ್ಟು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ