AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ

ರಾತ್ರಿ ಮಲಗುವ ಮುಂಚೆ ನಾಳೆ ಬೆಳಗ್ಗೆ ಏನು ತಿಂಡಿ ಮಾಡೋದು ಎನ್ನುವ ಯೋಚನೆ ಎಲ್ಲಾ ಮಹಿಳೆಯರದ್ದು. ದೋಸೆ ಮಾಡಿದರೆ ಸಾಕಾಗುವುದಿಲ್ಲ, ಅದರ ಜೊತೆಗೆ ಚಟ್ನಿಯೋ ಸಾಂಬಾರೋ ನೆಚ್ಚಿ ಕೊಳ್ಳಲು ಇರಲೇಬೇಕು. ಆದರೆ ಕರಾವಳಿ ಶೈಲಿಯ ಮಸಾಲೆ ನೀರುದೋಸೆ ಮಾಡಿದರೆ ಚಟ್ನಿಯ ಅಗತ್ಯವೇ ಇಲ್ಲ. ಮನೆಯಲ್ಲಿರುವ ಕೆಲವೇ ಕೆಲವು ಐಟಂ ಬಳಸಿ ಮಾಡಬಹುದಾದ ಈ ದೋಸೆಯೂ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ
ಮಸಾಲೆ ನೀರುದೋಸೆ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 17, 2024 | 3:08 PM

Share

ಕರಾವಳಿಯಲ್ಲಿ ಸಖತ್ ಫೇಮಸ್ ತಿಂಡಿ ಎಂದರೆ ನೀರುದೋಸೆ. ಆದರೆ ತೆಳ್ಳನೆಯ ಮಸಾಲೆ ದೋಸೆಯೂ ಕೂಡ ಇಲ್ಲಿ ಫೇಮಸ್. ಒಮ್ಮೆ ತಿಂದರೆ ಮತ್ತೆ ಮತ್ತೆ ತಿನ್ನಬೇಕೆನ್ನುವ ಈ ದೋಸೆಯನ್ನು ಮಸಾಲೆಯನ್ನು ಸೇರಿಸಿ ಮಾಡಬಹುದು. ಸಿಹಿ ಖಾರ ಮಿಶ್ರಿತ ಈ ದೋಸೆ ತೆಳ್ಳಗೆಯಿದ್ದು ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಮನೆಯಲ್ಲಿರುವ ಈ ಕೆಲವು ಕೆಲವು ಐಟಂಗಳಿದ್ದರೆ ಮಸಾಲೆ ನೀರುದೋಸೆ ರೆಡಿಯಾದ್ದಂತೆಯೇ.

ಮಸಾಲೆ ನೀರು ದೋಸೆ ಮಾಡಲು ಬೇಕಾಗುವ ಸಾಮಗ್ರಿಗಳು

* ದೋಸೆ ಅಕ್ಕಿ

* ಈರುಳ್ಳಿ

* ತೆಂಗಿನ ತುರಿ

* ಅರ್ಧ ಚಮಚ ಜೀರಿಗೆ ಬೀಜ

* ಒಂದು ಚಮಚ ಕೊತ್ತಂಬರಿ ಬೀಜ

* ಬೆಲ್ಲ

* ಘಾಟಿ ಮೆಣಸು

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಫ್ರಿಡ್ಜ್​​​​ನಲ್ಲಿ ಇಡುವ ಆಹಾರವನ್ನು ಎಷ್ಟು ಸಮಯದೊಳಗೆ ಸೇವನೆ ಮಾಡಬೇಕು ಗೊತ್ತಾ?

ಮಸಾಲೆ ನೀರು ದೋಸೆ ಮಾಡುವ ವಿಧಾನ

* ದೋಸೆ ಅಕ್ಕಿಯನ್ನು ನಾಲ್ಕರಿಂದ ಐದು ಘಂಟೆಗಳ ಕಾಲ ನೀರಿನಲ್ಲಿ ನೆನೆಸಿಟ್ಟುಕೊಳ್ಳಿ.

* ನೆನೆಸಿಟ್ಟ ಅಕ್ಕಿಯನ್ನು ಚೆನ್ನಾಗಿ ತೊಳೆದು ಮಿಕ್ಸಿ ಜಾರಿಗೆ ಹಾಕಿ, ಅದಕ್ಕೆ ಈರುಳ್ಳಿ, ತೆಂಗಿನಕಾಯಿ ತುರಿ, ಜೀರಿಗೆ, ಒಂದು ಚಮಚದಷ್ಟು ಕೊತ್ತಂಬರಿ ಬೀಜ, ಬೆಲ್ಲ, ಮೂರರಿಂದ ನಾಲ್ಕು ಘಾಟಿ ಮೆಣಸು ಹಾಗೂ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

* ನಂತರದಲ್ಲಿ ಈ ಹಿಟ್ಟಿಗೆ ಉಪ್ಪು ಹಾಗೂ ಬೇಕಿದ್ದರೆ ನೀರು ಸೇರಿಸಿಕೊಂಡು ಚೆನ್ನಾಗಿ ಕಲಸಿಕೊಳ್ಳಿ.

* ಬಿಸಿ ತವಾದ ಮೇಲೆ ದೋಸೆ ಹಿಟ್ಟು ಹಾಕಿ. ಅದನ್ನು ಒಂದು ಪ್ಲೇಟ್ ನಿಂದ ಮುಚ್ಚಿ ಮಧ್ಯಮ ಉರಿಯಲ್ಲಿ ಒಂದು ನಿಮಿಷ ಬೇಯಿಸಿದರೆ ಮಸಾಲೆ ನೀರು ದೋಸೆ ಸವಿಯಲು ಸಿದ್ಧ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ