AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Stem Chat : ಸಂಜೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ಸ್, ಇಲ್ಲಿದೆ ರೆಸಿಪಿ

ಸುರಿಯುವ ಮಳೆ ಚಾಟ್ಸ್ ಏನಾದರೂ ತಿನ್ನಬೇಕು ಅನಿಸುವುದು ಸಹಜ. ಈಗಾಗಲೇ ವಿವಿಧ ಬಗೆಯ ಚಾಟ್ಸ್ ಗಳು ಲಭ್ಯವಿದ್ದು, ಆದರೆ ಬಾಳೆದಿಂಡಿನ ಚಾಟ್ ಮನೆಯಲ್ಲೇ ಮಾಡಬಹುದು. ಇದು ಆರೋಗ್ಯಕ್ಕೂ ಹಿತಕರ ಮಾತ್ರವಲ್ಲದೆ, ಬಾಯಿಗೂ ರುಚಿಕರ. ಈ ಕೆಲವು ಐಟಂ ಗಳಿದ್ದರೆ ಸಾಕು, ಮನೆಯಲ್ಲೇ ಆರೋಗ್ಯಕರವಾದ ಬಾಳೆದಿಂಡಿನ ಈ ಡಿಫರೆಂಟ್ ಚಾಟ್ಸ್ ಮಾಡಿ ಸವಿಯಬಹುದು.

Banana Stem Chat : ಸಂಜೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ಸ್, ಇಲ್ಲಿದೆ ರೆಸಿಪಿ
ಬಾಳೆದಿಂಡಿನ ಚಾಟ್ಸ್
TV9 Web
| Edited By: |

Updated on: Jul 09, 2024 | 5:00 PM

Share

ಬಾಳೆಹಣ್ಣು ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ, ಬಾಳೆ ಗಿಡದ ಪ್ರತಿಯೊಂದು ಭಾಗವು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಅದರಲ್ಲಿಯೂ ಈ ಬಾಳೆ ದಿಂಡಿನ ಪ್ರಯೋಜನವನ್ನು ತಿಳಿದವರೇ ಬಲ್ಲರು. ಕಲ್ಲನ್ನು ಕರಗಿಸುವ ಶಕ್ತಿಯಿರುವ ಈ ಬಾಳೆದಿಂಡನ್ನು ನಮ್ಮ ಹಿರಿಯರು ಅನೇಕ ರೋಗಗಳಿಗೆ ಮನೆ ಮದ್ದಾಗಿ ಬಳಸುತ್ತಿದ್ದರು. ಇದರಲ್ಲಿ ನಾರಿನಂಶ ಅಧಿಕವಾಗಿದ್ದು, ಪೊಟ್ಯಾಸಿಯಮ್, ಮೆಗ್ನೀಸಿಯಮ್, ತಾಮ್ರದ ಕಬ್ಬಿಣದಂತಹ ಇತರ ಖನಿಜಗಳನ್ನು ಮತ್ತು ವಿಟಮಿನ್ ಸಿ ಮತ್ತು ಬಿ 6 ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ.

ರೋಗವನ್ನು ಗುಣ ಪಡಿಸುವ ಈ ಬಾಳೆದಿಂಡಿನಲ್ಲಿ ಮೊಸರು ಬಜ್ಜಿ, ಕೋಸಂಬರಿ, ಪಲ್ಯ ಮುಂತಾದ ಅಡುಗೆಗಳನ್ನು ಮಾಡಿ ಸವಿದರೂ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹೀಗಾಗಿ ಈ ಕೆಲವು ಐಟಂಗಳಿದ್ದರೆ ಸಾಕು, ಮನೆಯಲ್ಲೇ ಸುಲಭವಾಗಿ ರುಚಿಕರವಾದ ಬಾಳೆದಿಂಡಿನ ಚಾಟ್ ಮಾಡಿ ಸವಿದರೆ ನಾಲಿಗೆಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಬಲು ಪ್ರಯೋಜನಕಾರಿ.

ಬಾಳೆದಿಂಡಿನ ಚಾಟ್ ಮಾಡಲು ಬೇಕಾಗುವ ಪದಾರ್ಥಗಳು

ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಅಚ್ಚಖಾರದಪುಡಿ, ಚಾಟ್‌ ಮಸಾಲ, ಸೇವ್‌, ಕ್ಯಾರೆಟ್‌ ತುರಿ, ನಿಂಬೆರಸ ಹಾಗೂ ರುಚಿಗೆ ತಕ್ಕಷ್ಟು ಉಪ್ಪು.

ಇದನ್ನೂ ಓದಿ: ಇದು ಕರಾವಳಿ ಸ್ಟೈಲ್​​ನ ಪತ್ರೊಡೆ, ಇದನ್ನು ಮಾಡುವುದು ತುಂಬಾ ಸುಲಭ

ಬಾಳೆದಿಂಡಿನ ಚಾಟ್ ಮಾಡುವ ವಿಧಾನ

* ಸಣ್ಣಗೆ ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪನ್ನು ಕತ್ತರಿಸಿಟ್ಟುಕೊಳ್ಳಬೇಕು.

* ಈಗಾಗಲೇ ಈ ಕತ್ತರಿಸಿಟ್ಟ ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪಿಗೆ ಗರಂ ಮಸಾಲ, ಅಚ್ಚಖಾರದಪುಡಿ, ಚಾಟ್‌ ಮಸಾಲ, ಕ್ಯಾರೆಟ್‌ ತುರಿ, ಸೇವ್‌, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.

* ಆ ಬಳಿಕ ಇದರ ಮೇಲೆ ನಿಂಬೆ ರಸವನ್ನು ಹಿಂಡಿದರೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು