Midnight Hunger : ಊಟ ಮಾಡಿ ಮಲಗಿದ್ರೂ, ಮಧ್ಯರಾತ್ರಿ ಹಸಿವಾಗುತ್ತಾ? ಇಲ್ಲಿದೆ ಸರಳ ಸಲಹೆಗಳು

ಇಂದಿನ ಜನರ ಜೀವನ ಶೈಲಿಯ ಬದಲಾವಣೆಯೂ ಊಟ ತಿಂಡಿ ಮಾಡಲು ಸಮಯವಿಲ್ಲ. ಹೀಗಾಗಿ ಚಿಕ್ಕವರಿಂದ ಹಿಡಿದು ದೊಡ್ಡವರಿಗೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಅದಲ್ಲದೇ ಕೆಲವರು ಸಮಯಕ್ಕೆ ಸರಿಯಾಗಿ ಊಟ ತಿಂಡಿ ಮಾಡುತ್ತಿಲ್ಲ. ಹೀಗಾಗಿ ರಾತ್ರಿ ಊಟ ಮಾಡಿದ್ರು, ಮಧ್ಯರಾತ್ರಿ ಹಸಿವಾಗುತ್ತದೆ. ಹೀಗಾಗಿ ನಡುರಾತ್ರಿಯಲ್ಲಿ ಇದ್ದು ಏನಾದರೂ ಸೇವಿಸದೇ ಇದ್ದರೆ ನಿದ್ದೆಯೇ ಬರುವುದಿಲ್ಲ. ಈ ಅಭ್ಯಾಸದಿಂದ ಮುಕ್ತರಾಗಲು ಈ ಸರಳ ಟಿಪ್ಸ್ ಅನುಸರಿಸುವುದು ಉತ್ತಮ.

Midnight Hunger : ಊಟ ಮಾಡಿ ಮಲಗಿದ್ರೂ, ಮಧ್ಯರಾತ್ರಿ ಹಸಿವಾಗುತ್ತಾ? ಇಲ್ಲಿದೆ ಸರಳ ಸಲಹೆಗಳು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 10, 2024 | 3:22 PM

ನಮ್ಮ ಹಿರಿಯರು ಬೇಗ ಮಲಗಿ ಬೇಗ ಏಳು ಎನ್ನುವ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. ಪೌಷ್ಟಿಕಾಂಶಯುಕ್ತ ಹಾಗೂ ಸಮತೋಲಿತ ಆಹಾರ ಸೇವನೆಯತ್ತ ಹೆಚ್ಚು ಗಮನ ಕೊಡುತ್ತಿದ್ದರು. ಆದರೆ ಇಂದಿನವರ ಜೀವನ ಶೈಲಿ ಹಾಗೂ ಆಹಾರ ಕ್ರಮ ಎಲ್ಲವು ಬದಲಾಗಿದೆ. ಕೆಲವರಿಗೆ ರಾತ್ರಿ ಮಲಗುವ ಮುನ್ನ ಊಟ ಮಾಡಿದ್ರೂ, ಮಧ್ಯರಾತ್ರಿ ಹಸಿವಾಗುತ್ತದೆ. ಎದ್ದು ಏನಾದರೂ ತಿಂದರೇನೇ ಸಮಾಧಾನ. ಆಹಾರ ಪದ್ಧತಿಯಲ್ಲಿನ ಅಸಮತೋಲನ, ದೈಹಿಕ ಚಟುವಟಿಕೆಗಳಲ್ಲಿ ಏರುಪೇರು, ಒತ್ತಡ ಹಾಗೂ ಆತಂಕ ಈ ರೀತಿಯಾಗಲು ಕಾರಣ ಎನ್ನಲಾಗಿದೆ.

ಮಧ್ಯರಾತ್ರಿ ಹಸಿವಾದ್ರೆ ಈ ಸಲಹೆಗಳನ್ನು ಅನುಸರಿಸಿ

  • ಪ್ರೋಟೀನ್, ಕೊಬ್ಬುಗಳು, ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿರುವ ಸಮತೋಲಿತ ಆಹಾರವನ್ನು ರಾತ್ರಿ ಸೇವಿಸುವುದು ಒಳ್ಳೆಯದು. ಇದು ಸಕ್ಕರೆಯಲ್ಲಿನ ಮಟ್ಟವನ್ನು ಸ್ಥಿರಗೊಳಿಸಿ, ರಾತ್ರಿಯಲ್ಲಿ ಹಸಿವಿನಿಂದ ಎಚ್ಚರಗೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
  • ಒತ್ತಡವನ್ನು ಕಡಿಮೆ ಮಾಡಲು ಮತ್ತು ವಿಶ್ರಾಂತಿಯನ್ನು ಉತ್ತೇಜಿಸಲು ಮಲಗುವ ಮುನ್ನ ಆಳವಾದ ಉಸಿರಾಟ, ಧ್ಯಾನ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳುವುದು ಉತ್ತಮ. ಹೀಗಾಗಿ ನಿದ್ದೆಯ ನಡುವೆ ಎಚ್ಚರವಾಗುವುದಿಲ್ಲ.
  • ಬ್ರೆಡ್​ ಸ್ಯಾಂಡ್​ವಿಚ್​​ ಕೂಡ ಮಧ್ಯರಾತ್ರಿ ಹೊಟ್ಟೆ ಹಸಿವು ಆಗದಂತೆ ತಡೆಯುತ್ತದೆ. ಹೀಗಾಗಿ ರಾತ್ರಿ ಮಲಗುವ ಮುನ್ನ ಎರಡು ಬ್ರೆಡ್​ ತುಂಡಿಗೆ ಟೊಮೆಟೊ, ಸ್ವಲ್ಪ ಚೀಸ್​ ಹಾಕಿ ತಿನ್ನುವುದರಿಂದ ರಾತ್ರಿ ಎಚ್ಚರವಾಗುವುದನ್ನು ತಪ್ಪಿಸಬಹುದು.
  • ಸಿಹಿ ಗೆಣಸನ್ನು ಬೇಯಿಸಿ ಸೇವಿಸುವುದರಿಂದ ಹೊಟ್ಟೆ ತುಂಬುತ್ತದೆ. ಇದರಲ್ಲಿಯೂ ಫೈಬರ್​ ಮತ್ತು ಪ್ರೋಟಿನ್​ಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶವನ್ನು ನೀಡಿ ನಿದ್ರೆ ಭಂಗವಾಗದಂತೆ ತಡೆಯುತ್ತದೆ.
  • ಸಾಕಷ್ಟು ಪ್ರಮಾಣದ ನೀರನ್ನು ಸೇವಿಸುವ ಮೂಲಕ ದಿನವಿಡೀ ಸರಿಯಾದ ಜಲಸಂಚಯನವನ್ನು ಕಾಪಾಡಿಕೊಳ್ಳಬಹುದಾಗಿದೆ. ರಾತ್ರಿಯ ಬಾಯಾರಿಕೆಯನ್ನು ನೀಗಿಸಲು ನಿಮ್ಮ ಹಾಸಿಗೆಯ ಪಕ್ಕದಲ್ಲಿ ಒಂದು ಲೋಟ ನೀರನ್ನು ಸುಲಭವಾಗಿ ಇರಿಸಿಕೊಳ್ಳಲು. ಸಾಕಷ್ಟು ನೀರು ಕುಡಿಯುವ ಈ ಸರಳ ಅಭ್ಯಾಸವು ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಧನಾತ್ಮಕ ಪರಿಣಾಮಗಳನ್ನು ಬೀರಬಹುದು. ರಾತ್ರಿಯ ವೇಳೆ ಹಸಿವಾಗುವುದನ್ನು ತಡೆಯಲು ಸಹಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್