AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aloo Halwa: ಅತ್ಯಂತ ಸುಲಭವಾಗಿ ಮನೆಯಲ್ಲೇ ರುಚಿಕರ ಆಲೂ ಹಲ್ವಾ ತಯಾರಿಸಿ

ಈ ಆಲೂ ಹಲ್ವಾ ರೆಸಿಪಿ ಕೇವಲ 15-20 ನಿಮಿಷಗಳಲ್ಲಿ ತಯಾರಿಸಬಹುದು. ಸಕ್ಕರೆಯ ಅಂಶಗಳು ನಿಮ್ಮ ದೇಹಕ್ಕೆ ತೊಂದರೆಯನ್ನುಂಟು ಮಾಡಿದರೆ, ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇರಿಸಬಹುದು.

Aloo Halwa: ಅತ್ಯಂತ ಸುಲಭವಾಗಿ ಮನೆಯಲ್ಲೇ ರುಚಿಕರ ಆಲೂ ಹಲ್ವಾ ತಯಾರಿಸಿ
Aloo Halwa RecipeImage Credit source: NDTV FOOD
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Nov 06, 2022 | 5:25 PM

ಸಿಹಿ ತಿಂಡಿಗಳನ್ನು ಕಂಡಾಕ್ಷಣ ಬಾಯಲ್ಲಿ ನೀರೂರುವುದು ಸಾಮಾನ್ಯ. ಆದ್ದರಿಂದ ನಿಮ್ಮ ಸಿಹಿ ತಿಂಡಿಗಳ ಆಸೆಯನ್ನು ಪೂರೈಸಲು ಮನೆಯಲ್ಲಿಯೇ ಆರೋಗ್ಯಕರ ಸಿಹಿ ತಿಂಡಿಗಳನ್ನು ತಯಾರಿಸಿ.

ಈ ಆಲೂ ಹಲ್ವಾ ರೆಸಿಪಿ ಕೇವಲ 15-20 ನಿಮಿಷಗಳಲ್ಲಿ ತಯಾರಿಸಬಹುದು. ಸಕ್ಕರೆಯ ಅಂಶಗಳು ನಿಮ್ಮ ದೇಹಕ್ಕೆ ತೊಂದರೆಯನ್ನುಂಟು ಮಾಡಿದರೆ, ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇರಿಸಬಹುದು. ಜೊತೆಗೆ ಈ ಹಲ್ವಾವನ್ನು ಕುರುಕಲು ಮಾಡಲು ನಿಮ್ಮ ಆಯ್ಕೆಯ ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ ಮುಂತಾದ ಬೀಜಗಳನ್ನು ಸೇರಿಸಿ. ಇದು ರುಚಿಯ ಜೊತೆಗೆ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಬೇಕಾಗುವ ಸಾಮಾಗ್ರಿಗಳು: 2 ಆಲೂಗಡ್ಡೆ 4 ಚಮಚ ಸಕ್ಕರೆ ಅಥವಾ ಬೆಲ್ಲ 1 ಚಮಚ ಒಣದ್ರಾಕ್ಷಿ 1 ಚಮಚ ಬಾದಾಮಿ 1 ಚಮಚ ತುಪ್ಪ 1/4 ಕಪ್ ಹಾಲು 1 ಚಮಚ ಗೋಡಂಬಿ 1/4 ಚಮಚ ಪುಡಿಮಾಡಿದ ಏಲಕ್ಕಿ

ಮಾಡುವ ವಿಧಾನ: ಹಂತ 1 ಮೊದಲು 2 ಆಲೂಗಡ್ಡೆಯನ್ನು ಬೇಯಿಸಿ. ನಂತರ ಬೆಂದ ಆಲೂಗಡ್ಡೆಯನ್ನು ಸಿಪ್ಪೆ ತೆಗೆದು ನಿಧಾನವಾಗಿ ಮ್ಯಾಶ್ ಮಾಡಿ.

ಹಂತ 2 ಮಧ್ಯಮ ಉರಿಯಲ್ಲಿ ಪ್ಯಾನ್ ಗೆ ತುಪ್ಪ ಹಾಕಿ ಬಿಸಿಯಾಗಲು ಬಿಡಿ. ನಂತರ ಅದರಲ್ಲಿ ಹಿಸುಕಿದ ಆಲೂಗಡ್ಡೆ ಸೇರಿಸಿ ಮತ್ತು ಅವುಗಳನ್ನು 2-3 ನಿಮಿಷ ಬೇಯಲು ಬಿಡಿ.

ಹಂತ 3 ಈಗ ಅದಕ್ಕೆ ಹಾಲು ಮತ್ತು ಸಕ್ಕರೆ ಸೇರಿಸಿ ಹಾಗೂ ಎಲ್ಲವನ್ನೂ ಒಟ್ಟಿಗೆ ನಿಧಾನವಾಗಿ ಮಿಶ್ರಣ ಮಾಡಿ. ಇನ್ನೊಂದು 5 ನಿಮಿಷ ಬೇಯಿಸಲು ಬಿಡಿ.

ಹಂತ 4 ಕೊನೆಯದಾಗಿ ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್ ಹಾಕಿ ಮತ್ತು ನಿಧಾನವಾಗಿ ಮಿಶ್ರಣ ಮಾಡಿ 3-4 ನಿಮಿಷ ಬೇಯಲು ಬಿಡಿ.

ಹಂತ 5 ನಿಮ್ಮ ಆಲೂ ಹಲ್ವಾ ಬಡಿಸಲು ಸಿದ್ಧವಾಗಿದೆ. ಈ ಪಾಕವಿಧಾನವನ್ನು ಪ್ರಯತ್ನಿಸಿ. ಯಾವುದೇ ಕಲಬೆರಕೆ ಇಲ್ಲದೆ ರುಚಿಯಾದ ಹಾಗೂ ಆರೋಗ್ಯಕರವಾದ ಆಲೂ ಹಲ್ವಾವನ್ನು ಕೇವಲ 15-20 ನಿಮಿಷಗಳಲ್ಲಿ ತಯಾರಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 5:24 pm, Sun, 6 November 22

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್