AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duologue NXT: ಬಯಸಿದ ಗುರಿ ಸಾಧಿಸಲು ಕಠಿಣ ಪರಿಶ್ರಮ ಅತ್ಯಗತ್ಯ; ಜಾಗತಿಕ ತಾರೆ ರೋನಾ-ಲೀ ಶಿಮೊನ್

'ಡ್ಯುಯೊಲಾಗ್ ವಿತ್ ಬರುಣ್ ದಾಸ್' ಮೂರು ಸೀಸನ್‌ಗಳು ಭಾರಿ ಯಶಸ್ಸನ್ನು ಕಂಡಿದ್ದವು. ಇದೀಗ ಡ್ಯುಯೊಲಾಗ್ NXT ಎಂಬ ಹೊಸ ಆವೃತ್ತಿ ಆರಂಭವಾಗಿದ್ದು, ಇದರ ಮೊದಲ ಕಂತಿನಲ್ಲಿ ಭಾಗವಹಿಸಿದ ಜಾಗತಿಕ ತಾರೆ ರೋನಾ-ಲೀ ಶಿಮೊನ್ ಸಾಧನೆಯ ಶಿಖರವನ್ನೇರುವಾಗ ಎದುರಾದ ಅಡೆತಡೆಗಳು, ತಮ್ಮ ಏಳುಬೀಳುಗಳ ಕಥೆಯ ಬಗ್ಗೆ ಟಿವಿ9 ನೆಟ್‌ವರ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

Duologue NXT: ಬಯಸಿದ ಗುರಿ ಸಾಧಿಸಲು ಕಠಿಣ ಪರಿಶ್ರಮ ಅತ್ಯಗತ್ಯ; ಜಾಗತಿಕ ತಾರೆ ರೋನಾ-ಲೀ ಶಿಮೊನ್
ಡ್ಯುಯೊಲಾಗ್ NXT
ಮಾಲಾಶ್ರೀ ಅಂಚನ್​
| Edited By: |

Updated on:Sep 24, 2025 | 5:25 PM

Share

‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ ಸರಣಿಯ ಹೊಸ ಆವೃತ್ತಿಯಾಗಿರುವಂತಹ ಡ್ಯುಯೊಲಾಗ್ NXT (Duologue NXT) ಎಂಬ ಹೊಸ ಕಾರ್ಯಕ್ರಮ ಈಗಾಗಲೇ ಚಾಲನೆ ಸಿಕ್ಕಿದೆ. ಇದೊಂದು ಯಶಸ್ವಿ ಮಹಿಳೆಯರ ಸ್ಪೂರ್ತಿದಾಯಕ ಕಥೆಗಳ ಬಗೆಗಿನ ಪಾಡ್‌ಕ್ಯಾಸ್ಟ್ ಕಾರ್ಯಕ್ರಮವಾಗಿದ್ದು, ಈ ಶೋನ ಮೊದಲ ಅತಿಥಿಯಾಗಿ ಜಾಗತಿಕ ತಾರೆ ರೋನಾ-ಲೀ ಶಿಮೊನ್ ಭಾಗವಹಿಸಿದ್ದರು. ಜೊತೆಗೆ ಶಿಖರವನ್ನೇರುವಾಗ ಎದುರಾದ ಅಡೆತಡೆಗಳು, ತಮ್ಮ ಏಳುಬೀಳುಗಳ ಕಥೆ ಹಾಗೂ ಸಾಧಿಸಲು ನಾವು ಏನು ಮಾಡಬೇಕು ಎಂಬ ಒಂದಷ್ಟು ಟಿಪ್ಸ್‌ಗಳನ್ನು ಟಿವಿ9 ನೆಟ್‌ವರ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುಂದುವರಿಯಲು ಸಾಧ್ಯ:

ಡ್ಯುಯೊಲಾಗ್ NXT ಪ್ರಾರಂಭವಾಗಿದ್ದು, ಈ ಕಾರ್ಯಕ್ರಮದ ಮೊದಲ ಅತಿಥಿಯಾಗಿ ಖ್ಯಾತ ಅಂತರರಾಷ್ಟ್ರೀಯ ನಟಿ ರೋನಾ-ಲೀ ಶಿಮೊನ್ ಭಾಗವಹಿಸಿ ತಮ್ಮ ಜೀವನದಲ್ಲಿ ಎದುರಾದಂತಹ ಸವಾಲುಗಳು, ತಮ್ಮ ಗುರಿಗಳ ಸಾಧನೆಗಳ ಪ್ರಯತ್ನಗಳ ಸ್ಪೂರ್ತಿದಾಯಕ ಕಥೆಗಳ ಬಗ್ಗೆ ಬರುಣ್ ದಾಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

ಬರುಣ್ ದಾಸ್ ಅವರೊಂದಿಗೆ ಮನಬಿಚ್ಚಿ ಮಾತನಾಡಿದ ಶಿಮೊನ್‌, ನಮ್ಮ ಪ್ರಯಾಣದಲ್ಲಿ ಏರಿಳಿತಗಳೆನ್ನುವಂತಹದ್ದು ಇದ್ದೇ ಇರುತ್ತದೆ. ಹೀಗೆ ಏನೇ ಕಷ್ಟ ಎದುರಾದರೂ ಪರಿಶ್ರಮದಿಂದ ನಾವು ಗುರಿಯ ಕಡೆಗೆ ಮುನ್ನುಗ್ಗಬೇಕು ಎಂದು ಹೇಳಿದರು. ತಮ್ಮ ಸಾಧನೆಗಳ ಬಗ್ಗೆ ಮಾತನಾಡುತ್ತಾ ‘ಸೋ ಯು ಥಿಂಕ್ ಯು ಕ್ಯಾನ್ ಡ್ಯಾನ್ಸ್’ ಕಾರ್ಯಕ್ರಮದಲ್ಲಿ ಐದನೇ ಸ್ಥಾನ ಪಡೆದರೂ, ಆ ಶೋ ನಡೆದ ಮರು ದಿನವೇ ಸಿನಿಮಾದಲ್ಲಿ ನಟಿಸುವ ಅವಕಾಶ ನನಗೆ ಸಿಕ್ಕಿತು. ವೈಫಲ್ಯದ ಹಿಂದೆಯೂ ಅವಕಾಶಗಳು ಇದ್ದೇ ಇರುತ್ತವೆ. ನೀವು ಕಷ್ಟಪಟ್ಟು ಪ್ರಯತ್ನಿಸಿದರೆ, ಯಾವುದೇ ಪರಿಸ್ಥಿತಿಯಲ್ಲಿ ನೀವು ಯಶಸ್ಸನ್ನು ಸಾಧಿಸಬಹುದು ಎಂದು ಅವರು ಹೇಳಿದರು.

ವಿಡಿಯೋ ಇಲ್ಲಿದೆ ನೋಡಿ:

ಜೀವನದಲ್ಲಿ ಸರಿಯಾದ ನಿರ್ಧಾರ ಎಂಬುದಿಲ್ಲ. ನೀವು ಯಾವುದಾದರೂ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ನಿರ್ಧಾರ ಮಾತ್ರ ಸರಿಯಾಗಿರಬೇಕು. ನೀವು ಕಷ್ಟಪಟ್ಟು ಕೆಲಸ ಮಾಡಿದರೆ, ನಿಮ್ಮ ಗುರಿಯ ಮೇಲೆ ನಂಬಿಕೆ ಇಟ್ಟರೆ ಮತ್ತು ಸಾಧನೆಯ ಹಾದಿಯಲ್ಲಿ ಸರಿಯಾದ ಮಾರ್ಗವನ್ನು ಅನುಸರಿಸಿದರೆ ಮಾತ್ರ ನಿಮ್ಮ ಕನಸುಗಳು ನನಸಾಗುತ್ತವೆ ಎಂದು ಶಿಮೊನ್ ಕಾರ್ಯಕ್ರಮದಲ್ಲಿ ಹೇಳಿದರು.

ನೀವು ನಿಜವಾಗಿಯೂ ಬಯಸುವ ಗುರಿಯನ್ನು ಸಾಧಿಸಬೇಕೆಂದರೆ ಯಾವಾಗಲೂ ಕಷ್ಟಪಟ್ಟು ಕೆಲಸ ಮಾಡಿ. ಅತಿ ಮುಖ್ಯವಾಗಿ ನೀವು ನಿಮ್ಮ ಮೇಲೆ ನಂಬಿಕೆ ಇಡಬೇಕು ಮತ್ತು ಇದು ನನ್ನಿಂದ ಸಾಧ್ಯವಿಲ್ಲ ಎಂಬ ಋಣಾತ್ಮಕ ಚಿಂತನೆಗಳಿಂದ ಸಾಧ್ಯವಾದಷ್ಟು ನೀವು ದೂರವಿರಬೇಕು ಎಂಬ ಸಲಹೆಯನ್ನು ನೀಡಿದ್ದಾರೆ.

Duologue NXT ನ ಈ ಕಾರ್ಯಕ್ರಮವು ಒಂದು ಸ್ಪೂರ್ತಿದಾಯಕ ಕಥೆಗಳ ಆವೃತ್ತಿಯಾಗಿದ್ದು, ಇದು ಸಾಧಕಿಯರನ್ನು ಗುರುತಿಸಿ ಗೌರವಿಸುವುದು ಮಾತ್ರವಲ್ಲದೆ, ಅನೇಕ ಮಹಿಳೆಯರಿಗೆ ಸ್ಪೂರ್ತಿ, ಪ್ರೇರಣೆಯಾಗಲಿದೆ. ಡ್ಯುಯೊಲಾಗ್ NXT ನ ಈ ಕಾರ್ಯಕ್ರಮವನ್ನು ನೀವು Duologue ಯುಟ್ಯೂಬ್ ಚಾನೆಲ್ (@Duologuewithbarundas) ಮತ್ತು News9 Plus ಅಪ್ಲಿಕೇಶನ್‌ನಲ್ಲಿಯೂ ಸ್ಟ್ರೀಮ್ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 24 September 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ