AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಂಬಿನ ಕೆಳಗೆ ಫೋನ್ ಇಟ್ಟುಕೊಂಡು ಮಲಗುತ್ತೀರಾ? ಹುಷಾರು ಅಪಾಯ ತಪ್ಪಿದ್ದಲ್ಲ!

ಮೊಬೈಲ್ ರಿಂಗಣಿಸಿದರೆ ಬೇಗ ಎತ್ತಿಕೊಳ್ಳುತ್ತಾರೆ ಎಂಬ ಕಾರಣಕ್ಕೆ ಹೆಚ್ಚಿನವರು ದಿಂಬಿನ ಕೆಳಗೆ ಫೋನ್ ಇಟ್ಟು ಮಲಗುತ್ತಾರೆ. ಆದರೆ ದಿಂಬಿನ ಕೆಳಗೆ ಮೊಬೈಲ್ ಇಟ್ಟುಕೊಂಡು ಮಲಗುವುದು ತುಂಬಾ ಅಪಾಯಕಾರಿ ಎಂದು ಹೇಳಲಾಗುತ್ತಿದೆ. 

ದಿಂಬಿನ ಕೆಳಗೆ ಫೋನ್ ಇಟ್ಟುಕೊಂಡು ಮಲಗುತ್ತೀರಾ? ಹುಷಾರು ಅಪಾಯ ತಪ್ಪಿದ್ದಲ್ಲ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 22, 2022 | 7:00 AM

Share

ನಮ್ಮಲ್ಲಿ ಹಲವರು ಬೆಳಿಗ್ಗೆ ಎದ್ದ ನಂತರ ಮಾಡುವ ಮೊದಲ ಕೆಲಸವೆಂದರೆ ಫೋನ್ (Mobile) ​ನ್ನು ನೋಡುವುದು. ಅದೇ ಫೋನ್​​ನ್ನು  ರಾತ್ರಿ ಮಲಗುವ ಮುನ್ನ ನೋಡಿಕೊಂಡೆ ಮಲಗಿರುತ್ತೇವೆ. ರಾತ್ರಿ ಮಲಗುವಾಗ ಫೋನ್​ನ್ನು ನಮ್ಮ ಪಕ್ಕದಲ್ಲಿ ಇಟ್ಟುಕೊಂಡು ಮಲಗುತ್ತೇವೆ. ಮೊಬೈಲ್ ರಿಂಗಣಿಸಿದರೆ ಬೇಗ ಎತ್ತಿಕೊಳ್ಳುತ್ತಾರೆ ಎಂಬ ಕಾರಣಕ್ಕೆ ಹೆಚ್ಚಿನವರು ದಿಂಬಿ (pillow) ನ ಕೆಳಗೆ ಫೋನ್ ಇಟ್ಟು ಮಲಗುತ್ತಾರೆ. ಆದರೆ ದಿಂಬಿನ ಕೆಳಗೆ ಮೊಬೈಲ್ ಇಟ್ಟುಕೊಂಡು ಮಲಗುವುದು ತುಂಬಾ ಅಪಾಯಕಾರಿ ಎಂದು ಹೇಳಲಾಗುತ್ತಿದೆ.

ಅಪಾಯವೇನು?

ಫೋನ್​ನ್ನು ದಿಂಬಿನ ಕೆಳಗೆ ಇಡಬೇಡಿ:

ಮೊಬೈಲನ್ನು ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಅನೇಕ ಅನಾನುಕೂಲತೆಗಳಿವೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಬಗ್ಗೆ ಹಲವು ರೀತಿಯ ಸಂಶೋಧನೆಗಳನ್ನು ಮಾಡಿದೆ. 2011 ರಲ್ಲಿ ಇದಕ್ಕೆ ಸಂಬಂಧಿಸಿದ ಸಂಶೋಧನೆಯ ಪ್ರಕಾರ, ಮೊಬೈಲ್ ದಿಂಬಿನ ಕೆಳಗೆ ಮಲಗುವುದರಿಂದ, ರೇಡಿಯೊ ಆವರ್ತನವು ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ಇದು ನಿದ್ರೆಗೆ ಅಡ್ಡಿಯಾಗಬಹುದು. ಇದು ವಯಸ್ಕರಿಗಿಂತ ಮಕ್ಕಳ ಮೇಲೆ ಹೆಚ್ಚು ಹಾನಿಕಾರಕವಾಗಿದೆ.

ನೀಲಿ ಬೆಳಕಿನ ಹಾನಿ:

ನಿಮ್ಮ ಮೊಬೈಲ್​ನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದಾಗ, ನಮ್ಮಲ್ಲಿ ಹೆಚ್ಚಿನವರು ಅದರ ನೀಲಿ ಬೆಳಕಿನಿಂದ ತೊಂದರೆಗೊಳಗಾಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಪದೇ ಪದೇ ಫೋನ್‌ನ ನೀಲಿ ಬೆಳಕನ್ನು ಕತ್ತಲೆಯಲ್ಲಿ ನೋಡುವುದರಿಂದ ನಮ್ಮ ಕಣ್ಣಿಗೆ ಹಾನಿಯಾಗುತ್ತದೆ.

ಬಿಸಿ ಅನುಭವ:

ಫೋನ್​ನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವ ದೊಡ್ಡ ಅಪಾಯವೆಂದರೆ ಮೊಬೈಲ್ ಫೋನ್ ಬಿಸಿಯಾಗಿರುವಾಗ ಮತ್ತು ಅದನ್ನು ದಿಂಬಿನ ಕೆಳಗೆ ಇಟ್ಟ ನಂತರ ಅದರಲ್ಲಿ ಬೆಂಕಿಯ ಅಪಾಯ ಉಂಟಾಗುತ್ತದೆ. ಅನೇಕ ಜನರು ತಮ್ಮ ಬಳಿ ಚಾರ್ಜಿಂಗ್‌ನಲ್ಲಿ ಫೋನ್‌ನೊಂದಿಗೆ ಮಲಗುತ್ತಾರೆ, ಅದು ತುಂಬಾ ಅಪಾಯಕಾರಿ ಎಂದು ಸಾಬೀತುಪಡಿಸಲಾಗಿದೆ.

ನಿದ್ರಾ ಭಂಗ:

ಸಂಶೋಧನೆಯ ಪ್ರಕಾರ, ಫೋನ್ ರಿಂಗಣಿಸುವುದು ನಮ್ಮ ಸಂಪೂರ್ಣ ನಿದ್ರೆಯನ್ನು ಹಾಳು ಮಾಡುತ್ತದೆ. ಅದರ ರೇಡಿಯೊ ಆವರ್ತನವು ನಿದ್ರೆಯ ಮಾದರಿಯನ್ನು ಬದಲಾಯಿಸುತ್ತದೆ. ನೀವು ಮಲಗಿರುವಾಗಲೂ ನೀವು ದಣಿದವರಂತೆ ಕಾಣುತ್ತೀರಿ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು