AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಸ್ಪೆಷಲ್ ಜೋಳದ ಖಿಚಿಡಿ, ಆರೋಗ್ಯಕ್ಕೂ ಒಳ್ಳೆಯದು, ಮಾಡೋದು ಹೇಗೆ?

ಉತ್ತರ ಕರ್ನಾಟಕದಲ್ಲಿ ಜೋಳದ ರೊಟ್ಟಿ ಸಿಕ್ಕಾಪಟ್ಟೆ ಫೇಮಸ್. ಅಲ್ಲಿನ ಜನರಿಗೆ ರೊಟ್ಟಿ ತಿನ್ನದೇ ಊಟವು ಪೂರ್ಣವಾಗುವುದೇ ಇಲ್ಲ. ಗಟ್ಟಿಮುಟ್ಟಾದ ಆಹಾರವಾಗಿರುವ ಈ ಜೋಳದ ರೊಟ್ಟಿ ರುಚಿಸುವುದಿಲ್ಲ ಎನ್ನುವವರು ಜೋಳದ ಖಿಚಿಡಿಯನ್ನು ಮನೆಯಲ್ಲಿಯೇ ರುಚಿಕರವಾಗಿ ಮಾಡಬಹುದು. ಹಾಗಾದ್ರೆ ಈ ರೆಸಿಪಿಯನ್ನು ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಉತ್ತರ ಕರ್ನಾಟಕ ಸ್ಪೆಷಲ್ ಜೋಳದ ಖಿಚಿಡಿ, ಆರೋಗ್ಯಕ್ಕೂ ಒಳ್ಳೆಯದು, ಮಾಡೋದು ಹೇಗೆ?
ಸಾಯಿನಂದಾ
| Edited By: |

Updated on: Jul 30, 2024 | 5:58 PM

Share

ಉತ್ತರ ಕರ್ನಾಟಕದ ಜನರ ಪ್ರಮುಖ ಆಹಾರವೇ ಈ ಜೋಳದ ರೊಟ್ಟಿ. ಖಡಕ್ ರೊಟ್ಟಿ ಜೊತೆಗೆ ಚಟ್ನಿ ಪುಡಿ, ಎಣ್ಣೆಯಿದ್ದರೆ ಅದಕ್ಕಿಂತ ಬೆಸ್ಟ್ ಆಹಾರ ಮತ್ತೊಂದಿಲ್ಲ. ಹೀಗಾಗಿ ಅಲ್ಲಿಯವರ ಆರೋಗ್ಯದ ರಹಸ್ಯವೇ ಈ ರೊಟ್ಟಿ ಎನ್ನಬಹುದು. ಆದರೆ ಈ ಜೋಳದಿಂದ ರೊಟ್ಟಿ ಮಾತ್ರವಲ್ಲದೇ ವಿವಿಧ ರೆಸಿಪಿಯನ್ನು ಮಾಡಬಹುದು.ಆರೋಗ್ಯ ವರ್ಧಕವಾಗಿ ಜೋಳದಿಂದ ಉತ್ತರ ಕರ್ನಾಟಕದ ಸ್ಪೆಷಲ್ ಖಿಚಿಡಿ ಮಾಡಿ ಸವಿಯಬಹುದು. ಖಿಚಿಡಿಯೂ ವಿಶೇಷ ತಿನಿಸಾಗಿದ್ದು, ಮಾಡಲು ಸುಲಭವಾಗಿದ್ದು ಬೆಳಗ್ಗಿನ ಉಪಹಾರಕ್ಕೆ ಇದು ಉತ್ತಮ ತಿಂಡಿಯಾಗಿದೆ.

ಜೋಳದ ಖಿಚಡಿ ಮಾಡಲು ಸಾಮಗ್ರಿಗಳು

* ಒಂದು ಕಪ್ ಜೋಳ

* ಕಾಲು ಕಪ್ ಹೆಸರು ಬೇಳೆ

* ಈರುಳ್ಳಿ

* ಕೊತ್ತಂಬರಿ ಸೊಪ್ಪು

* ತೆಂಗಿನ ಕಾಯಿ ತುರಿ

* ರುಚಿಗೆ ತಕ್ಕಷ್ಟು ಉಪ್ಪು

* ನೀರು

ಒಗ್ಗರಣೆಗೆ ಬೇಕಾಗುವ ಸಾಮಗ್ರಿಗಳು

* ಅಡುಗೆ ಎಣ್ಣೆ

* ಸಾಸಿವೆ

* ಉದ್ದಿನ ಬೇಳೆ

* ಕರಿಬೇವು

* ಒಣ ಮೆಣಸಿನ ಕಾಯಿ

* ಇಂಗು

ಇದನ್ನೂ ಓದಿ: ತಲೆ ಕೂದಲಿಗೆ ಎಣ್ಣೆ ಯಾವಾಗ ಹಚ್ಚಬೇಕು? ಸ್ನಾನದ ಮೊದಲು ಅಥವಾ ನಂತರವೋ !?

ಮಾಡುವ ವಿಧಾನ

* ಮೊದಲಿಗೆ ಜೋಳವನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಡಬೇಕು

* ಬೆಳಿಗ್ಗೆ ಕುಕ್ಕರಿನಲ್ಲಿ ಜೋಳವನ್ನು ಐದಾರು ಸೀಟಿ ಕೂಗುವವರೆಗೂ ಬೇಯಿಸಿಕೊಳ್ಳಬೇಕು.

* ಆ ಬಳಿಕ ಹೆಸರು ಬೇಳೆಯನ್ನು ಬಣ್ಣ ಬದಲಾಗುವವರೆಗೂ ಹುರಿದುಕೊಳ್ಳಬೇಕು.

* ಈರುಳ್ಳಿಯನ್ನು ಚಿಕ್ಕ ಚೂರುಗಳಾಗಿ ಕತ್ತರಿಸಿಟ್ಟುಕೊಳ್ಳಬೇಕು.

* ಒಂದು ಪಾತ್ರೆಯಲ್ಲಿ ಎಣ್ಣೆ ಹಾಕಿ, ಒಗ್ಗರಣೆ ಬೇಕಾದ ಮೇಲೆ ಹೇಳಿರುವ ಎಲ್ಲಾ ಪದಾರ್ಥಗಳನ್ನು ಸೇರಿಸಿ ಒಗ್ಗರಣೆ ಮಾಡಿಕೊಳ್ಳಿ.

* ಇದಕ್ಕೆ ಕತ್ತರಿಸಿಟ್ಟ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೂ ಫ್ರೈ ಮಾಡಿಕೊಳ್ಳಿ.

* ನಂತರ ಬೇಯಿಸಿಟ್ಟ ಜೋಳ, ಹುರಿದಿಟ್ಟ ಹೆಸರುಬೇಳೆ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ ನೀರು ಹಾಕಿ ಬೇಯಿಸಿಕೊಳ್ಳಿ.

* ಕೊನೆಗೆ ಇದಕ್ಕೆ ತೆಂಗಿನ ತುರಿ, ಕತ್ತರಿಸಿ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿ ರುಚಿಯಾದ ಜೋಳದ ಖಿಚಿಡಿ ಸವಿಯಲು ಸಿದ್ಧ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ