Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid ul-adha 2023: ಈದ್-ಅಲ್-ಅಧಾ ಹಬ್ಬವನ್ನು ಬಕ್ರೀದ್ ಎಂಬ ಹೆಸರಿನಿಂದ ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

ಇಸ್ಲಾಂ ಧರ್ಮದಲ್ಲಿ ಬಕ್ರೀದ್ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಇಸ್ಲಾಮಿಕ್ ಕ್ಯಾಲೆಂಡರ್​ನ 12ನೇ ತಿಂಗಳಾದ ಜುಲ್-ಹಜ್ಜಾದ 10ನೇ ದಿನದಂದು ಈದ್-ಉಲ್-ಅಧಾ ಹಬ್ಬವನ್ನು ಆಚರಿಸಲಾಗುತ್ತದೆ. ತ್ಯಾಗದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಕುರಿಗಳನ್ನು ಏಕೆ ಬಲಿಕೊಡಲಾಗುತ್ತದೆ ಹಾಗೂ ಈ ಹಬ್ಬವನ್ನು ಭಾರತದಲ್ಲಿ ಬಕ್ರೀದ್ ಎಂಬ ಹೆಸರಿನಿಂದ ಏಕೆ ಕರೆಯಲಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.

Eid ul-adha 2023: ಈದ್-ಅಲ್-ಅಧಾ ಹಬ್ಬವನ್ನು ಬಕ್ರೀದ್ ಎಂಬ ಹೆಸರಿನಿಂದ ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 28, 2023 | 3:41 PM

ಬಕ್ರೀದ್ ಅಥವಾ ಈದ್ ಉಲ್ ಅಧಾ ಇಸ್ಲಾಂ ಧರ್ಮದ ಪವಿತ್ರ ಹಬ್ಬವಾಗಿದ್ದು, ಈದ್-ಉಲ್-ಫಿತರ್ ಹಬ್ಬ ಆಚರಿಸಿದ ಸುಮಾರು ಎರಡು ತಿಂಗಳುಗಳ ನಂತರ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನದಂದು ಉಳ್ಳವರು ಬಡವರಿಗೆ ದಾನ ಮಾಡುತ್ತಾರೆ ಹಾಗೂ ಈ ದಿನ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ ನಂತರ ಒಂದು ಮೇಕೆಯನ್ನು ಬಲಿ ನೀಡಲಾಗುತ್ತದೆ. ಮುಸ್ಲಿಮರಿಗೆ ಮಾರ್ಗದರ್ಶನ ನೀಡಲು ಅಲ್ಲಾಹನು ಕಳುಹಿಸಿದ ಪ್ರವಾದಿಗಳಲ್ಲಿ ಒಬ್ಬರಾದ ಹಜರತ್ ಇಬ್ರಾಹಿಂ ಅವರ ತ್ಯಾಗವನ್ನು ಸ್ಮರಿಸವ ಹಬ್ಬ ಇದಾಗಿದೆ.

ಈದ್-ಉಲ್-ಅಝಾ ಹಬ್ಬದಲ್ಲಿ ಮೇಕೆಯನ್ನು ಏಕೆ ಬಲಿ ಕೊಡಲಾಗುತ್ತದೆ:

ಇಸ್ಲಾಮಿಕ್ ನಂಬಿಕೆಯ ಪ್ರಕಾರ, ಹಜರತ್ ಇಬ್ರಾಹಿಂ ಅವರು ಅಲ್ಲಾಹನ ಪ್ರವಾದಿ. ಒಮ್ಮೆ ಅಲ್ಲಾಹನು ಹಜರತ್ ಇಬ್ರಾಹಿಂ ಅವರನ್ನು ಪರೀಕ್ಷಿಸುವ ಸಲುವಾಗಿ, ಅವರ ಕನಸಿನಲ್ಲಿ ನಿನ್ನ ಅತ್ಯಂತ ಪ್ರೀತಿಯ ವಸ್ತುವನ್ನು ತ್ಯಾಗ ಮಾಡುವಂತೆ ಕೇಳಿದರು. ಈ ಕನಸನ್ನು ಅಲ್ಲಾಹನ ಸಂದೇಶವೆಂದು ಪರಿಗಣಿಸಿ, ಅವರು ತಮ್ಮ ಪ್ರೀತಿಯ ಏಕೈಕ ಪುತ್ರನಾದ 10 ವರ್ಷದ ಇಸ್ಲಾಯಿಲ್​​​ನನ್ನು ಬಲಿಕೊಡಲು ನಿರ್ಧರಿಸಿದರು. ಇವರ ತ್ಯಾಗ ಮತ್ತು ಭಕ್ತಿಗೆ ಮೆಚ್ಚಿದ ಅಲ್ಲಾಹನು ಮಗನ ಬದಲು ಪ್ರಾಣಿಯ ಬಲಿಕೊಡುವಂತೆ ಸಂದೇಶ ನೀಡಿದರು. ನಂತರ ಮಗನ ಬದಲಿಗೆ ತಾನು ಸಾಕಿದ ಅತ್ಯಂತ ಪ್ರೀತಿಯ ಕುರಿಮರಿಯನ್ನು ಬಲಿ ಕೊಟ್ಟರು. ನಂಬಿಕೆಗಳ ಪ್ರಕಾರ ಈದ್-ಉಲ್-ಅದಾ ದಲ್ಲಿ ಬಲಿ ನೀಡುವ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು.

ಹಜರತ್ ಇಬ್ರಾಹಿಂ ಅವರ ತ್ಯಾಗದ ನೆನಪಿಗಾಗಿ ಪ್ರತಿವರ್ಷ ಈದ್ ಉಲ್ ಅಧಾ ಹಬ್ಬದ ದಿನದಂದು ಮನೆಯಲ್ಲಿ ಪ್ರೀತಿಯಿಂದ ಸಾಕಿದ ಗಂಡು ಕುರಿ, ಮೇಕೆಯನು ಬಲಿ ನೀಡಲಾಗುತ್ತದೆ. ಅದರ ಮಾಂಸವನ್ನು ಮೂರು ಭಾಗಗಳನ್ನಾಗಿ ಮಾಡಿ ಒಂದನೇ ಭಾಗವನ್ನು ನಿರ್ಗತಿಕರಿಗೆ ಅಥವಾ ಬಡವರಿಗೆ, ಎರಡನೇ ಭಾಗವನ್ನು ಕುಟುಂಬ ಹಾಗೂ ಮೂರನೇ ಭಾಗವನ್ನು ಸಂಬಂಧಿಕರು ಮತ್ತು ಸ್ನೇಹಿತರಿಗೆ ಹಂಚಲಾಗುತ್ತದೆ. ಜತೆಗೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂತೋಷ ಹಾಗೂ ಉಡುಗೊರೆಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ:Eid-ul-Adha 2023: ಈದ್-ಉಲ್-ಅಧಾ ಹಬ್ಬದ ದಿನಾಂಕ ಮತ್ತು ವಿಶೇಷತೆಗಳ ಕುರಿತು ಮಾಹಿತಿ ಇಲ್ಲಿದೆ

ಈದ್-ಉಲ್-ಅಧಾ ಹಬ್ಬವನ್ನು ಬಕ್ರೀದ್ ಹಬ್ಬವೆಂದು ಏಕೆ ಕರೆಯುತ್ತಾರೆ?

ಹಜರತ್ ಇಬ್ರಾಹಿಂ ಅವರ ತ್ಯಾಗವನ್ನು ಸ್ಮರಿಸುವ ಈ ಪವಿತ್ರ ಹಬ್ಬವನ್ನು ವಿಶ್ವಾದ್ಯಂತ ಈದ್-ಉಲ್-ಅಧಾ, ಈದ್-ಉಲ್-ಜುಹಾ, ಬಕ್ರೀದ್ ಎಂಬೆಲ್ಲಾ ಹೆಸರುಗಳಿಂದ ಕರೆಯಲಾಗುತ್ತದೆ. ಈದ್-ಉಲ್-ಅಧಾ, ಈದ್-ಉಲ್-ಜುಹಾ ಇವೆರಡು ಅರೆಬಿಕ್ ಪದವಾಗಿದ್ದು, ತ್ಯಾಗದ ಹಬ್ಬ ಎಂಬ ಅರ್ಥವನ್ನು ಸೂಚಿಸುತ್ತದೆ. ಭಾರತದಲ್ಲಿ ಹೆಚ್ಚಾಗಿ ಈ ಪವಿತ್ರ ಹಬ್ಬವನ್ನು ಬಕ್ರೀದ್ ಅಥವಾ ಬಕ್ರ್-ಇದ್ ಎಂಬ ಹೆಸರಿನಿಂದ ಆಚರಿಸಲಾಗುತ್ತದೆ. ಬಕ್ರ್ ಅಥವಾ ಬಕ್ರಿ ಎಂಬುದು ಮೇಕೆಯ ಉರ್ದ ಪದವಾಗಿದ್ದು, ಈ ಹಬ್ಬದಂದು ತ್ಯಾಗದ ಸಂಕೇತವಾಗಿ ಅಲ್ಲಾಹನಿಗೆ ಮೇಕೆ ಮತ್ತು ಕುರಿಗಳನ್ನು ಬಲಿ ನೀಡುವುದರಿಂದ ಬಕ್ರೀದ್ ಅಥವಾ ಬಕ್ರ-ಈದ್ ಎಂಬ ಹೆಸರು ಬಂದಿದೆ. ತ್ಯಾಗದ ಸಂಕೇತವಾಗಿ ಮೇಕೆ ಅಥವಾ ಕುರಿಯನ್ನು ಬಲಿ ನೀಡುವುದರಿಂದ ಈ ಹಬ್ಬವನ್ನು ಬಕ್ರೀದ್ ಎಂಬ ಹೆಸರಿನಿಂದ ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:40 pm, Wed, 28 June 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ