Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Stem Chat : ಸಂಜೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ಸ್, ಇಲ್ಲಿದೆ ರೆಸಿಪಿ

ಸುರಿಯುವ ಮಳೆ ಚಾಟ್ಸ್ ಏನಾದರೂ ತಿನ್ನಬೇಕು ಅನಿಸುವುದು ಸಹಜ. ಈಗಾಗಲೇ ವಿವಿಧ ಬಗೆಯ ಚಾಟ್ಸ್ ಗಳು ಲಭ್ಯವಿದ್ದು, ಆದರೆ ಬಾಳೆದಿಂಡಿನ ಚಾಟ್ ಮನೆಯಲ್ಲೇ ಮಾಡಬಹುದು. ಇದು ಆರೋಗ್ಯಕ್ಕೂ ಹಿತಕರ ಮಾತ್ರವಲ್ಲದೆ, ಬಾಯಿಗೂ ರುಚಿಕರ. ಈ ಕೆಲವು ಐಟಂ ಗಳಿದ್ದರೆ ಸಾಕು, ಮನೆಯಲ್ಲೇ ಆರೋಗ್ಯಕರವಾದ ಬಾಳೆದಿಂಡಿನ ಈ ಡಿಫರೆಂಟ್ ಚಾಟ್ಸ್ ಮಾಡಿ ಸವಿಯಬಹುದು.

Banana Stem Chat : ಸಂಜೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ಸ್, ಇಲ್ಲಿದೆ ರೆಸಿಪಿ
ಬಾಳೆದಿಂಡಿನ ಚಾಟ್ಸ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 09, 2024 | 5:00 PM

ಬಾಳೆಹಣ್ಣು ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ, ಬಾಳೆ ಗಿಡದ ಪ್ರತಿಯೊಂದು ಭಾಗವು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಅದರಲ್ಲಿಯೂ ಈ ಬಾಳೆ ದಿಂಡಿನ ಪ್ರಯೋಜನವನ್ನು ತಿಳಿದವರೇ ಬಲ್ಲರು. ಕಲ್ಲನ್ನು ಕರಗಿಸುವ ಶಕ್ತಿಯಿರುವ ಈ ಬಾಳೆದಿಂಡನ್ನು ನಮ್ಮ ಹಿರಿಯರು ಅನೇಕ ರೋಗಗಳಿಗೆ ಮನೆ ಮದ್ದಾಗಿ ಬಳಸುತ್ತಿದ್ದರು. ಇದರಲ್ಲಿ ನಾರಿನಂಶ ಅಧಿಕವಾಗಿದ್ದು, ಪೊಟ್ಯಾಸಿಯಮ್, ಮೆಗ್ನೀಸಿಯಮ್, ತಾಮ್ರದ ಕಬ್ಬಿಣದಂತಹ ಇತರ ಖನಿಜಗಳನ್ನು ಮತ್ತು ವಿಟಮಿನ್ ಸಿ ಮತ್ತು ಬಿ 6 ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ.

ರೋಗವನ್ನು ಗುಣ ಪಡಿಸುವ ಈ ಬಾಳೆದಿಂಡಿನಲ್ಲಿ ಮೊಸರು ಬಜ್ಜಿ, ಕೋಸಂಬರಿ, ಪಲ್ಯ ಮುಂತಾದ ಅಡುಗೆಗಳನ್ನು ಮಾಡಿ ಸವಿದರೂ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹೀಗಾಗಿ ಈ ಕೆಲವು ಐಟಂಗಳಿದ್ದರೆ ಸಾಕು, ಮನೆಯಲ್ಲೇ ಸುಲಭವಾಗಿ ರುಚಿಕರವಾದ ಬಾಳೆದಿಂಡಿನ ಚಾಟ್ ಮಾಡಿ ಸವಿದರೆ ನಾಲಿಗೆಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಬಲು ಪ್ರಯೋಜನಕಾರಿ.

ಬಾಳೆದಿಂಡಿನ ಚಾಟ್ ಮಾಡಲು ಬೇಕಾಗುವ ಪದಾರ್ಥಗಳು

ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಅಚ್ಚಖಾರದಪುಡಿ, ಚಾಟ್‌ ಮಸಾಲ, ಸೇವ್‌, ಕ್ಯಾರೆಟ್‌ ತುರಿ, ನಿಂಬೆರಸ ಹಾಗೂ ರುಚಿಗೆ ತಕ್ಕಷ್ಟು ಉಪ್ಪು.

ಇದನ್ನೂ ಓದಿ: ಇದು ಕರಾವಳಿ ಸ್ಟೈಲ್​​ನ ಪತ್ರೊಡೆ, ಇದನ್ನು ಮಾಡುವುದು ತುಂಬಾ ಸುಲಭ

ಬಾಳೆದಿಂಡಿನ ಚಾಟ್ ಮಾಡುವ ವಿಧಾನ

* ಸಣ್ಣಗೆ ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪನ್ನು ಕತ್ತರಿಸಿಟ್ಟುಕೊಳ್ಳಬೇಕು.

* ಈಗಾಗಲೇ ಈ ಕತ್ತರಿಸಿಟ್ಟ ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪಿಗೆ ಗರಂ ಮಸಾಲ, ಅಚ್ಚಖಾರದಪುಡಿ, ಚಾಟ್‌ ಮಸಾಲ, ಕ್ಯಾರೆಟ್‌ ತುರಿ, ಸೇವ್‌, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.

* ಆ ಬಳಿಕ ಇದರ ಮೇಲೆ ನಿಂಬೆ ರಸವನ್ನು ಹಿಂಡಿದರೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !