AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಸ್ಪೆಷಲ್ ಜೋಳದ ಖಿಚಿಡಿ, ಆರೋಗ್ಯಕ್ಕೂ ಒಳ್ಳೆಯದು, ಮಾಡೋದು ಹೇಗೆ?

ಉತ್ತರ ಕರ್ನಾಟಕದಲ್ಲಿ ಜೋಳದ ರೊಟ್ಟಿ ಸಿಕ್ಕಾಪಟ್ಟೆ ಫೇಮಸ್. ಅಲ್ಲಿನ ಜನರಿಗೆ ರೊಟ್ಟಿ ತಿನ್ನದೇ ಊಟವು ಪೂರ್ಣವಾಗುವುದೇ ಇಲ್ಲ. ಗಟ್ಟಿಮುಟ್ಟಾದ ಆಹಾರವಾಗಿರುವ ಈ ಜೋಳದ ರೊಟ್ಟಿ ರುಚಿಸುವುದಿಲ್ಲ ಎನ್ನುವವರು ಜೋಳದ ಖಿಚಿಡಿಯನ್ನು ಮನೆಯಲ್ಲಿಯೇ ರುಚಿಕರವಾಗಿ ಮಾಡಬಹುದು. ಹಾಗಾದ್ರೆ ಈ ರೆಸಿಪಿಯನ್ನು ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಉತ್ತರ ಕರ್ನಾಟಕ ಸ್ಪೆಷಲ್ ಜೋಳದ ಖಿಚಿಡಿ, ಆರೋಗ್ಯಕ್ಕೂ ಒಳ್ಳೆಯದು, ಮಾಡೋದು ಹೇಗೆ?
ಸಾಯಿನಂದಾ
| Edited By: |

Updated on: Jul 30, 2024 | 5:58 PM

Share

ಉತ್ತರ ಕರ್ನಾಟಕದ ಜನರ ಪ್ರಮುಖ ಆಹಾರವೇ ಈ ಜೋಳದ ರೊಟ್ಟಿ. ಖಡಕ್ ರೊಟ್ಟಿ ಜೊತೆಗೆ ಚಟ್ನಿ ಪುಡಿ, ಎಣ್ಣೆಯಿದ್ದರೆ ಅದಕ್ಕಿಂತ ಬೆಸ್ಟ್ ಆಹಾರ ಮತ್ತೊಂದಿಲ್ಲ. ಹೀಗಾಗಿ ಅಲ್ಲಿಯವರ ಆರೋಗ್ಯದ ರಹಸ್ಯವೇ ಈ ರೊಟ್ಟಿ ಎನ್ನಬಹುದು. ಆದರೆ ಈ ಜೋಳದಿಂದ ರೊಟ್ಟಿ ಮಾತ್ರವಲ್ಲದೇ ವಿವಿಧ ರೆಸಿಪಿಯನ್ನು ಮಾಡಬಹುದು.ಆರೋಗ್ಯ ವರ್ಧಕವಾಗಿ ಜೋಳದಿಂದ ಉತ್ತರ ಕರ್ನಾಟಕದ ಸ್ಪೆಷಲ್ ಖಿಚಿಡಿ ಮಾಡಿ ಸವಿಯಬಹುದು. ಖಿಚಿಡಿಯೂ ವಿಶೇಷ ತಿನಿಸಾಗಿದ್ದು, ಮಾಡಲು ಸುಲಭವಾಗಿದ್ದು ಬೆಳಗ್ಗಿನ ಉಪಹಾರಕ್ಕೆ ಇದು ಉತ್ತಮ ತಿಂಡಿಯಾಗಿದೆ.

ಜೋಳದ ಖಿಚಡಿ ಮಾಡಲು ಸಾಮಗ್ರಿಗಳು

* ಒಂದು ಕಪ್ ಜೋಳ

* ಕಾಲು ಕಪ್ ಹೆಸರು ಬೇಳೆ

* ಈರುಳ್ಳಿ

* ಕೊತ್ತಂಬರಿ ಸೊಪ್ಪು

* ತೆಂಗಿನ ಕಾಯಿ ತುರಿ

* ರುಚಿಗೆ ತಕ್ಕಷ್ಟು ಉಪ್ಪು

* ನೀರು

ಒಗ್ಗರಣೆಗೆ ಬೇಕಾಗುವ ಸಾಮಗ್ರಿಗಳು

* ಅಡುಗೆ ಎಣ್ಣೆ

* ಸಾಸಿವೆ

* ಉದ್ದಿನ ಬೇಳೆ

* ಕರಿಬೇವು

* ಒಣ ಮೆಣಸಿನ ಕಾಯಿ

* ಇಂಗು

ಇದನ್ನೂ ಓದಿ: ತಲೆ ಕೂದಲಿಗೆ ಎಣ್ಣೆ ಯಾವಾಗ ಹಚ್ಚಬೇಕು? ಸ್ನಾನದ ಮೊದಲು ಅಥವಾ ನಂತರವೋ !?

ಮಾಡುವ ವಿಧಾನ

* ಮೊದಲಿಗೆ ಜೋಳವನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಡಬೇಕು

* ಬೆಳಿಗ್ಗೆ ಕುಕ್ಕರಿನಲ್ಲಿ ಜೋಳವನ್ನು ಐದಾರು ಸೀಟಿ ಕೂಗುವವರೆಗೂ ಬೇಯಿಸಿಕೊಳ್ಳಬೇಕು.

* ಆ ಬಳಿಕ ಹೆಸರು ಬೇಳೆಯನ್ನು ಬಣ್ಣ ಬದಲಾಗುವವರೆಗೂ ಹುರಿದುಕೊಳ್ಳಬೇಕು.

* ಈರುಳ್ಳಿಯನ್ನು ಚಿಕ್ಕ ಚೂರುಗಳಾಗಿ ಕತ್ತರಿಸಿಟ್ಟುಕೊಳ್ಳಬೇಕು.

* ಒಂದು ಪಾತ್ರೆಯಲ್ಲಿ ಎಣ್ಣೆ ಹಾಕಿ, ಒಗ್ಗರಣೆ ಬೇಕಾದ ಮೇಲೆ ಹೇಳಿರುವ ಎಲ್ಲಾ ಪದಾರ್ಥಗಳನ್ನು ಸೇರಿಸಿ ಒಗ್ಗರಣೆ ಮಾಡಿಕೊಳ್ಳಿ.

* ಇದಕ್ಕೆ ಕತ್ತರಿಸಿಟ್ಟ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೂ ಫ್ರೈ ಮಾಡಿಕೊಳ್ಳಿ.

* ನಂತರ ಬೇಯಿಸಿಟ್ಟ ಜೋಳ, ಹುರಿದಿಟ್ಟ ಹೆಸರುಬೇಳೆ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ ನೀರು ಹಾಕಿ ಬೇಯಿಸಿಕೊಳ್ಳಿ.

* ಕೊನೆಗೆ ಇದಕ್ಕೆ ತೆಂಗಿನ ತುರಿ, ಕತ್ತರಿಸಿ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿ ರುಚಿಯಾದ ಜೋಳದ ಖಿಚಿಡಿ ಸವಿಯಲು ಸಿದ್ಧ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ