AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ನಂತರ ಹೆಣ್ಣುಮಕ್ಕಳಿಗೆ ಕೋಪ ಹೆಚ್ಚು, ಯಾಕೆ ಗೊತ್ತಾ? ಇಲ್ಲಿದೆ ಕಾರಣ

ಮದುವೆಯ ನಂತರ ಹೆಣ್ಣು ಮಕ್ಕಳ ಜೀವನ ಸಂಪೂರ್ಣವಾಗಿ ಬದಲಾಗುತ್ತದೆ. ಪ್ರತಿಯೊಂದು ವಿಷಯದಲ್ಲೂ ತನ್ನ ಆಸೆ ಆಕಾಂಕ್ಷೆಗಳನ್ನು ತ್ಯಾಗ ಮಾಡಬೇಕಾಗುತ್ತದೆ. ಹೆಚ್ಚಿನವರು ತವರು ಮನೆಯಲ್ಲಿರುವಷ್ಟು ಸುಖ ಸಂತೋಷವನ್ನು ಗಂಡನ ಮನೆಯಲ್ಲಿ ಅನುಭವಿಸುವುದಿಲ್ಲ. ಈ ಎಲ್ಲಾ ಬದಲಾವಣೆಯ ಅಂಶಗಳು ಮದುವೆಯಾದ ಬಳಿಕ ಮಹಿಳೆಯರಲ್ಲಿ ಕಿರಿಕಿರಿ ಭಾವನೆ ಮೂಡಲು ಹಾಗೂ ಕ್ಷಿಪ್ರವಾಗಿ ಕೋಪಗೊಳ್ಳಲು ಕಾರಣವಾಗುತ್ತದೆ.

ಮದುವೆಯ ನಂತರ ಹೆಣ್ಣುಮಕ್ಕಳಿಗೆ ಕೋಪ ಹೆಚ್ಚು, ಯಾಕೆ ಗೊತ್ತಾ? ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 04, 2023 | 4:12 PM

Share

ಮದುವೆ ಎಂಬುವುದು ಒಬ್ಬ ಗಂಡು ಮತ್ತು ಹೆಣ್ಣಿನ ನಡುವೆ ಬೆಸೆಯುವ ಸುಂದರ ಬಂಧವಾಗಿದೆ. ವಿವಾಹದ ಬಳಿಕ ಗಂಡು ಮತ್ತು ಹೆಣ್ಣು ಇವರಿಬ್ಬರ ಜೀವನದಲ್ಲೂ ಹಲವಾರು ಬದಲಾವಣೆಗಳಾಗುತ್ತವೆ. ಪರುಷರಿಗೆ ಹೋಲಿಸಿದರೆ ಮದುವೆಯಾದ ಬಳಿಕ ಮಹಿಳೆಯರ ಜೀವನದಲ್ಲಿ ಬಹಳಷ್ಟು ಬದಲಾವಣೆಯಾಗುತ್ತದೆ. ಅವಳು ತನ್ನ ಮನೆಯನ್ನು ಬಿಟ್ಟು ಹೊಸ ಮನೆಗೆ ಕಾಲಿಡುತ್ತಾಳೆ. ತನಗಿಷ್ಟವಿಲ್ಲದಿದ್ದರೂ, ತನ್ನ ಗಂಡನ ಮನೆಯವರಿಗಾಗಿ ತನ್ನತನವನ್ನು ಬದಲಾಯಿಸಬೇಕಾಗುತ್ತದೆ, ಅಲ್ಲದೆ ಆಕೆಯ ಮನಸ್ಥಿತಿಯಲ್ಲಿ ಬದಲಾವಣೆಗಳಾಗುತ್ತದೆ. ಹೀಗೆ ಹೊಸ ವಾತವರಣಕ್ಕೆ ಹೊಂದಿಕೊಳ್ಳಲು ಆಕೆಗೆ ತುಂಬಾ ಕಷ್ಟಕರವಾಗುತ್ತದೆ. ಇದು ಮಾತ್ರವಲ್ಲದೆ ಮದುವೆಯಾದ ಬಳಿಕ ಕೆಲವೊಂದು ವಿಚಾರಗಳು ಮಹಿಳೆಯರನ್ನು ಹೆಚ್ಚು ಕೋಪಗೊಳ್ಳುವಂತೆ ಹಾಗೂ ಅವರಿಗೆ ಕಿರಿಕಿರಿಯನ್ನು ಉಂಟುಮಾಡುತ್ತವೆ. ಹಾಗಿದ್ದರೆ ಮದುವೆಯ ಬಳಿಕ ಹೆಣ್ಣು ಮಕ್ಕಳು ಹೆಚ್ಚಾಗಿ ಕೋಪಗೊಳ್ಳಲು ಕಾರಣವೇನು ಎಂಬುದನ್ನು ನೋಡೋಣ.

ಮದುವೆಯಾದ ಬಳಿಕ ಹೆಣ್ಣುಮಕ್ಕಳು ಹೆಚ್ಚಾಗಿ ಕೋಪಗೊಳ್ಳಲು ಕಾರಣವೇನೆಂದರೆ:

ತವರು ಮನೆ ಮತ್ತು ಗಂಡನ ಮನೆಯ ವಾತವರಣದ ನಡುವಿನ ವ್ಯತ್ಯಾಸ:

ಗಂಡನ ಮನೆಗೆ ಹೋಲಿಸಿದರೆ ತವರು ಮನೆಯಲ್ಲಿ ಪ್ರತಿಯೊಬ್ಬ ಹೆಣ್ಣು ಕೂಡ ಹೆಚ್ಚು ಸ್ವತಂತ್ರ್ಯವಾಗಿರುತ್ತಾಳೆ ಮತ್ತು ಸಂತೋಷವಾಗಿರುತ್ತಾಳೆ. ಎಲ್ಲದರ ಬಗ್ಗೆಯೂ ತನ್ನ ಮನೆಯವರ ಜೊತೆಗೆ ಮುಕ್ತವಾಗಿ ಮಾತನಾಡುತ್ತಾಳೆ. ಆದರೆ ಅತ್ತೆ ಮನೆಯ ವಾತಾವರಣ ತಾಯಿ ಮನೆಯಂತೆ ಇರುವುದಿಲ್ಲ. ಮುಕ್ತವಾಗಿ ಮಾತನಾಡಬೇಕೆಂದರೂ ಅತ್ತೆ ಮನೆಯವರು ಏನೆಂದುಕೊಳ್ಳುತ್ತಾರೆ ಎಂಬ ಕಾರಣದಿಂದ ತನ್ನೆಲ್ಲಾ ಭಾವನೆ, ಆಸೆ ಆಕಾಂಕ್ಷೆಗಳನ್ನು ಮನಸ್ಸಿನಲ್ಲಿಯೇ ಮುಚ್ಚಿಡುತ್ತಾಳೆ. ಇದರಿಂದ ಹೆಚ್ಚಿನ ಮಹಿಳೆಯರಿಗೆ ಕಿರಿಕಿರಿ ಭಾವನೆ ಉಂಟಾಗುತ್ತದೆ. ಸಹಜವಾಗಿಯೇ ಇದು ಅವರನ್ನು ಕೋಪಗೊಳ್ಳುವಂತೆ ಮಾಡುತ್ತದೆ.

ಅತ್ತೆ ಮನೆಯಲ್ಲಿ ಪ್ರೀತಿ ಮತ್ತು ಗೌರವದ ಕೊರತೆ:

ಅಮ್ಮನ ಮನೆಯಲ್ಲಿ ತೋರಿಸುವಷ್ಟೇ ಪ್ರೀತಿ ಕಾಳಜಿ ತೋರಿಸುವ ಅತ್ತೆ ಮನೆಗೆ ಹೋಗುವ ಅದೃಷ್ಟ ಎಲ್ಲರಿಗೂ ಲಭಿಸುವುದಿಲ್ಲ. ಹೆಚ್ಚಿನವರಿಗೆ ಅತ್ತೆ ಮನೆಯಲ್ಲಿ ಪ್ರೀತಿ ಮತ್ತು ಕಾಳಜಿ ಅಷ್ಟಾಗಿ ಸಿಗುವುದಿಲ್ಲ. ಗಂಡನ ಮನೆಯಲ್ಲಿ ಪ್ರೀತಿ ಗೌರವ ಸಿಗದಿದ್ದಾಗ ಹೆಣ್ಣು ತುಂಬಾ ಅಸಹಾಯಕಳಾಗುತ್ತಾಳೆ. ಅದರಲ್ಲೂ ಅತ್ತೆಯ ನಡವಳಿಕೆ ಮತ್ತು ಕೊಂಕು ಮಾತುಗಳು ಮದುವೆಯಾದ ಬಳಿಕ ಹೆಣ್ಣು ಮಕ್ಕಳಿಗೆ ಹೆಚ್ಚು ಸಿಟ್ಟು ತರಿಸುತ್ತದೆ.

ಇದನ್ನೂ ಓದಿ: ಮದ್ಯಪಾನ ಮಾಡುವಾಗ ಅಪ್ಪಿತಪ್ಪಿಯೂ ಈ ಆಹಾರ ಪದಾರ್ಥಗಳನ್ನು ಸೇವಿಸಬೇಡಿ, ಯಾಕೆ ಗೊತ್ತಾ?

ಆರ್ಥಿಕ ಸ್ವಾತಂತ್ರ್ಯ ಇಲ್ಲದಿರುವುದು:

ಕೆಲವು ಮಹಿಳೆಯರಿಗೆ ಮದುವೆಯಾದ ಬಳಿಕ ಉದ್ಯೋಗಕ್ಕೆ ಹೋಗುವ ಸ್ವಾತಂತ್ರ್ಯ ಇರುವುದಿಲ್ಲ. ಆಕೆ ತನ್ನ ಉದ್ಯೋಗವನ್ನು ತೊರೆಯಬೇಕಾಗುತ್ತದೆ. ಮತ್ತು ಆಕೆ ತನ್ನ ಆಸೆ ಮತ್ತು ಅಗತ್ಯಗಳನ್ನು ಪೂರೈಸಲು ತನ್ನ ಪತಿ ಅಥವಾ ಅವನ ಕುಟುಂಬದ ಅವಲಂಬಿತವಾಗಬೇಕಾಗುತ್ತದೆ.ಈ ಸಂದರ್ಭದಲ್ಲಿ ಆಕೆ ಕೇಳಿದಾಗಲೆಲ್ಲಾ ಗಂಡ ಹಣ ಕೊಡುತ್ತಾನೆ ಎಂಬ ಯಾವ ಭರವಸೆಯೂ ಇರುವುದಿಲ್ಲ. ಕೊನೆಗೆ ಆಕೆಯ ಆರ್ಥಿಕ ಸ್ವಾತಂತ್ರ್ಯದ ಅಂತ್ಯದಿಂದಾಗಿ ಸಹಜವಾಗಿ ಆಕೆ ಕೋಪಗೊಳ್ಳಲು ಪ್ರಾರಂಭಿಸುತ್ತಾಳೆ.

ಗಂಡನ ಬೆಂಬಲದ ಕೊರತೆ:

ಮದುವೆಯ ಬಳಿಕ ಪ್ರತಿಯೊಬ್ಬ ಹೆಣ್ಣು ಕೂಡಾ ಹೆಚ್ಚಾಗಿ ಗಂಡನ ಮೇಲೆ ಅವಲಂಬಿತಳಾಗಿರುತ್ತಾಳೆ. ತನ್ನ ಇಷ್ಟಕಷ್ಟಗಳನ್ನು ಪತಿಯೊಂದಿಗೆ ಮುಕ್ತವಾಗಿ ಹಂಚಿಕೊಳ್ಳುತ್ತಾಳೆ. ಆದರೆ ತನ್ನ ಭಾವನೆಗಳಿಗೆ ಗಂಡನ ಬೆಂಬಲ ಸಿಗದಿದ್ದಾಗ, ಇದು ಸಹಜವಾಗಿಯೇ ಆಕೆಯಲ್ಲಿ ಕೋಪ ಮತ್ತು ಹತಾಶೆಯ ಭಾವನೆ ಮೂಡಲು ಕಾರಣವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ