AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurveda Tips: ನೀರು ಯಾವಾಗ, ಎಷ್ಟು ಪ್ರಮಾಣದಲ್ಲಿ ಕುಡಿಯಬೇಕು, ಆಯುರ್ವೇದ ಸೂಕ್ತ ಸಲಹೆ ಇಲ್ಲಿದೆ

ನೀವು ಎಷ್ಟು ನೀರು ಕುಡಿಯಬೇಕೆಂದು ಎಂಬುದರ ಹೊರತಾಗಿ ಆಯುರ್ವೇದವು ನಿಮ್ಮ ಪ್ರಸ್ತುತ ಅಗತ್ಯಗಳನ್ನು ಅವಲಂಬಿಸಿ ನೀರಿನ ಸರಿಯಾದ ತಾಪಮಾನದ ಬಗ್ಗೆ ಶಿಫಾರಸ್ಸನ್ನು ಮಾಡಿದೆ.

Ayurveda Tips: ನೀರು ಯಾವಾಗ, ಎಷ್ಟು ಪ್ರಮಾಣದಲ್ಲಿ ಕುಡಿಯಬೇಕು, ಆಯುರ್ವೇದ ಸೂಕ್ತ ಸಲಹೆ ಇಲ್ಲಿದೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Jan 22, 2023 | 5:09 PM

Share

ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದರಿಂದ ನಿಮ್ಮ ಆರೋಗ್ಯದ ಅನೇಕ ಅಂಶಗಳು ಸುಧಾರಿಸಲು ಅದು ಸಹಾಯ ಮಾಡುತ್ತದೆ. ರಕ್ತದೊತ್ತಡ ನಿಯಂತ್ರಣ, ತೂಕ ನಿರ್ವಹಣೆ, ಉತ್ತಮ ಶಕ್ತಿಯ ಮಟ್ಟ, ಚರ್ಮ ಮತ್ತು ಕೂದಲಿನ ಆರೋಗ್ಯ ಹೀಗೆ ನೀರು ನಿಮ್ಮ ಒಟಾರೆ ಯೋಗಕ್ಷೇಮದಲ್ಲಿ ಅವಿಭಾಜ್ಯ ಪಾತ್ರವನ್ನು ವಹಿಸುತ್ತದೆ. ನೀವು ಎಷ್ಟು ನೀರು ಕುಡಿಯಬೇಕು ಎಂಬುದು ಹೊರತಾಗಿ, ಆಯುರ್ವೇದವು ನಿಮ್ಮ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ನೀರಿನ ಸರಿಯಾದ ತಾಪಮಾನದ ಬಗ್ಗೆ ಶಿಫಾರಸ್ಸುಗಳನ್ನು ಹೊಂದಿದೆ.

ಆಯುರ್ವೇದ ತಜ್ಞೆ ಡಾ. ರೇಖಾ ರಾಧಾಮೋನಿ ಅವರು ತಮ್ಮ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್​​ನಲ್ಲಿ ಅಷ್ಟಾಂಗ ಹೃದಯ ಸೂತ್ರ ಸ್ಥಾನವನ್ನು ಉಲ್ಲೇಖಿಸಿ ಯಾರು ಯಾವ ರೀತಿಯ ನೀರನ್ನು ಕುಡಿಯಬೇಕು ಎಂಬುದರ ಕುರಿತು ವಿವರವಾಗಿ ಹೇಳಿದ್ದಾರೆ. ತುಂಬಾ ಬಾಯಾರಿಕೆಯಾದಾಗ ಅಥವಾ ಫುಡ್ ಪಾಯಿಸನ್ ಆದಾಗ ಬೆಚ್ಚಗಿನ ನೀರಿಗಿಂತ, ನಿಮ್ಮ ಸಾಮಾನ್ಯ ಕೋಣೆಯ ಉಷ್ಣಾಂಶದ ಮೇಲೆ ಅವಲಂಬಿಸಿದ ನೀರನ್ನು ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಎಂದು ಡಾ. ರಾಧಾಮೋನಿ ಹೇಳುತ್ತಾರೆ.

ಇದನ್ನೂ ಓದಿ: ನೀವು ಸಸ್ಯಾಹಾರಿಗಳೇ? ಮಾಂಸಕ್ಕೆ ಸಮಾನವಾದ ಪ್ರೋಟೀನ್ ಭರಿತ ಆಹಾರ ಮೂಲಗಳು ಇಲ್ಲಿವೆ

ಕೆಳಗಿನ ಸಂದರ್ಭಗಳಲ್ಲಿ ಸಾಮಾನ್ಯ ಕೋಣೆಯ ಉಷ್ಣಾಂಶದ ನೀರನ್ನು ಕುಡಿಯಿರಿ:

  • ಮಧ್ಯಪಾನ ಮಾಡಿದ ನಂತರ
  • ನೀವು ದಣಿದಿದ್ದರೆ ಅಥವಾ ತಲೆ ತಿರುಗುವಿಕೆ ಉಂಟಾದಾಗ
  • ತುಂಬಾ ಬಾಯಾರಿಕೆಯಾದಾಗ
  • ಬಿಸಿಲಿನಲ್ಲಿ ಹೊರಗೆ ಹೋಗಿ ಬಂದರೆ
  • ನೀವು ರಕ್ತಸ್ರಾವದ ಅಸ್ವಸ್ಥತೆಯನ್ನು ಹೊಂದಿದ್ದರೆ
  • ಫುಡ್ ಪಾಯಿಸನ್ ಆದಾಗ

ಬೆಚ್ಚಗಿನ ನೀರು ತನ್ನದೇ ಆದ ಪಾತ್ರವನ್ನು ಹೊಂದಿದೆ ಮತ್ತು ಕೆಲವು ಪರಿಸ್ಥಿತಿಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಆಯುರ್ವೇದದ ಪ್ರಕಾರ ಬೆಚ್ಚಗಿನ ನೀರನ್ನು ಕುಡಿಯುವುದು ಕಫ ದೋಷದ ಲಕ್ಷಣಗಳನ್ನು ನಿವಾರಿಸುತ್ತದೆ ಮತ್ತು ಆಹಾರದ ಕಡು ಬಯಕೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸಲು ಹಾಗೂ ಶೀತ ಮತ್ತು ಕೆಮ್ಮಿನ ಸಂದರ್ಭದಲ್ಲಿ ಪರಿಹಾರವನ್ನು ಒದಗಿಸುತ್ತದೆ.

ಬೆಚ್ಚಗಿನ ನೀರನ್ನು ಕುಡಿಯುವುದು ಯಾವಾಗ ಉತ್ತಮ?

  • ನಿಮಗೆ ಕಡಿಮೆ ಹಸಿವಿದ್ದ ಸಮಯದಲ್ಲಿ
  • ಜೀರ್ಣಕ್ರಿಯೆಯಲ್ಲಿ ಸಮಸ್ಯೆ ಉಂಟಾದಾಗ
  • ಗಂಟಲು ನೋವು ಲಕ್ಷಣ ಕಂಡು ಬಂದಾಗ
  • ಶೀತ, ಜ್ವರ, ಕೆಮ್ಮು ಇದ್ದಾಗ
  • ಆಸಿಡಿಟಿ  ಉಂಟಾದ ಸಮಯದಲ್ಲಿ

ಇಂತಹ ಸಂದರ್ಭಗಳಲ್ಲಿ ಬಿಸಿ ನೀರನ್ನು ಕುಡಿಯಬೇಕು ಎಂದು ಡಾ. ರೇಖಾ ರಾಧಾಮೋನಿ ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 5:09 pm, Sun, 22 January 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?