AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jackfruits Seeds Holige : ಹಲಸಿನ ಬೀಜದ ಹೋಳಿಗೆ ಮಾಡುವುದು ಹೇಗೆ? ಇಲ್ಲಿದೆ ರೆಸಿಪಿ

ಯಾವುದೇ ಹಬ್ಬ ಹರಿದಿನಗಳು ಸಿಹಿ ತಿಂಡಿ ಹಾಗೂ ಹೋಳಿಗೆಯಿಲ್ಲದೇ ಪೂರ್ಣವಾಗುವುದೇ ಇಲ್ಲ. ಕೆಲವರಂತೂ ಬಗೆ ಬಗೆಯ ಹೋಳಿಗೆಯಲ್ಲಿ ಮಾಡಿ ರುಚಿ ಸವಿಯುತ್ತಾರೆ. ಆದರೆ ಆರೋಗ್ಯಕ್ಕೆ ಹಿತಕರವಾದ ಹಲಸಿನ ಬೀಜದಿಂದಲೂ ಹೋಳಿಗೆ ಮಾಡಿ ಸವಿಯಬಹುದು ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹೌದು ಮನೆಯಲ್ಲಿ ಈ ಕೆಲವೇ ಕೆಲವು ಐಟಂಗಳಿದ್ದರೆ ಸಾಕು, ಸ್ವಾದಿಷ್ಟವಾದ ಹಲಸಿನ ಬೀಜದ ಹೋಳಿಗೆ ಸವಿಯಲು ಸಿದ್ಧ. ರೆಸಿಪಿ ಮಾಡುವ ವಿಧಾನದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Jackfruits Seeds Holige : ಹಲಸಿನ ಬೀಜದ ಹೋಳಿಗೆ ಮಾಡುವುದು ಹೇಗೆ? ಇಲ್ಲಿದೆ ರೆಸಿಪಿ
ಹಲಸಿನ ಬೀಜದ ಹೋಳಿಗೆ
ಸಾಯಿನಂದಾ
| Edited By: |

Updated on: Jul 13, 2024 | 2:08 PM

Share

ಹಸಿದು ಹಲಸು ತಿನ್ನು ಎನ್ನುವ ಮಾತಿದೆ. ಹಲಸಿನ ಹಣ್ಣು ಎಂದ ಕೂಡಲೇ ಬಾಯಲ್ಲಿ ನೀರೂರುತ್ತದೆ. ತನ್ನ ಪರಿಮಳದಿಂದಲೇ ಎಲ್ಲರನ್ನು ಆಕರ್ಷಿಸುವ ಈ ಹಣ್ಣು ಮಾತ್ರವಲ್ಲದೇ, ಇದರ ಬೀಜಗಳು ಆರೋಗ್ಯಕ್ಕೆ ಬಲು ಪ್ರಯೋಜನಕಾರಿ. ಈ ಹಣ್ಣಿನಿಂದ ಮಾತ್ರವಲ್ಲ ಇದರ ಬೀಜದಿಂದಲೂ ನಾನಾ ರೀತಿಯ ಖಾದ್ಯಗಳನ್ನು ಮಾಡಿ ಸವಿಯುತ್ತಾರೆ. ಈ ಹಲಸಿನ ಬೀಜವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ವಿವಿಧ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದೆ. ಇದರ ನಿಯಮಿತ ಸೇವನೆಯು ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿದ್ದು, ಮನೆಯಲ್ಲೇ ಹಲಸಿನ ಬೀಜದ ಹೋಳಿಗೆ ಮಾಡಿ ಸವಿಯಬಹುದು.

ಹಲಸಿನ ಬೀಜದ ಹೋಳಿಗೆ ಮಾಡಲು ಬೇಕಾಗುವ ಸಾಮಗ್ರಿಗಳು

* ಒಂದು ಕಪ್ ನಷ್ಟು ಸಿಪ್ಪೆ ತೆಗೆದ ಹಲಸಿನ ಹಣ್ಣಿನ ಬೀಜ, ಬೆಳ್ತಿಗೆ ಅಕ್ಕಿ, ಬೆಲ್ಲ, ತೆಂಗಿನಕಾಯಿ ತುರಿ, ಏಲಕ್ಕಿ ಪುಡಿ, ಅರಿಶಿನ ಪುಡಿ, ತುಪ್ಪ ಹಾಗೂ ರುಚಿಗೆ ತಕ್ಕಷ್ಟು ಉಪ್ಪು.

ಇದನ್ನೂ ಓದಿ: ಮನೆಯ ಸ್ವಚ್ಛತೆಗೂ ಇರಲಿ ಟೈಮ್ ಟೇಬಲ್, ಸ್ವಚ್ಛತೆ ಹೇಗಿರಬೇಕು? ಇಲ್ಲಿದೆ ನೋಡಿ

ಹಲಸಿನ ಬೀಜದ ಹೋಳಿಗೆ ಮಾಡುವ ವಿಧಾನ

  • ಮೊದಲಿಗೆ ಬೆಳ್ತಿಗೆ ಅಕ್ಕಿಯನ್ನು ನೀರಿನಲ್ಲಿ ಮೂರು ಗಂಟೆ ನೆನೆಸಿಟ್ಟು ದೋಸೆ ಹಿಟ್ಟಿನ ಹದಕ್ಕೆ ರುಬ್ಬಿಕೊಳ್ಳಿ.
  • ಹಲಸಿನ ಬೀಜಕ್ಕೆ ಒಂದೂವರೆ ಲೋಟ ನೀರು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಿ.
  • ಬೆಂದ ಬೀಜವನ್ನು ಮಿಕ್ಸಿ ಜಾರಿಗೆ ಹಾಕಿ ಬೆಲ್ಲ, ಉಪ್ಪು, ತೆಂಗಿನಕಾಯಿ ತುರಿ, ಏಲಕ್ಕಿ ಪುಡಿ, ಅರಿಶಿನ ಪುಡಿ ಸೇರಿಸಿ ಗಟ್ಟಿಯಾಗಿ ರುಬ್ಬಿಕೊಳ್ಳಿ,
  • ಆ ಬಳಿಕ ಕೈಗೆ ಎಣ್ಣೆ ಸವರಿಕೊಂಡು ಹಲಸಿನ ಬೀಜದ ಹೂರಣ ಉಂಡೆಗಳನ್ನಾಗಿ ಮಾಡಿಕೊಳ್ಳಿ.
  • ಈಗಾಗಲೇ ಎಣ್ಣೆ ಸವರಿದ ಬಾಳೆ ಎಲೆಯಲ್ಲಿಟ್ಟು ಹಲಸಿನ ಬೀಜದ ಹೂರಣವನ್ನು ಕೈಯಲ್ಲೇ ತೆಳ್ಳಗೆ ತಟ್ಟಿಕೊಳ್ಳಿ.
  • ಇದನ್ನು ರುಬ್ಬಿಟ್ಟ ಅಕ್ಕಿ ಹಿಟ್ಟಿನಲ್ಲಿ ಅದ್ದಿಕೊಂಡು ಕಾದ ಕಾವಲಿನ ಮೇಲೆ ಸ್ವಲ್ಪ ತುಪ್ಪ ಹಾಕಿ ಬೇಯಿಸಿಕೊಂಡರೆ ರುಚಿ ರುಚಿಯಾದ ಹಲಸಿನ ಬೀಜದ ಹೋಳಿಗೆ ಸವಿಯಲು ಸಿದ್ಧವಾಗಿರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ