AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2024 : ಗುರು ಪೂರ್ಣಿಮೆಯಂದು ಗುರುವಿಗೆ ನೀಡಲು ಮನೆಯಲ್ಲೇ ಮಾಡಿ ಹಾಲಿನ ಪುಡಿ ಜಾಮೂನ್, ಇಲ್ಲಿದೆ ರೆಸಿಪಿ

ಗುರುವಿಲ್ಲದ ಬದುಕನ್ನು ಊಹೆ ಮಾಡುವುದು ಕಷ್ಟ. ಒಬ್ಬ ವ್ಯಕ್ತಿಗೆ ಸರಿಯಾದ ಮಾರ್ಗ ದರ್ಶನ ನೀಡಿ ಸನ್ಮಾರ್ಗದಲ್ಲಿ ನಡೆಸುವವರೇ ಈ ಗುರು. ಈ ಜಗತ್ತಿಗೆ ವೇದಗಳ ಜ್ಞಾನವನ್ನು ನೀಡಿದ ಮಹರ್ಷಿ ವ್ಯಾಸರ ಜನ್ಮವಾದದ್ದು ಆಷಾಢ ಮಾಸದ ಪೂರ್ಣಿಮೆಯಂದು ಹಾಗಾಗಿ ಈ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಈ ದಿನವು ಗುರುವಿಗೆ ಗೌರವ ಸಲ್ಲಿಸುವ ದಿನವಾಗಿ ನಿಮ್ಮ ಪ್ರೀತಿಯ ಗುರುವಿಗೆ ನಿಮ್ಮ ಕೈಯಾರೆ ಹಾಲಿನ ಪುಡಿಯ ಜಾಮೂನ್ ಮಾಡಿ ನೀಡಬಹುದು. ಹಾಗಾದ್ರೆ ಈ ರೆಸಿಪಿಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Guru Purnima 2024 : ಗುರು ಪೂರ್ಣಿಮೆಯಂದು ಗುರುವಿಗೆ ನೀಡಲು ಮನೆಯಲ್ಲೇ ಮಾಡಿ ಹಾಲಿನ ಪುಡಿ ಜಾಮೂನ್, ಇಲ್ಲಿದೆ ರೆಸಿಪಿ
Milk powder Jamun Image Credit source: Meta AI
ಸಾಯಿನಂದಾ
| Edited By: |

Updated on: Jul 19, 2024 | 6:04 PM

Share

ಗುರುವಿಲ್ಲದೇ ಅರಿವಿಲ್ಲ ಎಂಬ ಮಾತಿನಂತೆ ಗುರು ಪೂರ್ಣಿಮೆಯಂದು ಶಿಷ್ಯರು ಗುರುವಿಗೆ ಶಕ್ತಿಗೆ ಅನುಸಾರ ಗುರುದಕ್ಷಿಣೆಯನ್ನು ನೀಡಿ, ಗುರುವಿನ ಆಶೀರ್ವಾದವನ್ನು ಪಡೆಯುವುದಾಗಿದೆ. ಈ ಬಾರಿ ಜುಲೈ 21 ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತಿದ್ದು, ಗುರುವಿಗೆ ಏನಾದರೂ ಉಡುಗೊರೆಯನ್ನು ನೀಡಲು ಬಯಸಿದರೆ ನೀವೇ ನಿಮ್ಮ ಕೈಯಾರೆ ಸಿಹಿ ತಿಂಡಿಯನ್ನು ಮಾಡಿ ನೀಡಬಹುದು. ನಿಮ್ಮ ಈ ಪ್ರೀತಿಯನ್ನು ಕಂಡು ಶಿಕ್ಷಕರಿಗೆ ನಿಜಕ್ಕೂ ಖುಷಿಯಾಗುತ್ತದೆ.

ಹಾಲಿನ ಪುಡಿಯ ಜಾಮೂನ್ ಬೇಕಾಗುವ ಸಾಮಗ್ರಿಗಳು:

  • ಹಾಲಿನ ಪುಡಿ – 1/4 ಕೆಜಿ
  • ಬೆಣ್ಣೆ
  • ಬೇಕಿಂಗ್ ಸೋಡಾ
  • ಎರಡು ಚಮಚ ಮೈದಾ ಹಿಟ್ಟು
  • ಒಂದು ಕಪ್ ಹಾಲು
  • ರವೆ

ಪಾಕ ತಯಾರಿಸಲು ಬೇಕಾಗುವ ಸಾಮಗ್ರಿಗಳು:

  • ಎರಡು ಕಪ್ ನಷ್ಟು ಸಕ್ಕರೆ
  • ಏಲಕ್ಕಿ

ಇದನ್ನೂ ಓದಿ: ಶಾಲಾ ಕಾಲೇಜುಗಳಲ್ಲಿ ಗುರು ಪೂರ್ಣಿಮೆಯನ್ನು ವಿಭಿನ್ನ ರೀತಿ ಆಚರಿಸಲು ಇಲ್ಲಿದೆ ಸಲಹೆಗಳು

ಹಾಲಿನ ಪುಡಿ ಜಾಮೂನ್ ಮಾಡುವ ವಿಧಾನ:

  • ಮೊದಲಿಗೆ ಒಂದು ಪಾತ್ರೆಗೆ ಸಕ್ಕರೆ ಸೇರಿಸಿ ಒಂದು ಗ್ಲಾಸ್ ನೀರು, ಏಲಕ್ಕಿ ಹಾಕಿ ಪಾಕವನ್ನು ರೆಡಿಮಾಡಿಕೊಳ್ಳಿ.
  • ಮತ್ತೊಂದೆಡೆ ಒಂದು ಪಾತ್ರೆಗೆ ಹಾಲಿನ ಪುಡಿ, ರವೆ, ಮೈದಾ ಹಿಟ್ಟು, ಬೇಕಿಂಗ್ ಸೋಡಾ, ಬೆಣ್ಣೆ ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ. ಈ ಮಿಶ್ರಣಕ್ಕೆ ಅಗತ್ಯವಿದ್ದಷ್ಟು ಹಾಲು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.
  • ಈ ಮಿಶ್ರಣದಿಂದ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿಕೊಂಡು ಕೂಡಲೇ ಬಿಸಿ ಎಣ್ಣೆಯಲ್ಲಿ ಕಡಿಮೆ ಉರಿಯಲ್ಲಿ ಕಂದು ಬಣ್ಣ ಬರುವರೆಗೂ ಕರಿಯಿರಿ.
  • ಕರಿದ ಈ ಜಾಮೂನುಗಳನ್ನು ಸಕ್ಕರೆ ಪಾಕಕ್ಕೆ ಹಾಕಿ ಮುಚ್ಚಳವನ್ನು ಮುಚ್ಚಿ, ಅರ್ಧ ಗಂಟೆಗಳ ಬಿಟ್ಟರೆ ಹಾಲಿನ ಪುಡಿ ಜಾಮೂನು ಸವಿಯಲು ಸಿದ್ಧ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು