AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Water: ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ಖರ್ಚು ಮಾಡ್ತಾರೆ ಈ ವ್ಯಕ್ತಿ; ಯಾಕೆ ಅಂತೀರಾ?

Viral News: ಎಷ್ಟೋ ಜನರಿಗೆ ಕುಡಿಯಲು ಶುದ್ಧವಾದ ನೀರೇ ಸಿಗುವುದಿಲ್ಲ. ಇನ್ನು ಕೆಲವರು ಸ್ನಾನಕ್ಕೂ ಮಿನರಲ್ ವಾಟರ್​​ ಬಳಸುತ್ತಾರೆ. ಇದರ ನಡುವೆ ಇಲ್ಲೊಬ್ಬರು ವ್ಯಕ್ತಿ ತಾನು ಕುಡಿಯುವ ಬ್ರಾಂಡೆಡ್ ವಾಟರ್ ಬಾಟಲ್​ಗಾಗಿ ಪ್ರತಿ ತಿಂಗಳು 1.5 ಲಕ್ಷ ರೂ. ಖರ್ಚು ಮಾಡುತ್ತಾರಂತೆ.

Drinking Water: ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ಖರ್ಚು ಮಾಡ್ತಾರೆ ಈ ವ್ಯಕ್ತಿ; ಯಾಕೆ ಅಂತೀರಾ?
ಬ್ರಾಂಡೆಡ್ ನೀರಿನ ಬಾಟಲ್​ಗಳನ್ನು ಇಟ್ಟಿರುವ ವ್ಯಕ್ತಿ
TV9 Web
| Edited By: |

Updated on: Feb 17, 2022 | 7:49 PM

Share

ಕೆಲವರಿಗೆ ತಾವು ಬಳಸುವ ಎಲ್ಲವೂ ಬ್ರ್ಯಾಂಡೆಡ್ ಆಗಿರಬೇಕು ಎಂಬ ಮನೋಭಾವವಿರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿಗೆ ತಾನು ಕುಡಿಯುವ ನೀರು (Drinking Water) ಕೂಡ ಬ್ರ್ಯಾಂಡೆಡ್ ಆಗಬೇಕಂತೆ. ಅದಕ್ಕಾಗಿ ಆತ ಪ್ರತಿ ತಿಂಗಳು ಖರ್ಚು ಮಾಡುವ ಹಣ ಎಷ್ಟು ಎಂದು ಗೊತ್ತಾದರೆ ನಿಮಗೆ ಶಾಕ್ ಆಗುವುದು ಗ್ಯಾರಂಟಿ. ಈ ಕುರಿತು ಟಿಕ್​ಟಾಕ್​ನಲ್ಲಿ ವಿಡಿಯೋವೊಂದನ್ನು ಅಪ್​ಲೋಡ್ ಮಾಡಿರುವ ರಿಯಾನ್ ಡಬ್ಸ್ ಎಂಬಾತ ತಾನು ಪ್ರತಿ ತಿಂಗಳು ಕುಡಿಯುವ ನೀರಿಗಾಗಿ 1.5 ಲಕ್ಷ ರೂ. ಖರ್ಚು ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ತಾನು ಬಳಸುವ ಬ್ರ್ಯಾಂಡೆಡ್ ವಾಟರ್ ಬಾಟಲ್​ಗಳ ಫೋಟೋವನ್ನು ಕೂಡ ಪೋಸ್ಟ್ ಮಾಡಿದ್ದಾನೆ.

ನನಗೆ ಶುದ್ಧವಾದ ನೀರು ಬೇಕೇ ಬೇಕು. ನಲ್ಲಿಯಲ್ಲಿ ಅಥವಾ ಫಿಲ್ಟರ್​​ನಲ್ಲಿ ಹಿಡಿದು ಕುಡಿಯುವ ನೀರು ನನಗೆ ಇಷ್ಟವಾಗುವುದಿಲ್ಲ. ಹೀಗಾಗಿ, ನನ್ನ ಮನೆಗೆ ನೇರವಾಗಿ ತಲುಪುವ ಹೈ ಎಂಡ್ ವಾಟರ್ ಬಾಟಲಿಗಳಿಗಾಗಿ ನಾನು ತಿಂಗಳಿಗೆ 1.5 ಲಕ್ಷ ರೂ. ಖರ್ಚು ಮಾಡುತ್ತೇನೆ ಎಂದಿದ್ದಾರೆ.

‘ನಾನು ಈ ವಾಟರ್ ಬಾಟಲ್​ಗಳನ್ನು ಎಲ್ಲಿಡುತ್ತೇನೆ ಎಂದು ನೀವು ಯೋಚಿಸುತ್ತಿರಬಹುದು. ನನ್ನ ಬಳಿ ನಾಲ್ಕು ಫ್ರಿಡ್ಜ್​ಗಳಿವೆ. ಅವುಗಳಲ್ಲಿ ನಾನು ವಾಟರ್ ಬಾಟಲ್​ಗಳನ್ನು ಇಡುತ್ತೇನೆ. ಪ್ಲಾಸ್ಟಿಕ್​ ಬಳಕೆಯನ್ನು ಕಡಿಮೆ ಮಾಡಬೇಕೆಂಬ ಕಾರಣಕ್ಕೆ ನಾನು ಪರಿಸರ ಸ್ನೇಹಿಯಾದ ಗಾಜಿನ ವಾಟರ್ ಬಾಟಲ್​ಗಳನ್ನು ಉತ್ಪಾದಿಸುವ ಬ್ರ್ಯಾಂಡ್​ನಿಂದ ನೀರಿನ ಬಾಟಲ್​ಗಳನ್ನು ತರಿಸಿಕೊಳ್ಳುತ್ತೇನೆ’ ಎಂದು ರಯಾನ್ ಹೇಳಿದ್ದಾರೆ.

ಇದಕ್ಕೆ ಹಲವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ‘ನಮಗೆ ಏನು ಹೇಳಬೇಕೆಂದೇ ತಿಳಿಯುತ್ತಿಲ್ಲ. ಜಗತ್ತಿನಲ್ಲಿ 3 ಜನರಲ್ಲಿ ಒಬ್ಬರು ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದರೆ, ಈ ವ್ಯಕ್ತಿ ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ರೂ. ಖರ್ಚು ಮಾಡುತ್ತಿದ್ದಾನೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: Viral News: 42 ಲಕ್ಷ ರೂ. ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ಕಟ್ಟಿಸಿ ಸಾಮರಸ್ಯ ಮೆರೆದ ಮುಸ್ಲಿಂ ಉದ್ಯಮಿ

Viral News: ಆ ಒಂದು ಫೋಟೋದಿಂದ ಅದೃಷ್ಟವೇ ಬದಲಾಯ್ತು; ಕೇರಳದ ಕೂಲಿ ಕಾರ್ಮಿಕ ಈಗ ಸೂಪರ್ ಮಾಡೆಲ್!

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?