AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Flower Recipe : ಆರೋಗ್ಯಕರ ಬಾಳೆಹೂವಿನ ಪಕೋಡ, ಮಾಡೋದು ಸುಲಭ

ಬಾಳೆಗಿಡದ ಪ್ರತಿಯೊಂದು ಭಾಗವು ಪ್ರಯೋಜನಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಬಾಳೆ ಎಲೆ, ಬಾಳೆ ಹಣ್ಣು, ಬಾಳೆ ದಿಂಡು ಸೇರಿದಂತೆ ಬಾಳೆ ಹೂವಿನ ಉಪಯೋಗವನ್ನು ತಿಳಿದವರೇ ಬಲ್ಲರು. ಈ ಬಾಳೆ ಹೂವಿನಿಂದಲೂ ವಿಶೇಷವಾದ ಅಡುಗೆ ಮಾಡಿ ಸವಿಯುತ್ತಾರೆ. ನೀವೇನಾದರೂ ಸಂಜೆಯ ಕಾಫಿ ಟೀ ಜೊತೆಗೆ ಈ ಬಾಳೆ ಹೂವಿನ ಪಕೋಡ ಮಾಡಿ ಸವಿದರೆ ಅದರ ಮಜಾನೇ ಬೇರೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.

Banana Flower Recipe : ಆರೋಗ್ಯಕರ ಬಾಳೆಹೂವಿನ ಪಕೋಡ, ಮಾಡೋದು ಸುಲಭ
ಬಾಳೆಹೂವುImage Credit source: Times Of India
ಸಾಯಿನಂದಾ
| Edited By: |

Updated on:Jul 15, 2024 | 2:04 PM

Share

ಎಲ್ಲರೂ ಕೂಡ ಈ ಬಾಳೆಗೊನೆಯನ್ನು ನೋಡಿರಬಹುದು, ಈ ಗೊನೆಯ ತುದಿಯಲ್ಲಿರುವ ಬಾಳೆ ಹೂವಿನ ಉಪಯೋಗದ ಬಗ್ಗೆ ಬಹುತೇಕರಿಗೆ ತಿಳಿದಿಲ್ಲ. ಈ ಬಾಳೆ ಹೂವು ನೋಡಲು ಎಷ್ಟು ಸುಂದರವೋ, ಇದರಿಂದ ತಯಾರಿಸಿದ ಖಾದ್ಯವು ಅಷ್ಟೇ ರುಚಿಕರವಾಗಿರುತ್ತದೆ. ಇದರಿಂದ ವಿವಿಧ ರುಚಿಕರವಾದ ಆಹಾರವನ್ನು ತಯಾರಿಸಲಾಗುತ್ತದೆ. ಮಳೆಗಾಲದಲ್ಲಿ ಬಿಸಿ ಬಿಸಿ ಬಾಳೆಹೂವಿನ ಪಕೋಡ ಟೀ ಕಾಫಿ ಜೊತೆಗೆ ಸವಿದರೆ ಮನಸ್ಸಿಗೂ ಮಾತ್ರವಲ್ಲದೇ ಆರೋಗ್ಯಕ್ಕೂ ಒಳ್ಳೆಯದು.

ಬಾಳೆ ಹೂವಿನ ಪಕೋಡ ಮಾಡಲು ಬೇಕಾಗುವ ಸಾಮಗ್ರಿಗಳು * ಮೈದಾ ಹಿಟ್ಟು * ಅಕ್ಕಿ ಹಿಟ್ಟು * ಖಾರದ ಪುಡಿ * ಶುಂಠಿ ಬೆಳ್ಳುಳ್ಳಿ ಪೇಸ್ಟ್ * ಗರಂ ಮಸಾಲಾ ಪುಡಿ * ನೀರು * ರುಚಿಗೆ ತಕ್ಕಷ್ಟು ಉಪ್ಪು

ಮತ್ತಷ್ಟು ಓದಿ: Jackfruits Seeds Holige : ಹಲಸಿನ ಬೀಜದ ಹೋಳಿಗೆ ಮಾಡುವುದು ಹೇಗೆ? ಇಲ್ಲಿದೆ ರೆಸಿಪಿ

ಬಾಳೆ ಹೂವಿನ ಪಕೋಡ ಮಾಡುವ ವಿಧಾನ * ಮೊದಲಿಗೆ ಈ ಬಾಳೆ ಹೂವನ್ನು ಬಿಡಿಸುವಾಗ ಅದರಲ್ಲಿರುವ ಉದ್ದದ ಕಡ್ಡಿಯನ್ನು ತಗೆಯಬೇಕು. * ಆ ಬಳಿಕ ಮೈದಾ ಹಿಟ್ಟು, ಸ್ವಲ್ಪ ಅಕ್ಕಿ ಹಿಟ್ಟು, ಖಾರದ ಪುಡಿ,ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲಾ ಪುಡಿ, ನೀರು ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಪಕೋಡ ಹದಕ್ಕೆ ಹಿಟ್ಟನ್ನು ಕಲಸಿಕೊಳ್ಳಬೇಕು. * ಇದಕ್ಕೆ ಈಗಾಗಲೇ ಕಡ್ಡಿ ತೆಗೆದ ಬಾಳೆ ಹೂವನ್ನು ಸೇರಿಸಿಕೊಳ್ಳಬೇಕು. * ಸ್ಟವ್ ಮೇಲೆ ಬಾಣಲೆಯನ್ನಿಟ್ಟು ಎಣ್ಣೆಯನ್ನು ಹಾಕಿ. ಅದು ಚೆನ್ನಾಗಿ ಕಾದ ನಂತರ ಈಗಾಗಲೇ ಸಿದ್ಧವಾಗಿಸಿಕೊಂಡ ಈ ಮಸಾಲೆಯನ್ನು ಕರಿಯಬೇಕು. * ಕಂದು ಬಣ್ಣಕ್ಕೆ ಬರುತ್ತಿದ್ದಂತೆ ಎಣ್ಣೆಯಿಂದ ತೆಗೆದರೆ ಬಾಳೆ ಹೂವಿನ ರುಚಿಯಾದ ಕುರುಕಲು ಪಕೋಡ ಸವಿಯಲು ಸಿದ್ಧ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Mon, 15 July 24

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!