AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patrode : ಇದು ಕರಾವಳಿ ಸ್ಟೈಲ್​​ನ ಪತ್ರೊಡೆ, ಇದನ್ನು ಮಾಡುವುದು ತುಂಬಾ ಸುಲಭ

ಪತ್ರೊಡೆ ಹೆಸರು ಕೇಳಿದರೆ ಸಾಕು ಬಾಯಲ್ಲಿ ನೀರು ಬರುತ್ತದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ತಯಾರಿಸಲಾಗುವ ಖಾದ್ಯವಿದು. ಈ ಋತುವಿನಲ್ಲಿ ಒಮ್ಮೆಯಾದರೂ ಈ ರೆಸಿಪಿ ಮಾಡಿ ಸವಿಯದೇ ಇದ್ದರೆ ಇಲ್ಲಿನ ಜನರಿಗೆ ತಿಂದದ್ದು ಜೀರ್ಣವಾಗುವುದೇ ಇಲ್ಲ. ಕರಾವಳಿ ಸ್ಟೈಲ್ ನಲ್ಲಿ ರುಚಿಕರವಾದ ಪತ್ರೊಡೆ ರೆಸಿಪಿಯನ್ನು ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Patrode : ಇದು ಕರಾವಳಿ ಸ್ಟೈಲ್​​ನ ಪತ್ರೊಡೆ, ಇದನ್ನು ಮಾಡುವುದು ತುಂಬಾ ಸುಲಭ
ಪತ್ರೊಡೆ
ಸಾಯಿನಂದಾ
| Edited By: |

Updated on: Jul 09, 2024 | 12:19 PM

Share

ಮಳೆಗಾಲ ಆರಂಭವಾಯಿತೆಂದರೆ ಕರಾವಳಿ ಹಾಗೂ ಮಲೆನಾಡಿನಲ್ಲಿ ಮನೆಯ ಸುತ್ತಮುತ್ತಲು ಸಿಗುವ ಸೊಪ್ಪು ತರಕಾರಿಗಳಿಂದ ವಿಶೇಷ ಖಾದ್ಯವನ್ನು ಮಾಡಿ ಸವಿಯುತ್ತಾರೆ. ಈ ಸಮಯದಲ್ಲಿ ಕೆಸುವಿನ ಎಲೆಯ ವಿವಿಧ ಖಾದ್ಯಗಳು ಈ ಪ್ರಾಂತ್ಯದಲ್ಲಿ ಸಿಕ್ಕಾಪಟ್ಟೆ ಫೇಮಸ್. ಸುರಿಯುವ ಮಳೆಯ ನಡುವೆ ಪತ್ರೊಡೆ ಮಾಡಿದರೆ ಸವಿದರೆ ಬೇರೆ ಯಾವ ತಿನಿಸು ಇದಕ್ಕೆ ಸರಿಸಾಟಿಯಾಗುವುದಿಲ್ಲ. ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಈ ತಿನಿಸನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.

ಪತ್ರೊಡೆ ಮಾಡಲು ಬೇಕಾಗುವ ಸಾಮಾಗ್ರಿಗಳು

ಕೆಸುವಿನ ಎಲೆ, ಒಂದು ಚಮಚ ಜೀರಿಗೆ, ಮೂರು ಚಮಚ ಕೊತ್ತಂಬರಿ ಬೀಜ, ಒಂದು ಚಮಚ ಜೀರಿಗೆ, ಒಂದು ಚಿಟಿಕೆಯಷ್ಟು ಇಂಗು, ಒಂದು ಕಪ್ ಅಕ್ಕಿ, ಮುಕ್ಕಾಲು ಕಪ್ ತೊಗರಿಬೇಳೆ, ಅರ್ಧ ಕಪ್ ಕಡಲೆಬೇಳೆ, ಒಣಮೆಣಸು (ಘಾಟಿ ಮೆಣಸು), ಹುಣಸೆ ಹಣ್ಣು, ಬೆಲ್ಲ ಹಾಗೂ ರುಚಿಗೆ ತಕ್ಕಷ್ಟು ಉಪ್ಪು.

ಇದನ್ನೂ ಓದಿ; ನಿಧಾನಗೊಳ್ಳುತ್ತಿದೆ ಭೂಮಿಯ ಒಳಪದರದ ತಿರುಗುವಿಕೆಯ ವೇಗ, ಇದರಿಂದ ಏನು ಪರಿಣಾಮ? ಅಧ್ಯಯನ ಹೇಳಿದ್ದೇನು?

ಪತ್ರೊಡೆ ಮಾಡುವ ವಿಧಾನ

  • ಮೊದಲಿಗೆ ಅಕ್ಕಿ, ತೊಗರಿಬೇಳೆ, ಕಡಲೆಬೇಳೆ, ಜೀರಿಗೆ ಮತ್ತು ಕೊತ್ತಂಬರಿಯನ್ನು ಒಂದು ಪಾತ್ರೆಗೆ ಹಾಕಿ ನೀರಿನಲ್ಲಿ ಮೂರು ಗಂಟೆಗಳ ಕಾಲ ನೆನಸಿಟ್ಟು, ಆ ಬಳಿಕ ದೋಸೆ ಹಿಟ್ಟಿನ ಹದಕ್ಕೆ ರುಬ್ಬಿಕೊಳ್ಳಬೇಕು.
  • ಈಗಾಗಲೇ ನೀರಿನಲ್ಲಿ ನೆನೆಸಿಟ್ಟ ಹುಣಸೆಹಣ್ಣು, ಒಣಮೆಣಸು (ಘಾಟಿ ಮೆಣಸು) ಹಾಗೂ ಬೆಲ್ಲವನ್ನು ಚೆನ್ನಾಗಿ ರುಬ್ಬಿಕೊಳ್ಳಬೇಕು.
  • ಈಗಾಗಲೇ ರುಬ್ಬಿದ ಹಿಟ್ಟಿಗೆ ಈ ಮಿಶ್ರಣವನ್ನು ಸೇರಿಸಿಚೆನ್ನಾಗಿ ಬೆರೆಸಿಕೊಳ್ಳಬೇಕು. ಇದಕ್ಕೆ ಚಿಟಿಕೆಯಷ್ಟು ಇಂಗು ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಮಿಶ್ರಣ ಮಾಡಿಕೊಳ್ಳಿ.
  • ಈಗಾಗಲೇ ತೊಳೆದಿಟ್ಟ ಕೆಸುವಿನ ಎಲೆಗಳನ್ನು ಒಂದೊಂದಾಗಿ ತೆಗೆದುಕೊಂಡು ಎಲೆಯ ಮುಂಭಾಗ ಮತ್ತು ಹಿಂಭಾಗದಲ್ಲಿ ಈ ಹಿಟ್ಟಿನ ಮಿಶ್ರಣವನ್ನು ಹಚ್ಚಿಕೊಳ್ಳಿ.
  • ಐದಾರು ಎಲೆಗಳಿಗೆ ಹಚ್ಚಿದ ಬಳಿಕ, ದೊಡ್ಡ ಎಲೆಯ ಮೇಲೆ ಒಂದೊಂದಾಗಿ ಸಣ್ಣ ಎಲೆಗಳನ್ನು ಇಟ್ಟು, ವೃತ್ತಾಕಾರದಲ್ಲಿ ಸುತ್ತಿಕೊಳ್ಳಿ. ಹೀಗೆ ಎಲ್ಲಾ ಎಲೆಗಳಿಗೆ ಹಿಟ್ಟನ್ನು ಹಚ್ಚಿ ರೋಲ್ ಮಾಡಿ.
  • ನಂತರದಲ್ಲಿ ಇಡ್ಲಿ ಪಾತ್ರೆಯಲ್ಲಿ ಈ ರೋಲ್ ಗಳನ್ನು ಇಟ್ಟು ಹಬೆಯಲ್ಲಿ ಬೇಯಿಸಿಕೊಳ್ಳಬೇಕು.
  • ಬೆಂದ ಬಳಿಕ ಇದನ್ನು ವೃತ್ತಾಕಾರವಾಗಿ ಚಾಕುವಿನಿಂದ ಕತ್ತರಿಸಿಕೊಳ್ಳಿ. ಕಟ್ ಮಾಡಿದ ತುಂಡುಗಳನ್ನು ಬಾಣಲೆಗೆ ಎಣ್ಣೆ ಹಾಕಿ ಕರಿದರೆ ರುಚಿಕರವಾದ ಪತ್ರೊಡೆ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ