AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Carrot Ginger Soup Recipe: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸುತ್ತೆ ಈ ಕ್ಯಾರೆಟ್ ಶುಂಠಿ ಸೂಪ್

ಚಳಿಗಾಲದಲ್ಲಿ ತಂಪಾದ ವಾತಾವರಣವಿರುವ ಕಾರಣ ಶೀತ, ಕೆಮ್ಮು ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಸರ್ವೇ ಸಾಮಾನ್ಯ. ಹೀಗಾಗಿ ಈ ಋತುವಿನಲ್ಲಿ ಸೇವಿಸುವ ಆಹಾರದ ಕಡೆಗೂ ಹೆಚ್ಚು ಗಮನ ಕೊಡಬೇಕಾಗುತ್ತದೆ. ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಆರೋಗ್ಯ ಸಮಸ್ಯೆಯಿಂದ ಪಾರಾಗಲು ಕ್ಯಾರೆಟ್ ಶುಂಠಿ ಮಿಶ್ರಿತ ಆರೋಗ್ಯಕರ ಸೂಪ್ ತಯಾರಿಸಿ ಸೇವಿಸಿದರೆ ಉತ್ತಮ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ? ಎನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Carrot Ginger Soup Recipe: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸುತ್ತೆ ಈ ಕ್ಯಾರೆಟ್ ಶುಂಠಿ ಸೂಪ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 27, 2024 | 5:38 PM

Share

ಮೈಕೊರೆಯುವ ಚಳಿಯಲ್ಲಿ ಏನಾದರೂ ಬಿಸಿ ಬಿಸಿ ಆಹಾರವಿದ್ದರೆ ಬೇರೇನೂ ಬೇಕಿಲ್ಲ. ಈ ಋತುವಿನಲ್ಲಿ ಬಿಸಿ ಬಿಸಿ ಆಹಾರ ತಿನ್ನಲು ಪ್ರೇರೇಪಿಸುತ್ತಿದ್ದರೆ ಬೆಚ್ಚಗಿನ ಬಿಸಿ ಬಿಸಿ ಸೂಪ್ ಗಿಂತ ಉತ್ತಮವಾದ ಆಯ್ಕೆ ಮತ್ತೊಂದಿಲ್ಲ. ಅಡುಗೆ ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳನ್ನು ಬಳಸಿ ಸೂಪ್ ತಯಾರಿಸಿ ಸೇವಿಸಿದರೆ ದೇಹವು ಬೆಚ್ಚರಿಗಿರುವುದರೊಂದಿಗೆ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ಹಾಗಾದ್ರೆ ಮನೆಯಲ್ಲೇ ಮಾಡಬಹುದಾದ ಕ್ಯಾರೆಟ್ ಶುಂಠಿ ಸೂಪ್ ರೆಸಿಪಿಯೂ ಇಲ್ಲಿದೆ.

ಕ್ಯಾರೆಟ್ ಶುಂಠಿ ಸೂಪ್ ಮಾಡಲು ಬೇಕಾಗುವ ಸಾಮಗ್ರಿಗಳು

* ಮೂರು ಕ್ಯಾರೆಟ್

* ದೊಡ್ಡ ಗಾತ್ರದ ಶುಂಠಿ

* ಒಂದು ಕಪ್ ತರಕಾರಿಗಳು

* ಎರಡು ಈರುಳ್ಳಿ

* ಅರ್ಧ ಕಪ್ ಕಿತ್ತಳೆ ರಸ

* ಸ್ವಲ್ಪ ಕರಿಮೆಣಸಿನ ಪುಡಿ

* ಎರಡು ಚಮಚ ಅಡುಗೆ ಎಣ್ಣೆ

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಇವು ಗರ್ಭಾಶಯದ ರೋಗಗಳ ಆರಂಭಿಕ ಲಕ್ಷಣಗಳು

ಕ್ಯಾರೆಟ್ ಶುಂಠಿ ಸೂಪ್ ತಯಾರಿಸುವ ವಿಧಾನ

* ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿಯಾಗುತ್ತಿದ್ದಂತೆ ಕತ್ತರಿಸಿಟ್ಟ ಈರುಳ್ಳಿ ಮತ್ತು ಶುಂಠಿ ಹಾಕಿ ಬಣ್ಣ ಬದಲಾಗುವವರೆಗೂ ಹುರಿದುಕೊಳ್ಳಿ.

* ಇದಕ್ಕೆ ಕ್ಯಾರೆಟ್ ಹಾಕಿಕೊಳ್ಳಿ, ಅಗತ್ಯವಿದ್ದಷ್ಟು ನೀರು ಹಾಗೂ ರುಚಿಗೆ ತಕ್ಕ ಉಪ್ಪು ಹಾಕಿ ಬೇಯಲು ಬಿಡಿ.

* ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಿಕೊಳ್ಳಿ. ನಂತರದಲ್ಲಿ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಯಲು ಬಿಡಿ.

* ಆ ಬಳಿಕ ಈ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಬಿಡಿ. ಬೇಯಿಸಿಟ್ಟ ಮಿಶ್ರಣವನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ.

* ರುಬ್ಬಿದ ಮಿಶ್ರಣವನ್ನು ಮತ್ತೆ ಕುದಿಯಲು ಸ್ಟವ್ ಮೇಲೆ ಇಡಿ. ಕುದಿಯುತ್ತಿದ್ದಂತೆ ಇದಕ್ಕೆ ಕರಿಮೆಣಸಿನ ಪುಡಿ ಸೇರಿಸಿದರೆ ಕ್ಯಾರೆಟ್ ಶುಂಠಿ ಸೂಪ್ ಸವಿಯಲು ಸಿದ್ಧ.

* ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಕರವಾಗಿದ್ದು, ಇದರ ಸೇವನೆಯಿಂದ ಶೀತ ಹಾಗೂ ಕೆಮ್ಮಿನಂತಹ ಸಮಸ್ಯೆಯೂ ದೂರವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!