AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Water: ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ಖರ್ಚು ಮಾಡ್ತಾರೆ ಈ ವ್ಯಕ್ತಿ; ಯಾಕೆ ಅಂತೀರಾ?

Viral News: ಎಷ್ಟೋ ಜನರಿಗೆ ಕುಡಿಯಲು ಶುದ್ಧವಾದ ನೀರೇ ಸಿಗುವುದಿಲ್ಲ. ಇನ್ನು ಕೆಲವರು ಸ್ನಾನಕ್ಕೂ ಮಿನರಲ್ ವಾಟರ್​​ ಬಳಸುತ್ತಾರೆ. ಇದರ ನಡುವೆ ಇಲ್ಲೊಬ್ಬರು ವ್ಯಕ್ತಿ ತಾನು ಕುಡಿಯುವ ಬ್ರಾಂಡೆಡ್ ವಾಟರ್ ಬಾಟಲ್​ಗಾಗಿ ಪ್ರತಿ ತಿಂಗಳು 1.5 ಲಕ್ಷ ರೂ. ಖರ್ಚು ಮಾಡುತ್ತಾರಂತೆ.

Drinking Water: ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ಖರ್ಚು ಮಾಡ್ತಾರೆ ಈ ವ್ಯಕ್ತಿ; ಯಾಕೆ ಅಂತೀರಾ?
ಬ್ರಾಂಡೆಡ್ ನೀರಿನ ಬಾಟಲ್​ಗಳನ್ನು ಇಟ್ಟಿರುವ ವ್ಯಕ್ತಿ
TV9 Web
| Edited By: |

Updated on: Feb 17, 2022 | 7:49 PM

Share

ಕೆಲವರಿಗೆ ತಾವು ಬಳಸುವ ಎಲ್ಲವೂ ಬ್ರ್ಯಾಂಡೆಡ್ ಆಗಿರಬೇಕು ಎಂಬ ಮನೋಭಾವವಿರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿಗೆ ತಾನು ಕುಡಿಯುವ ನೀರು (Drinking Water) ಕೂಡ ಬ್ರ್ಯಾಂಡೆಡ್ ಆಗಬೇಕಂತೆ. ಅದಕ್ಕಾಗಿ ಆತ ಪ್ರತಿ ತಿಂಗಳು ಖರ್ಚು ಮಾಡುವ ಹಣ ಎಷ್ಟು ಎಂದು ಗೊತ್ತಾದರೆ ನಿಮಗೆ ಶಾಕ್ ಆಗುವುದು ಗ್ಯಾರಂಟಿ. ಈ ಕುರಿತು ಟಿಕ್​ಟಾಕ್​ನಲ್ಲಿ ವಿಡಿಯೋವೊಂದನ್ನು ಅಪ್​ಲೋಡ್ ಮಾಡಿರುವ ರಿಯಾನ್ ಡಬ್ಸ್ ಎಂಬಾತ ತಾನು ಪ್ರತಿ ತಿಂಗಳು ಕುಡಿಯುವ ನೀರಿಗಾಗಿ 1.5 ಲಕ್ಷ ರೂ. ಖರ್ಚು ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ತಾನು ಬಳಸುವ ಬ್ರ್ಯಾಂಡೆಡ್ ವಾಟರ್ ಬಾಟಲ್​ಗಳ ಫೋಟೋವನ್ನು ಕೂಡ ಪೋಸ್ಟ್ ಮಾಡಿದ್ದಾನೆ.

ನನಗೆ ಶುದ್ಧವಾದ ನೀರು ಬೇಕೇ ಬೇಕು. ನಲ್ಲಿಯಲ್ಲಿ ಅಥವಾ ಫಿಲ್ಟರ್​​ನಲ್ಲಿ ಹಿಡಿದು ಕುಡಿಯುವ ನೀರು ನನಗೆ ಇಷ್ಟವಾಗುವುದಿಲ್ಲ. ಹೀಗಾಗಿ, ನನ್ನ ಮನೆಗೆ ನೇರವಾಗಿ ತಲುಪುವ ಹೈ ಎಂಡ್ ವಾಟರ್ ಬಾಟಲಿಗಳಿಗಾಗಿ ನಾನು ತಿಂಗಳಿಗೆ 1.5 ಲಕ್ಷ ರೂ. ಖರ್ಚು ಮಾಡುತ್ತೇನೆ ಎಂದಿದ್ದಾರೆ.

‘ನಾನು ಈ ವಾಟರ್ ಬಾಟಲ್​ಗಳನ್ನು ಎಲ್ಲಿಡುತ್ತೇನೆ ಎಂದು ನೀವು ಯೋಚಿಸುತ್ತಿರಬಹುದು. ನನ್ನ ಬಳಿ ನಾಲ್ಕು ಫ್ರಿಡ್ಜ್​ಗಳಿವೆ. ಅವುಗಳಲ್ಲಿ ನಾನು ವಾಟರ್ ಬಾಟಲ್​ಗಳನ್ನು ಇಡುತ್ತೇನೆ. ಪ್ಲಾಸ್ಟಿಕ್​ ಬಳಕೆಯನ್ನು ಕಡಿಮೆ ಮಾಡಬೇಕೆಂಬ ಕಾರಣಕ್ಕೆ ನಾನು ಪರಿಸರ ಸ್ನೇಹಿಯಾದ ಗಾಜಿನ ವಾಟರ್ ಬಾಟಲ್​ಗಳನ್ನು ಉತ್ಪಾದಿಸುವ ಬ್ರ್ಯಾಂಡ್​ನಿಂದ ನೀರಿನ ಬಾಟಲ್​ಗಳನ್ನು ತರಿಸಿಕೊಳ್ಳುತ್ತೇನೆ’ ಎಂದು ರಯಾನ್ ಹೇಳಿದ್ದಾರೆ.

ಇದಕ್ಕೆ ಹಲವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ‘ನಮಗೆ ಏನು ಹೇಳಬೇಕೆಂದೇ ತಿಳಿಯುತ್ತಿಲ್ಲ. ಜಗತ್ತಿನಲ್ಲಿ 3 ಜನರಲ್ಲಿ ಒಬ್ಬರು ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದರೆ, ಈ ವ್ಯಕ್ತಿ ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ರೂ. ಖರ್ಚು ಮಾಡುತ್ತಿದ್ದಾನೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: Viral News: 42 ಲಕ್ಷ ರೂ. ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ಕಟ್ಟಿಸಿ ಸಾಮರಸ್ಯ ಮೆರೆದ ಮುಸ್ಲಿಂ ಉದ್ಯಮಿ

Viral News: ಆ ಒಂದು ಫೋಟೋದಿಂದ ಅದೃಷ್ಟವೇ ಬದಲಾಯ್ತು; ಕೇರಳದ ಕೂಲಿ ಕಾರ್ಮಿಕ ಈಗ ಸೂಪರ್ ಮಾಡೆಲ್!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ