Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ರಾತ್ರಿ ಸ್ನಾನ ಮಾಡುತ್ತೀರಾ? ನಿಮಗೆ ಈ ವಿಷಯಗಳನ್ನು ತಿಳಿದಿರಲೇಬೇಕು

ರಾತ್ರಿಯ ಸಮಯದಲ್ಲಿ ಸ್ನಾನ ಮಾಡುವುದರಿಂದ ಯಾವ ರೀತಿಯ ಫಲಿತಾಂಶಗಳು ಸಿಗುತ್ತವೆ? ರಾತ್ರಿ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಕೆಟ್ಟ ಪರಿಣಾಮ ಬೀರುತ್ತದೆಯೇ? ಅಲ್ಲದೆ, ರಾತ್ರಿ ತಲೆ ಸ್ನಾನ ಮಾಡಬಹುದೇ? ಹೀಗೆ ಅನೇಕ ಪ್ರಶ್ನೆಗಳು ನಿಮ್ಮನ್ನು ಕಾಡಬಹುದು. ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೇಸಿಗೆಯಲ್ಲಿ ರಾತ್ರಿ ಸ್ನಾನ ಮಾಡುತ್ತೀರಾ? ನಿಮಗೆ ಈ ವಿಷಯಗಳನ್ನು ತಿಳಿದಿರಲೇಬೇಕು
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 12, 2025 | 3:58 PM

ರಾತ್ರಿ ಸ್ನಾನ ಮಾಡುವುದರಿಂದ ದೇಹ ಮತ್ತು ಮನಸ್ಸಿಗೆ ಶಾಂತಿ ಹಾಗೂ ಒಂದು ರೀತಿಯ ನೆಮ್ಮದಿ ಸಿಗುತ್ತದೆ. ಬೆಳಿಗ್ಗೆ ಬಿಸಿಲು, ಶಾಖ ಮತ್ತು ಬೆವರಿನಿಂದ ನಾವು ಎದುರಿಸುವ ಸಮಸ್ಯೆಗಳನ್ನು ರಾತ್ರಿಯವೊಂದು ಸಾನ್ನ ನಿವಾರಿಸುತ್ತದೆ. ರಾತ್ರಿ ಸ್ನಾನ ಮಾಡುವುದರಿಂದ ದೇಹವು ತುಂಬಾ ಹಗುರವಾಗುತ್ತದೆ. ಜತೆಗೆ ಒಂದು ಸಮಾಧಾನವನ್ನು ನೀಡುತ್ತದೆ. ಬೆಳಗ್ಗಿನಿಂದ ಬಿಸಿಲು, ಶಾಖ ಮತ್ತು ಬೆವರಿನಿಂದ ಉಂಟಾದ ಒತ್ತಡ ಮತ್ತು ಕಿರಿಕಿರಿಯು ಕೇವಲ ಒಂದು ಸ್ನಾನದಿಂದ ತೊಳೆದುಹೋದಂತೆ ಭಾಸವಾಗುತ್ತದೆ. ಆದರೆ ಈ ರಾತ್ರಿಯ ಸಮಯದಲ್ಲಿ ಸ್ನಾನ ಮಾಡುವುದರಿಂದ ಯಾವ ರೀತಿಯ ಫಲಿತಾಂಶಗಳು ಸಿಗುತ್ತವೆ? ರಾತ್ರಿ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಕೆಟ್ಟ ಪರಿಣಾಮ ಬೀರುತ್ತದೆಯೇ? ಅಲ್ಲದೆ, ರಾತ್ರಿ ತಲೆ ಸ್ನಾನ ಮಾಡಬಹುದೇ? ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೇಸಿಗೆಯಲ್ಲಿ, ಬೆವರುವುದನ್ನು ತಪ್ಪಿಸಲು ಅನೇಕ ಜನರು ಹಲವಾರು ಬಾರಿ ಸ್ನಾನ ಮಾಡುತ್ತಾರೆ. ಹೀಗೆ ಮಾಡುವುದರಿಂದ ದೇಹದ ವಾಸನೆಯ ಸಮಸ್ಯೆ ಇರುವುದಿಲ್ಲ. ರಾತ್ರಿ ಮಲಗುವ ಮುನ್ನ ಸ್ನಾನ ಮಾಡಿದರೆ, ನಿಮ್ಮ ದೇಹದಲ್ಲಿ ಹಲವು ಬದಲಾವಣೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.ಹೀಗೆ ಮಾಡುವುದರಿಂದ, ವ್ಯಕ್ತಿಯು ತಾಜಾತನವನ್ನು ಅನುಭವಿಸುತ್ತಾನೆ. ಬೇಸಿಗೆ ಕಾಲದಲ್ಲಿ ರಾತ್ರಿ ಸ್ನಾನ ಮಾಡುವುದರಿಂದ ಆಯಾಸದಿಂದ ಪರಿಹಾರ ಸಿಗುತ್ತದೆ. ಇದಲ್ಲದೆ, ಮನಸ್ಸು ತಾಜಾವಾಗಿರುತ್ತದೆ, ಇದರ ಜತೆಗೆ ಒತ್ತಡದ ಸಮಸ್ಯೆ ಇರುವುದಿಲ್ಲ. ರಾತ್ರಿ ಸ್ನಾನ ಮಾಡುವುದರಿಂದ ದೇಹವು ವಿಶ್ರಾಂತಿ ಪಡೆಯುತ್ತದೆ ಮತ್ತು ರಾತ್ರಿ ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ಇದರೊಂದಿಗೆ ಮಾನಸಿಕ ಆರೋಗ್ಯವೂ ಉತ್ತಮವಾಗಿರುತ್ತದೆ.

ಇನ್ನು ಇದು ದೇಹದಲ್ಲಿ ಸೋಂಕಿನ ಅಪಾಯವನ್ನು ತಡೆಯುತ್ತದೆ. ಬೇಸಿಗೆಯಲ್ಲಿ ರಾತ್ರಿ ಸ್ನಾನ ಮಾಡುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಹೃದಯ ಕಾಯಿಲೆಗಳ ಅಪಾಯವನ್ನೂ ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ಬೆವರುವುದರಿಂದ ಚರ್ಮದ ಸಮಸ್ಯೆಗಳು ಉಂಟಾಗುತ್ತವೆ. ಇದನ್ನು ತಪ್ಪಿಸಲು, ನೀವು ರಾತ್ರಿ ಸ್ನಾನ ಮಾಡಿ ಮಲಗಬೇಕು. ಇದು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ.ಮಲಗುವ ಮುನ್ನ ಸ್ನಾನ ಮಾಡಿ ಮಲಗುವುದೂ ಸಹ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ
Image
ಮಕ್ಕಳಿಗೆ ಈ ಬೇಸಿಗೆಯಲ್ಲಿ ಈ ರೀತಿಯ ಬಟ್ಟೆ ಖರೀದಿಸಿ
Image
ಹಾಲನ್ನು ದಿನಕ್ಕೆ ಎಷ್ಟು ಬಾರಿ ಬಿಸಿ ಮಾಡಬೇಕು?
Image
ಮುದ್ದಿನಿಂದ ಬೆಳೆಸುವ ಮಕ್ಕಳಿಗೆ ಬೇಕು ಶಿಸ್ತಿನ ಪಾಠ, ಈ ಸಲಹೆ ಪಾಲಿಸಿ
Image
ತುಂಬಾ ಸುಂದರವಾಗಿ ಕಾಣಬೇಕಾದರೆ ದಾಳಿಂಬೆ ಸಿಪ್ಪೆಯನ್ನು ಈ ರೀತಿ ಬಳಸಿ

ಇದನ್ನೂ ಓದಿ: ಈ ಚಿತ್ರದಲ್ಲಿ ನಿಮ್ಮ ಆಯ್ಕೆಯ ವೃತ್ತವೇ ನಿಮ್ಮ ವ್ಯಕ್ತಿತ್ವ ಹೇಳುತ್ತೆ

ಆದರೆ, ಊಟದ ನಂತರ ಸ್ನಾನ ಮಾಡಬಾರದು ಎಂದು ಹೇಳಲಾಗುತ್ತದೆ. ಏಕೆಂದರೆ ಹಾಗೆ ಮಾಡುವುದರಿಂದ ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಸೋಂಕಿಗೆ ಹೆಚ್ಚು ಒಳಗಾಗಬಹುದು. ಅಷ್ಟೇ ಅಲ್ಲ. ಊಟದ ನಂತರ ಸ್ನಾನ ಮಾಡುವವರಿಗೆ ಜೀರ್ಣಕ್ರಿಯೆ ಸಮಸ್ಯೆಗಳು ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ