AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Energy Conservation Day 2025: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವುದೇಕೆ ಗೊತ್ತಾ?

ಇಂಧನ ಸಂರಕ್ಷಣೆಯ ಮಹತ್ವ ಮತ್ತು ಶಕ್ತಿಯ ವಿವೇಚನಾಯುಕ್ತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯೋಣ ಬನ್ನಿ.

National Energy Conservation Day 2025: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವುದೇಕೆ ಗೊತ್ತಾ?
ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Dec 14, 2025 | 9:48 AM

Share

ಇಂಧನವು ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಇದರ ಅತಿಯಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುವುದಲ್ಲದೆ, ಮಿತಿಮೀರಿದ ಇಂಧನ ಬಳಕೆಯಿಂದ ಭವಿಷ್ಯದಲ್ಲಿ ಇಂಧನಗಳು ಸಿಗುವುದೇ ಕಷ್ಟಸಾಧ್ಯವಾಗಬಹುದು. ಈಗಲೇ ನೈಸರ್ಗಿಕ ಶಕ್ತಿ (Energy) ಮೂಲಗಳಾದ ಪೆಟ್ರೋಲಿಯಂ ಉತ್ಪನ್ನಗಳು, ಕಲ್ಲಿದ್ದಲು, ನೈಸರ್ಗಿಕ ಅನಿಲಗಳು ಭೂಮಿಯಲ್ಲಿ ಖಾಲಿಯಾಗುತ್ತಿದ್ದು, ಸುಸ್ಥಿರ ಭವಿಷ್ಯಕ್ಕಾಗಿ, ಇಂಧನ ಉಳಿತಾಯ ಮಾಡುವುದು ಮತ್ತು ಇಂಧನಗಳನ್ನು ವಿವೇಚನೆಯಿಂದ ಬಳಸುವುದು ಅತೀ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪರಿಸರವನ್ನು ಸಂರಕ್ಷಿಸುವ ಜೊತೆಗೆ ಇಂಧನ ಸಂರಕ್ಷಣೆಯ ಮಹತ್ವ ಮತ್ತು ಶಕ್ತಿಯ ವಿವೇಚನಾಯುಕ್ತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಇತಿಹಾಸವೇನು?

ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತದಲ್ಲಿ ಮೊದಲ ಬಾರಿಗೆ 1991 ರಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಯಿತು. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ರೂಪುಗೊಂಡ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ-BEE ಸಂಸ್ಥೆ 1991 ರಲ್ಲಿ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿತು. ಭಾರತ ಸರ್ಕಾರದ ಅಧೀನದಲ್ಲಿರುವ ಈ ಒಂದು ಸಾಂವಿಧಾನಿಕ ಸಂಸ್ಥೆ ಶಕ್ತಿಯ ಬಳಕೆಯನ್ನು ಕಡಿಮೆ ಮಾಡಲು ಹಲವಾರು ಕಾರ್ಯತಂತ್ರಗಳು ಮತ್ತು ನೀತಿಗಳನ್ನು ಜಾರಿಗೆ ತಂದಿದೆ. ಆ ಬಳಿಕ ಪ್ರತಿ ವರ್ಷವೂ ಸಹ ಭಾರತದಲ್ಲಿ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಪರ್ವತ ದಿನಾಚರಣೆಯ ಉದ್ದೇಶವೇನು ಗೊತ್ತಾ?

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಮಹತ್ವವೇನು?

  • ಜನರಿಗೆ ಶಕ್ತಿಯ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಇಂಧನಗಳನ್ನು ಕಡಿಮೆ ಬಳಕೆ ಮಾಡುವ ಮೂಲಕ ಇಂಧನವನ್ನು ಹೇಗೆ ಸಂರಕ್ಷಿಸಬಹುದು ಎಂಬ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.
  • ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವು ಕೇವಲ ಸಾಂಕೇತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಕ್ತಿಯ ವಿವೇಚನಾಯುಕ್ತ ಬಳಕೆಗೆ ಪ್ರಬಲ ಸಂದೇಶವಾಗಿದೆ. ಈ ದಿನದ ಮೂಲಕ, ಪ್ರತಿಯೊಂದು ಸಣ್ಣ ಪ್ರಯತ್ನವು ಶಕ್ತಿಯನ್ನು ಉಳಿಸಬಹುದು ಮತ್ತು ನಮ್ಮ ಭವಿಷ್ಯದ ಪೀಳಿಗೆಗೆ ಸಂಪನ್ಮೂಲಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ನಾಗರಿಕರಿಗೆ ಅರಿವು ಮೂಡಿಸಲಾಗುತ್ತದೆ.
  • ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವು ಇಂಧನ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಮ್ಮ ಜವಾಬ್ದಾರಿಯನ್ನು ನೆನಪಿಸುವ ಒಂದು ಪ್ರಮುಖ ಸಂದರ್ಭವಾಗಿದ್ದು, ಇದು ದೇಶದ ಪ್ರತಿಯೊಬ್ಬ ನಾಗರಿಕನು ಸಕ್ರಿಯ ಮತ್ತು ಜವಾಬ್ದಾರಿಯುತ ಪಾತ್ರವನ್ನು ವಹಿಸಲು ಪ್ರೇರೇಪಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು