AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aloo Halwa: ಅತ್ಯಂತ ಸುಲಭವಾಗಿ ಮನೆಯಲ್ಲೇ ರುಚಿಕರ ಆಲೂ ಹಲ್ವಾ ತಯಾರಿಸಿ

ಈ ಆಲೂ ಹಲ್ವಾ ರೆಸಿಪಿ ಕೇವಲ 15-20 ನಿಮಿಷಗಳಲ್ಲಿ ತಯಾರಿಸಬಹುದು. ಸಕ್ಕರೆಯ ಅಂಶಗಳು ನಿಮ್ಮ ದೇಹಕ್ಕೆ ತೊಂದರೆಯನ್ನುಂಟು ಮಾಡಿದರೆ, ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇರಿಸಬಹುದು.

Aloo Halwa: ಅತ್ಯಂತ ಸುಲಭವಾಗಿ ಮನೆಯಲ್ಲೇ ರುಚಿಕರ ಆಲೂ ಹಲ್ವಾ ತಯಾರಿಸಿ
Aloo Halwa RecipeImage Credit source: NDTV FOOD
TV9 Web
| Edited By: |

Updated on:Nov 06, 2022 | 5:25 PM

Share

ಸಿಹಿ ತಿಂಡಿಗಳನ್ನು ಕಂಡಾಕ್ಷಣ ಬಾಯಲ್ಲಿ ನೀರೂರುವುದು ಸಾಮಾನ್ಯ. ಆದ್ದರಿಂದ ನಿಮ್ಮ ಸಿಹಿ ತಿಂಡಿಗಳ ಆಸೆಯನ್ನು ಪೂರೈಸಲು ಮನೆಯಲ್ಲಿಯೇ ಆರೋಗ್ಯಕರ ಸಿಹಿ ತಿಂಡಿಗಳನ್ನು ತಯಾರಿಸಿ.

ಈ ಆಲೂ ಹಲ್ವಾ ರೆಸಿಪಿ ಕೇವಲ 15-20 ನಿಮಿಷಗಳಲ್ಲಿ ತಯಾರಿಸಬಹುದು. ಸಕ್ಕರೆಯ ಅಂಶಗಳು ನಿಮ್ಮ ದೇಹಕ್ಕೆ ತೊಂದರೆಯನ್ನುಂಟು ಮಾಡಿದರೆ, ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇರಿಸಬಹುದು. ಜೊತೆಗೆ ಈ ಹಲ್ವಾವನ್ನು ಕುರುಕಲು ಮಾಡಲು ನಿಮ್ಮ ಆಯ್ಕೆಯ ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ ಮುಂತಾದ ಬೀಜಗಳನ್ನು ಸೇರಿಸಿ. ಇದು ರುಚಿಯ ಜೊತೆಗೆ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಬೇಕಾಗುವ ಸಾಮಾಗ್ರಿಗಳು: 2 ಆಲೂಗಡ್ಡೆ 4 ಚಮಚ ಸಕ್ಕರೆ ಅಥವಾ ಬೆಲ್ಲ 1 ಚಮಚ ಒಣದ್ರಾಕ್ಷಿ 1 ಚಮಚ ಬಾದಾಮಿ 1 ಚಮಚ ತುಪ್ಪ 1/4 ಕಪ್ ಹಾಲು 1 ಚಮಚ ಗೋಡಂಬಿ 1/4 ಚಮಚ ಪುಡಿಮಾಡಿದ ಏಲಕ್ಕಿ

ಮಾಡುವ ವಿಧಾನ: ಹಂತ 1 ಮೊದಲು 2 ಆಲೂಗಡ್ಡೆಯನ್ನು ಬೇಯಿಸಿ. ನಂತರ ಬೆಂದ ಆಲೂಗಡ್ಡೆಯನ್ನು ಸಿಪ್ಪೆ ತೆಗೆದು ನಿಧಾನವಾಗಿ ಮ್ಯಾಶ್ ಮಾಡಿ.

ಹಂತ 2 ಮಧ್ಯಮ ಉರಿಯಲ್ಲಿ ಪ್ಯಾನ್ ಗೆ ತುಪ್ಪ ಹಾಕಿ ಬಿಸಿಯಾಗಲು ಬಿಡಿ. ನಂತರ ಅದರಲ್ಲಿ ಹಿಸುಕಿದ ಆಲೂಗಡ್ಡೆ ಸೇರಿಸಿ ಮತ್ತು ಅವುಗಳನ್ನು 2-3 ನಿಮಿಷ ಬೇಯಲು ಬಿಡಿ.

ಹಂತ 3 ಈಗ ಅದಕ್ಕೆ ಹಾಲು ಮತ್ತು ಸಕ್ಕರೆ ಸೇರಿಸಿ ಹಾಗೂ ಎಲ್ಲವನ್ನೂ ಒಟ್ಟಿಗೆ ನಿಧಾನವಾಗಿ ಮಿಶ್ರಣ ಮಾಡಿ. ಇನ್ನೊಂದು 5 ನಿಮಿಷ ಬೇಯಿಸಲು ಬಿಡಿ.

ಹಂತ 4 ಕೊನೆಯದಾಗಿ ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್ ಹಾಕಿ ಮತ್ತು ನಿಧಾನವಾಗಿ ಮಿಶ್ರಣ ಮಾಡಿ 3-4 ನಿಮಿಷ ಬೇಯಲು ಬಿಡಿ.

ಹಂತ 5 ನಿಮ್ಮ ಆಲೂ ಹಲ್ವಾ ಬಡಿಸಲು ಸಿದ್ಧವಾಗಿದೆ. ಈ ಪಾಕವಿಧಾನವನ್ನು ಪ್ರಯತ್ನಿಸಿ. ಯಾವುದೇ ಕಲಬೆರಕೆ ಇಲ್ಲದೆ ರುಚಿಯಾದ ಹಾಗೂ ಆರೋಗ್ಯಕರವಾದ ಆಲೂ ಹಲ್ವಾವನ್ನು ಕೇವಲ 15-20 ನಿಮಿಷಗಳಲ್ಲಿ ತಯಾರಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 5:24 pm, Sun, 6 November 22

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!