AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ

ರಾತ್ರಿ ಮಲಗುವ ಮುಂಚೆ ನಾಳೆ ಬೆಳಗ್ಗೆ ಏನು ತಿಂಡಿ ಮಾಡೋದು ಎನ್ನುವ ಯೋಚನೆ ಎಲ್ಲಾ ಮಹಿಳೆಯರದ್ದು. ದೋಸೆ ಮಾಡಿದರೆ ಸಾಕಾಗುವುದಿಲ್ಲ, ಅದರ ಜೊತೆಗೆ ಚಟ್ನಿಯೋ ಸಾಂಬಾರೋ ನೆಚ್ಚಿ ಕೊಳ್ಳಲು ಇರಲೇಬೇಕು. ಆದರೆ ಕರಾವಳಿ ಶೈಲಿಯ ಮಸಾಲೆ ನೀರುದೋಸೆ ಮಾಡಿದರೆ ಚಟ್ನಿಯ ಅಗತ್ಯವೇ ಇಲ್ಲ. ಮನೆಯಲ್ಲಿರುವ ಕೆಲವೇ ಕೆಲವು ಐಟಂ ಬಳಸಿ ಮಾಡಬಹುದಾದ ಈ ದೋಸೆಯೂ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ
ಮಸಾಲೆ ನೀರುದೋಸೆ
ಸಾಯಿನಂದಾ
| Edited By: |

Updated on: Aug 17, 2024 | 3:08 PM

Share

ಕರಾವಳಿಯಲ್ಲಿ ಸಖತ್ ಫೇಮಸ್ ತಿಂಡಿ ಎಂದರೆ ನೀರುದೋಸೆ. ಆದರೆ ತೆಳ್ಳನೆಯ ಮಸಾಲೆ ದೋಸೆಯೂ ಕೂಡ ಇಲ್ಲಿ ಫೇಮಸ್. ಒಮ್ಮೆ ತಿಂದರೆ ಮತ್ತೆ ಮತ್ತೆ ತಿನ್ನಬೇಕೆನ್ನುವ ಈ ದೋಸೆಯನ್ನು ಮಸಾಲೆಯನ್ನು ಸೇರಿಸಿ ಮಾಡಬಹುದು. ಸಿಹಿ ಖಾರ ಮಿಶ್ರಿತ ಈ ದೋಸೆ ತೆಳ್ಳಗೆಯಿದ್ದು ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಮನೆಯಲ್ಲಿರುವ ಈ ಕೆಲವು ಕೆಲವು ಐಟಂಗಳಿದ್ದರೆ ಮಸಾಲೆ ನೀರುದೋಸೆ ರೆಡಿಯಾದ್ದಂತೆಯೇ.

ಮಸಾಲೆ ನೀರು ದೋಸೆ ಮಾಡಲು ಬೇಕಾಗುವ ಸಾಮಗ್ರಿಗಳು

* ದೋಸೆ ಅಕ್ಕಿ

* ಈರುಳ್ಳಿ

* ತೆಂಗಿನ ತುರಿ

* ಅರ್ಧ ಚಮಚ ಜೀರಿಗೆ ಬೀಜ

* ಒಂದು ಚಮಚ ಕೊತ್ತಂಬರಿ ಬೀಜ

* ಬೆಲ್ಲ

* ಘಾಟಿ ಮೆಣಸು

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಫ್ರಿಡ್ಜ್​​​​ನಲ್ಲಿ ಇಡುವ ಆಹಾರವನ್ನು ಎಷ್ಟು ಸಮಯದೊಳಗೆ ಸೇವನೆ ಮಾಡಬೇಕು ಗೊತ್ತಾ?

ಮಸಾಲೆ ನೀರು ದೋಸೆ ಮಾಡುವ ವಿಧಾನ

* ದೋಸೆ ಅಕ್ಕಿಯನ್ನು ನಾಲ್ಕರಿಂದ ಐದು ಘಂಟೆಗಳ ಕಾಲ ನೀರಿನಲ್ಲಿ ನೆನೆಸಿಟ್ಟುಕೊಳ್ಳಿ.

* ನೆನೆಸಿಟ್ಟ ಅಕ್ಕಿಯನ್ನು ಚೆನ್ನಾಗಿ ತೊಳೆದು ಮಿಕ್ಸಿ ಜಾರಿಗೆ ಹಾಕಿ, ಅದಕ್ಕೆ ಈರುಳ್ಳಿ, ತೆಂಗಿನಕಾಯಿ ತುರಿ, ಜೀರಿಗೆ, ಒಂದು ಚಮಚದಷ್ಟು ಕೊತ್ತಂಬರಿ ಬೀಜ, ಬೆಲ್ಲ, ಮೂರರಿಂದ ನಾಲ್ಕು ಘಾಟಿ ಮೆಣಸು ಹಾಗೂ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

* ನಂತರದಲ್ಲಿ ಈ ಹಿಟ್ಟಿಗೆ ಉಪ್ಪು ಹಾಗೂ ಬೇಕಿದ್ದರೆ ನೀರು ಸೇರಿಸಿಕೊಂಡು ಚೆನ್ನಾಗಿ ಕಲಸಿಕೊಳ್ಳಿ.

* ಬಿಸಿ ತವಾದ ಮೇಲೆ ದೋಸೆ ಹಿಟ್ಟು ಹಾಕಿ. ಅದನ್ನು ಒಂದು ಪ್ಲೇಟ್ ನಿಂದ ಮುಚ್ಚಿ ಮಧ್ಯಮ ಉರಿಯಲ್ಲಿ ಒಂದು ನಿಮಿಷ ಬೇಯಿಸಿದರೆ ಮಸಾಲೆ ನೀರು ದೋಸೆ ಸವಿಯಲು ಸಿದ್ಧ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ