AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ

ರಾತ್ರಿ ಮಲಗುವ ಮುಂಚೆ ನಾಳೆ ಬೆಳಗ್ಗೆ ಏನು ತಿಂಡಿ ಮಾಡೋದು ಎನ್ನುವ ಯೋಚನೆ ಎಲ್ಲಾ ಮಹಿಳೆಯರದ್ದು. ದೋಸೆ ಮಾಡಿದರೆ ಸಾಕಾಗುವುದಿಲ್ಲ, ಅದರ ಜೊತೆಗೆ ಚಟ್ನಿಯೋ ಸಾಂಬಾರೋ ನೆಚ್ಚಿ ಕೊಳ್ಳಲು ಇರಲೇಬೇಕು. ಆದರೆ ಕರಾವಳಿ ಶೈಲಿಯ ಮಸಾಲೆ ನೀರುದೋಸೆ ಮಾಡಿದರೆ ಚಟ್ನಿಯ ಅಗತ್ಯವೇ ಇಲ್ಲ. ಮನೆಯಲ್ಲಿರುವ ಕೆಲವೇ ಕೆಲವು ಐಟಂ ಬಳಸಿ ಮಾಡಬಹುದಾದ ಈ ದೋಸೆಯೂ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ
ಮಸಾಲೆ ನೀರುದೋಸೆ
ಸಾಯಿನಂದಾ
| Edited By: |

Updated on: Aug 17, 2024 | 3:08 PM

Share

ಕರಾವಳಿಯಲ್ಲಿ ಸಖತ್ ಫೇಮಸ್ ತಿಂಡಿ ಎಂದರೆ ನೀರುದೋಸೆ. ಆದರೆ ತೆಳ್ಳನೆಯ ಮಸಾಲೆ ದೋಸೆಯೂ ಕೂಡ ಇಲ್ಲಿ ಫೇಮಸ್. ಒಮ್ಮೆ ತಿಂದರೆ ಮತ್ತೆ ಮತ್ತೆ ತಿನ್ನಬೇಕೆನ್ನುವ ಈ ದೋಸೆಯನ್ನು ಮಸಾಲೆಯನ್ನು ಸೇರಿಸಿ ಮಾಡಬಹುದು. ಸಿಹಿ ಖಾರ ಮಿಶ್ರಿತ ಈ ದೋಸೆ ತೆಳ್ಳಗೆಯಿದ್ದು ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಮನೆಯಲ್ಲಿರುವ ಈ ಕೆಲವು ಕೆಲವು ಐಟಂಗಳಿದ್ದರೆ ಮಸಾಲೆ ನೀರುದೋಸೆ ರೆಡಿಯಾದ್ದಂತೆಯೇ.

ಮಸಾಲೆ ನೀರು ದೋಸೆ ಮಾಡಲು ಬೇಕಾಗುವ ಸಾಮಗ್ರಿಗಳು

* ದೋಸೆ ಅಕ್ಕಿ

* ಈರುಳ್ಳಿ

* ತೆಂಗಿನ ತುರಿ

* ಅರ್ಧ ಚಮಚ ಜೀರಿಗೆ ಬೀಜ

* ಒಂದು ಚಮಚ ಕೊತ್ತಂಬರಿ ಬೀಜ

* ಬೆಲ್ಲ

* ಘಾಟಿ ಮೆಣಸು

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಫ್ರಿಡ್ಜ್​​​​ನಲ್ಲಿ ಇಡುವ ಆಹಾರವನ್ನು ಎಷ್ಟು ಸಮಯದೊಳಗೆ ಸೇವನೆ ಮಾಡಬೇಕು ಗೊತ್ತಾ?

ಮಸಾಲೆ ನೀರು ದೋಸೆ ಮಾಡುವ ವಿಧಾನ

* ದೋಸೆ ಅಕ್ಕಿಯನ್ನು ನಾಲ್ಕರಿಂದ ಐದು ಘಂಟೆಗಳ ಕಾಲ ನೀರಿನಲ್ಲಿ ನೆನೆಸಿಟ್ಟುಕೊಳ್ಳಿ.

* ನೆನೆಸಿಟ್ಟ ಅಕ್ಕಿಯನ್ನು ಚೆನ್ನಾಗಿ ತೊಳೆದು ಮಿಕ್ಸಿ ಜಾರಿಗೆ ಹಾಕಿ, ಅದಕ್ಕೆ ಈರುಳ್ಳಿ, ತೆಂಗಿನಕಾಯಿ ತುರಿ, ಜೀರಿಗೆ, ಒಂದು ಚಮಚದಷ್ಟು ಕೊತ್ತಂಬರಿ ಬೀಜ, ಬೆಲ್ಲ, ಮೂರರಿಂದ ನಾಲ್ಕು ಘಾಟಿ ಮೆಣಸು ಹಾಗೂ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

* ನಂತರದಲ್ಲಿ ಈ ಹಿಟ್ಟಿಗೆ ಉಪ್ಪು ಹಾಗೂ ಬೇಕಿದ್ದರೆ ನೀರು ಸೇರಿಸಿಕೊಂಡು ಚೆನ್ನಾಗಿ ಕಲಸಿಕೊಳ್ಳಿ.

* ಬಿಸಿ ತವಾದ ಮೇಲೆ ದೋಸೆ ಹಿಟ್ಟು ಹಾಕಿ. ಅದನ್ನು ಒಂದು ಪ್ಲೇಟ್ ನಿಂದ ಮುಚ್ಚಿ ಮಧ್ಯಮ ಉರಿಯಲ್ಲಿ ಒಂದು ನಿಮಿಷ ಬೇಯಿಸಿದರೆ ಮಸಾಲೆ ನೀರು ದೋಸೆ ಸವಿಯಲು ಸಿದ್ಧ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ