AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಬಹು ಬೇಗನೆ ಕೆಟ್ಟ ಚಟಗಳಿಗೆ ದಾಸರಾಗುವುದು ಏಕೆ ಗೊತ್ತಾ?

ಕೆಟ್ಟ ವಿಷಯಗಳತ್ತ ಜನರು ಬಹು ಬೇಗನೆ ಆಕರ್ಷಿತರಾಗುತ್ತಾರೆ ಎಂಬ ಮಾತಿದೆ. ಇದಕ್ಕೆ ಉದಾಹರಣೆಯೆಂಬಂತೆ, ಮದ್ಯಪಾನ, ಧೂಮಪಾನದಂತಹ ಚಟಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಹೆಚ್ಚಿನವರು ಈ ಚಟಗಳಿಗೆ ಹೆಚ್ಚು ಆಕರ್ಷಿತರಾಗುತ್ತಾರೆ. ಹೀಗೆ ಜನ ಇಂತಹ ಕೆಟ್ಟ ಚಟಗಳಿಗೆ ದಾಸರಾಗುವುದು ಏಕೆ ಗೊತ್ತಾ? ಈ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಜನ ಬಹು ಬೇಗನೆ ಕೆಟ್ಟ ಚಟಗಳಿಗೆ ದಾಸರಾಗುವುದು ಏಕೆ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 18, 2025 | 3:58 PM

Share

ಮದ್ಯಪಾನ, ಧೂಮಪಾನದಂತಹ ಕೆಟ್ಟ ಚಟಗಳು (bad habits) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಕೂಡ ಜನ ಇವುಗಳನ್ನು ಸೇವನೆ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಜನ ತಮಗೆ ದುಃಖ ಆದರೂ, ಸಂತೋಷ ಆದರೂ ಮದ್ಯವನ್ನು ಸೇವನೆ ಮಾಡುತ್ತಾರೆ. ಕೆಲವರು ಮೋಜಿಗಾಗಿ ಸಿಗರೇಟ್‌ ಸೇದುವುದು, ಮದ್ಯ (Alcohol) ಸೇವಿಸುವುದು ಮಾಡಿದ್ರೆ, ಇನ್ನೂ ಕೆಲವರು ನೋವನ್ನು ಕಮ್ಮಿ ಮಾಡಲು, ತಾನು ಒತ್ತಡಕ್ಕೆ ಒಳಗಾಗಿದ್ದೇನೆ ನನಗೆ ನೆಮ್ಮದಿ ಬೇಕೆಂದು ಹೇಳಿ ಕಂಠಪೂರ್ತಿ ಕುಡಿಯುತ್ತಾರೆ. ಇಂತಹ ಮಾದಕ ದ್ರವ್ಯಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಜನ ಇವುಗಳ ಹಿಂದೆಯೇ ಓಡುವುದೇಕೆ, ಇವುಗಳ ಆಕರ್ಷಣೆಗೊಳಗಾಗಿ ಸಂಪೂರ್ಣವಾಗಿ ಈ ಕೆಟ್ಟ ಚಟಗಳಿಗೆ ದಾಸರಾಗುವುದೇಕೆ ಗೊತ್ತಾ? ಈ ಕುರಿತ ಇಂಟರೆಸ್ಟಿಂಗ್‌ ಸಂಗತಿಯನ್ನು ತಿಳಿಯಿರಿ.

ಜನ ಬಹು ಬೇಗನೆ ಕೆಟ್ಟ ಚಟಗಳಿಗೆ ದಾಸರಾಗುವುದು ಏಕೆ ಗೊತ್ತಾ?

ಧೂಮಪಾನ, ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳ ಸೇವನೆ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೂ ಕೆಲವರು ಮೋಜಿಗಾಗಿ ಇವುಗಳ ಸೇವನೆ ಮಾಡಲು ಪ್ರಾರಂಭಿಸಿ, ಅದಕ್ಕೆ ಸಂಪೂರ್ಣವಾಗಿ ಅಡಿಕ್ಟ್‌ ಆಗುತ್ತಾರೆ. ಆದರೆ ಒಮ್ಮೆ ಈ ದುಶ್ಚಟಗಳಿಗೆ ಅಡಿಕ್ಟ್‌ ಆದ್ರೆ ಅದರಿಂದ ಹೊರ ಬರುವುದು ತುಂಬಾನೇ ಕಷ್ಟ. ಹೀಗೆ ಮಾದಕ ವಸ್ತುಗಳ ವ್ಯಸನಕ್ಕೊಳಗಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡ ಅದೆಷ್ಟೋ ಜನರಿದ್ದಾರೆ.

ಇಂತಹ ಕೆಟ್ಟಕ್ಕೆ ಹೆಚ್ಚಾಗಿ ಆಕರ್ಷಿತರಾಗಲು, ಇವುಗಳಿಗೆ ದಾಸರಾಗಲು ಮುಖ್ಯ ಕಾರಣವೆಂದರೆ, ನಮ್ಮ ದೇಹದಲ್ಲಿ ಇರುವ RASGRF-2 ಜೀನ್‌ ಅಂಶ. ಯಾವುದೇ ರೀತಿಯ ವಸ್ತುಗಳನ್ನು ಸೇವನೆ ಮಾಡಿದಾಗ ಪಡೆದ ಸಂತೋಷವನ್ನು ಆನಂದಿಸುವಲ್ಲಿ ಈ ಜೀನ್ ಪ್ರಮುಖ ಪಾತ್ರ ವಹಿಸುತ್ತದೆ. ಮದ್ಯ ಸೇವನೆ ಮಾಡಿದಾಗ, ಧೂಮಪಾನ ಅಥವಾ ಯಾವುದೇ ಮಾದಕ ದ್ರವ್ಯವನ್ನು ಸೇವನೆ ಮಾಡಿದಾಗ RASGRF-2 ಆನಂದದ ಹಾರ್ಮೋನ್‌ ಆಗಿರುವಂತ ಡೋಪಮೈನ್‌ ಹಾರ್ಮೋನನ್ನು ಹೆಚ್ಚು ಬಿಡುಗಡೆ ಮಾಡುತ್ತದೆ. ಇದೇ ಕಾರಣಕ್ಕೆ ಜನ ಮಾದಕ ವಸ್ತುಗಳನ್ನು ಸೇವನೆ ಮಾಡಿದಾಗ  ನೋವನ್ನೆಲ್ಲಾ ಮರೆತು ಹೆಚ್ಚು  ಸಂತೋಷವಾಗಿರುವುದು.

ಇದನ್ನೂ ಓದಿ
Image
ಅತ್ತೆಯೊಂದಿಗೆ ಜಗಳ ಆಗಬಾರದೆಂದರೆ ಸೊಸೆಯಾದವಳು ಹೀಗಿರಬೇಕು
Image
ಬೆಳಿಗ್ಗೆ ನೀವು ಮಾಡುವ ಈ ತಪ್ಪುಗಳಿಂದ ಇಡೀ ದಿನವೇ ಹಾಳಾಗುತ್ತದೆ
Image
ಈ ಅಭ್ಯಾಸಗಳಿದ್ದರೆ ಶ್ರೀಮಂತಿಕೆ ನಿಮ್ಮ ಹತ್ತಿರಕ್ಕೂ ಸುಳಿಯುವುದಿಲ್ಲ
Image
ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬೇಡಿ

ಇದನ್ನೂ ಓದಿ: ಬೆಳಿಗ್ಗೆ ನೀವು ಮಾಡುವ ಈ ತಪ್ಪುಗಳಿಂದ ಇಡೀ ದಿನವೇ ಹಾಳಾಗುತ್ತದೆ

ಮಾದಕ ವಸ್ತುಗಳನ್ನು ಸೇವಿಸಿದಾಗ ಈ ಡೋಪಮೈನ್‌ ರಾಸಾಯನಿಕವು ತಾತ್ಕಾಲಿಕವಾಗಿ ಸಂತೋಷ ಮತ್ತು ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. ಈ ಸಂತೋಷವನ್ನು ಮತ್ತೆ ಮತ್ತೆ ಅನುಭವಿಸುವ ಬಯಕೆಯಿಂದಾಗಿ ಒಮ್ಮೆ ಮಾದಕ ವಸ್ತುಗಳನ್ನು ಸೇವನೆ ಮಾಡಿದವರು ಮತ್ತೆ ಮತ್ತೆ ಅದರ ಹಿಂದೆಯೇ ಓಡುವುದು.  ಅಭ್ಯಾಸವು ಕ್ರಮೇಣ ವ್ಯಸನವಾಗಿ ಬದಲಾಗುತ್ತದೆ.

ಇವುಗಳನ್ನು ಸೇವಿಸುವುದರಿಂದ ಸಿಗುವ ಕ್ಷಣಿಕ ಸಂತೋಷಕ್ಕಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಒಮ್ಮೆ ಈ ದುಶ್ಚಟಗಳಿಗೆ ಬಲಿಯಾದರೆ ಇವುಗಳಿಂದ ಹೊರ ಬರುವುದು ತುಂಬಾನೇ ಕಷ್ಟ. ಅದಕ್ಕಾಗಿ ಜೀವನವನ್ನು ಹಾಳು ಮಾಡುವ ಈ ಅಭ್ಯಾಸದಿಂದ ದೂರವಿರುವುದು ತುಂಬಾನೇ ಮುಖ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು