AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duologue NXT: ಮಹಿಳಾ ಸಾಧಕಿಯರ ಸ್ಪೂರ್ತಿದಾಯಕ ಕಥೆಗಳ ಅನ್ವೇಷಣೆ

ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಅವರು "ಡ್ಯುಯೊಲಾಗ್ ವಿತ್ ಬರುಣ್ ದಾಸ್" ನ ಹೊಸ ಆವೃತ್ತಿಯನ್ನು "ಡ್ಯುಯೊಲಾಗ್ NXT" ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆ ಮಾಡಿದ್ದಾರೆ. ಈ ಕಾರ್ಯಕ್ರಮವು ಯಶಸ್ವಿ ಮಹಿಳೆಯರ ಸ್ಪೂರ್ತಿದಾಯಕ ಕಥೆಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ಅವರು ಹೇಳಿದ್ದಾರೆ.

Duologue NXT: ಮಹಿಳಾ ಸಾಧಕಿಯರ ಸ್ಪೂರ್ತಿದಾಯಕ ಕಥೆಗಳ ಅನ್ವೇಷಣೆ
ಡ್ಯುಯೊಲಾಗ್ NXT
ಮಾಲಾಶ್ರೀ ಅಂಚನ್​
|

Updated on:Sep 23, 2025 | 1:53 PM

Share

ದೇಶದ ಅತಿದೊಡ್ಡ ಸುದ್ದಿ ಜಾಲವಾದ TV9 ನ MD ಮತ್ತು CEO ಬರುಣ್ ದಾಸ್  ‘ಡ್ಯುಯೊಲಾಗ್ ವಿತ್ ಬರುನ್ ದಾಸ್’ ಟಾಕ್ ಶೋ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಈಗಾಗಲೇ “ಡ್ಯುಯೊಲಾಗ್ NXT” (Duologue NXT) ಎಂಬ ಶೀರ್ಷಿಕೆಯೊಂದಿಗೆ ಡ್ಯುಯೊಲಾಗ್ ವಿತ್ ಬರುಣ್ ದಾಸ್ ಕಾರ್ಯಕ್ರಮದ ಹೊಸ ಆವೃತ್ತಿ ಬಿಡುಗಡೆಯಾಗಿದ್ದು, ಈ ಹೊಸ ಆವೃತ್ತಿಯು ಯಶಸ್ವಿ ಮಹಿಳೆಯರ ಸ್ಪೂರ್ತಿದಾಯಕ ಕಥೆಗಳ ಮೇಲೆ ಕೇಂದ್ರೀಕರಿಸುತ್ತದೆ. ಈ ಕಾರ್ಯಕ್ರಮವು ತಮ್ಮ ತಮ್ಮ  ಕ್ಷೇತ್ರಗಳಲ್ಲಿ ಬದಲಾವಣೆಯನ್ನು ತಂದ ಮಹಿಳೆಯರ ಹೋರಾಟಗಳು ಮತ್ತು ಸಾಧನೆಗಳನ್ನು ಪ್ರದರ್ಶಿಸಲಿದೆ ಎಂದು ಬರುಣ್ ದಾಸ್ ಹೇಳಿದ್ದಾರೆ.

ಡ್ಯುಯೊಲಾಗ್ ವಿತ್ ಬರುನ್ ದಾಸ್:

‘ಡ್ಯುಲೋಗ್ ವಿತ್ ಬರುನ್ ದಾಸ್’ ಶೋ ನ ಈ  ಮೂರನೇ ಸೀಸನ್‌ನಲ್ಲಿ ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರು ಡ್ಯುಲೋಗ್ NXT ಕಾರ್ಯಕ್ರಮದ ಮೂಲಕ ಅನೇಕ ಯಶಸ್ವಿ ಮಹಿಳೆಯರು ಹಾಗೂ ಸಾಧಕಿಯರ ಹೋರಾಟ ಮತ್ತು ಸ್ಫೂರ್ತಿದಾಯಕ ಕಥೆಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ಒಟ್ಟಾರೆ ಈ ಕಾರ್ಯಕ್ರಮವು ಮಹಿಳೆಯರು ನೇತೃತ್ವದ ಅಭಿವೃದ್ಧಿ ಕಥೆಗಳ ಮೇಲೆ ಕೇಂದ್ರೀಕರಿಸುತ್ತದೆ. ಯಶಸ್ವಿ ಮಹಿಳೆಯರ ಕಥೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.

ಡ್ಯುಯೊಲಾಗ್ NXT  ಪಾಡ್‌ಕ್ಯಾಸ್ಟ್ ಸರಣಿಯಾಗಿದ್ದು, ಇದು ಯಶಸ್ವಿ ಮಹಿಳೆಯರ  ಕಥೆಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು SHEconomy ಚಳುವಳಿಯನ್ನು ಪ್ರದರ್ಶಿಸಲಿದೆ, ಇದರ ಅರ್ಥ “ಮಹಿಳಾ ನೇತೃತ್ವದ ಆರ್ಥಿಕತೆ”. ಗಮನಾರ್ಹ ಮತ್ತು ಅಭೂತಪೂರ್ವ ಬದಲಾವಣೆಯನ್ನು ತರಲು ಶ್ರಮಿಸಿರುವ ಯಶಸ್ವಿ ಮಹಿಳೆಯರ ಕಥೆಗಳನ್ನ ಪ್ರೇಕ್ಷಕರ ಮುಂದೆ ತರುವ ಗುರಿಯನ್ನು ಈ ಕಾರ್ಯಕ್ರಮ  ಹೊಂದಿದೆ. ಈ ಕಾರ್ಯಕ್ರಮದಲ್ಲಿ ಸಂಭಾಷಣೆ ತಮಾಷೆಯ ವಾತಾವರಣದಲ್ಲಿದೆ. ಇದರಿಂದ ಸಾಧಕಿಯರು ಕೂಡ ತಮ್ಮ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದು.ಈ ಸರಣಿ ಕಾರ್ಯಕ್ರಮ ತಮ್ಮ ಸುತ್ತಲಿನ ಪ್ರಪಂಚವನ್ನು ಉತ್ತಮಗೊಳಿಸಲು ಪ್ರಯತ್ನಿಸುತ್ತಿರುವ, ಶ್ರಮಿಸುತ್ತಿರುವ ಮಹಿಳೆಯರ ಪ್ರಯಾಣವನ್ನು ಚಿತ್ರಿಸಲಿದೆ.

ಇದನ್ನೂ ಓದಿ: ವಿವಾಹಿತ ಪುರುಷರು ಕೆಲಸಗಳನ್ನು ಎಂದಿಗೂ ಮಾಡಬಾರದು ಎನ್ನುತ್ತಾರೆ ಚಾಣಕ್ಯ

ಡ್ಯುಯೊಲಾಗ್ NXT ಕೇವಲ ಸಂಭಾಷಣೆಗಿಂತ ಹೆಚ್ಚಿನದು – ಬರುಣ್ ದಾಸ್:

ಈ ಕಾರ್ಯಕ್ರಮದ ಕುರಿತು ಮಾತನಾಡಿದ ಟಿವಿ9 ನೆಟ್‌ವರ್ಕ್ಸ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್, “ಮಹಿಳೆಯರು ಬದಲಾವಣೆಗಳ ಮುಂಚೂಣಿಯಲ್ಲಿರಬೇಕು. ನನ್ನ ಈ ಪ್ರಯಾಣದುದ್ದಕ್ಕೂ, ಪ್ರಪಂಚದೊಂದಿಗೆ ಹಂಚಿಕೊಳ್ಳಲು ಅರ್ಹರಾದ ಗಮನಾರ್ಹ ಮಹಿಳಾ ಸಾಧಕರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಗಲಿದೆ. ಅವರ ಸ್ಫೂರ್ತಿದಾಯಕ ಮಾತುಗಳ ಮೂಲಕ, ಲಕ್ಷಾಂತರ ಮಹಿಳೆಯರನ್ನು ಮಾತ್ರವಲ್ಲದೆ ಪುರುಷರನ್ನೂ ಸಹ ಎಲ್ಲಾ ಅಡೆತಡೆಗಳನ್ನು ಮೀರಿ ಸಾಧನೆಯ ಶಿಖರವನ್ನೇರಲು ಪ್ರೇರೇಪಿಸುವ ಗುರಿಯನ್ನು ನಾವು ಹೊಂದಿದ್ದೇವೆ. ‘ಡ್ಯುಲೊಗ್ ಎನ್‌ಎಕ್ಸ್‌ಟಿ’ ಒಂದು ಸಂಭಾಷಣೆಗಿಂತ ಹೆಚ್ಚಿನದಾಗಿದೆ; ಇದು ಮಹಿಳೆಯರ ನೇತೃತ್ವದ ಅಭಿವೃದ್ಧಿಯನ್ನು ಮುನ್ನಡೆಸುವ ಒಂದು ಚಳುವಳಿಯಾಗಿದೆ ಮತ್ತು ಈ ಪರಿವರ್ತನಾಶೀಲ ಉಪಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ನನಗೆ ಹೆಮ್ಮೆಯಿದೆ” ಎಂದು ಹೇಳಿದರು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Tue, 23 September 25

Follow Us
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ